ರಶ್ಮಿಕಾ ವಿರುದ್ಧ ಯಶ್ ಅಭಿಮಾನಿಗಳು ಗರಂ; ರಶ್ಮಿಕಾ ಕ್ಷಮೆಯಾಚನೆ


Team Udayavani, Jun 26, 2017, 1:05 PM IST

rashmika.jpg

ಬೆಂಗಳೂರು:ಕಿರಿಕ್ ಪಾರ್ಟಿ ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಟ ಯಶ್ ಕುರಿತು ನೀಡಿರುವ ಅಭಿಪ್ರಾಯ ಯಶ್ ಅಭಿಮಾನಿಗಳನ್ನು ಕೆರಳಿಸಿದೆ. ಇದರಿಂದಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ರಶ್ಮಿಕಾ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ  ಅಭಿಮಾನಿಗಳ ಕೋಪವನ್ನು ತಣಿಸಲು ನಟ ಯಶ್ ಅವರು ಸ್ವತಃ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ ಹೇಳಿದ್ದೇನು?
ಇತ್ತೀಚೆಗೆ ಸಂದರ್ಶನವೊಂದರಲ್ಲಿ ರಶ್ಮಿಕಾ ಅವರಿಗೆ ನಿರೂಪಕರು ಕನ್ನಡದ ಯಾವ ನಟ ಮಿಸ್ಟರ್ ಶೋ ಆಫ್ ಅಂತ ನಿಮಗೆ ಅನಿಸುತ್ತದೆ ಎಂದು ಪ್ರಶ್ನೆ ಕೇಳಿದ್ದರು. ಆದರೆ ನಿರೂಪಕರು ಬಲವಂತ ಮಾಡಿದಾಗ ಕೊನೆಗೆ ಯಶ್ ಹೆಸರು ಹೇಳಿಬಿಟ್ಟಿದ್ದರು. ಇದರಿಂದ ಯಶ್ ಅಭಿಮಾನಿಗಳು ರಶ್ಮಿಕಾ ವಿರುದ್ಧ ಗರಂ ಆಗಿದ್ದು, ಯಶ್ ಬಗ್ಗೆ ಯಾರ ಸರ್ಟಿಫಿಕೆಟ್ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದರು.

ಯಶ್ ಪ್ರತಿಕ್ರಿಯೆ ಏನು?
ಎಲ್ಲರಿಗೂ ನಮಸ್ಕಾರ..
ಒಬ್ಬ ನಟನಾಗಿ ನಿಮ್ಮೆಲ್ಲರ ಪ್ರೀತಿ ಮತ್ತು ಅಭಿಮಾನವನ್ನು ಸಂಪಾದಿಸುವುದನ್ನೇ ಗುರಿಯಾಗಿಟ್ಟುಕೊಂಡು ಕೆಲಸ ಮಾಡುವ ನಾನು, ಕೆಲವೊಮ್ಮೆ ಎದುರಾಗುವ ಅನಗತ್ಯ ಎನಿಸುವ ವಿಷಯಗಳನ್ನು ನಿರ್ಲ್ಯಕ್ಷಿಸುವ ಸ್ವಭಾವವನ್ನು ರೂಢಿಸಿಕೊಂಡಿದ್ದೇನೆ. ಆದರೆ ನನ್ನನ್ನು ಪ್ರೀತಿಸುವ ನಿಮ್ಮ ಮನಸಿಗೆ ನೋವಾದಾಗ ಪ್ರತಿಕ್ರಿಯೆ ನೀಡದೆ ಇರುವುದು ನನ್ನಿಂದ ಸಾಧ್ಯವಿಲ್ಲ. ನಿಮ್ಮ ಅಭಿಮಾನ ಪ್ರೀತಿಗೆ ಬೆಲೆಕಟ್ಟಲಾಗುವುದಿಲ್ಲ, ಅದಕ್ಕೆ ನಾನೆಂದು ಚಿರಋಣಿ.
ರಶ್ಮಿಕಾ ಅವರು ವೈಯಕ್ತಿಕವಾಗಿ ನನಗೆ ಪರಿಚಿತರಲ್ಲ, ಇದುವರೆಗೂ ಭೇಟಿಯು ಮಾಡಿಲ್ಲ…ಮಾತು ಸಹ ಆಡಿಲ್ಲ.ಹಾಗೆಂದು ಅವರಿಗೆ ನನ್ನ ಬಗ್ಗೆ ಯಾವುದೇ ರೀತಿಯ ಆಭಿಪ್ರಾಯ ಇರಬಾರದೆಂದೇನಿಲ್ಲ. ಅವರ ಅಭಿಪ್ರಾಯ ಅವರದು, ಅದನ್ನು ಹೀಗಳೆಯುವ ಕೆಲಸ ಯಾರೂ ಮಾಡಬಾರದು. ಎಲ್ಲರ ಅಭಿಪ್ರಾಯವನ್ನು ಗೌರವಿಸೋಣ.
‘ಒಬ್ಬರ ಅಭಿಪ್ರಾಯ ಇನ್ನೊಬ್ಬರ ವ್ಯಕ್ತಿತ್ವವನ್ನು ನಿರ್ಧರಿಸುವುದಿಲ್ಲ’ ಈ ವಿಷಯ ಇಲ್ಲಿಗೆ ಬಿಟ್ಟುಬಿಡಿ, ಇಲ್ಲಿ ಚರ್ಚಿಸುವಂತದ್ದು ಏನೂ ಇಲ್ಲ! ಕೆಲವೇ ದಿನಗಳಲ್ಲಿ ”ಕೆ.ಜಿ.ಎಫ್” ಚಿತ್ರದ ಮತ್ತೊಂದು ಸ್ಟಿಲ್ ಬರಲಿದೆ. ಅಲ್ಲಿಯವರೆಗೆ ಈದ್ ಮುಬಾರಕ್.

ಕ್ಷಮೆಯಾಚಿಸಿದ ರಶ್ಮಿಕಾ:
ಖಾಸಗಿ ಟಿವಿ ಚಾನೆಲ್ ವೊಂದರ ಸಂದರ್ಶನವೊಂದರಲ್ಲಿ ನಟಿ ರಶ್ಮಿಕಾ ಮಂದಣ್ಣ ಸ್ಯಾಂಡಲ್ ವುಡ್ ಸ್ಟಾರ್ ನಟ ಯಶ್ ಪರ ವ್ಯಕ್ತಪಡಿಸಿದ ಅಭಿಪ್ರಾಯ ವಿವಾದಕ್ಕೆ ಕಾರಣವಾಗಿತ್ತು. ಯಶ್ ಅಭಿಮಾನಿಗಳು ರಶ್ಮಿಕಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಯಶ್ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡುವ ಮೂಲಕ ಅಭಿಮಾನಿಗಳು ಅಸಮಾಧಾನವ್ಯಕ್ತಪಡಿಸಬಾರದು ಎಂದು ಮನವಿ ಮಾಡಿಕೊಂಡಿದ್ದರು. ಏತನ್ಮಧ್ಯೆ ನಟಿ ರಶ್ಮಿಕಾ ಮಂದಣ್ಣ ಅವರು ನಟ ಯಶ್ ಅವರಲ್ಲಿ ಕ್ಷಮೆಯಾಚಿಸಿದ್ದಾರೆ. ಯಶ್ ಸರ್ ಬಗ್ಗೆ ಅಗೌರವ ತೋರುವುದು ನನ್ನ ಉದ್ದೇಶವಾಗಿರಲಿಲ್ಲ. ನನ್ನ ಅಭಿಪ್ರಾಯದಿಂದ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.