ಜನವರಿಗೆ ಇಂಡಿಯಾ ವರ್ಸಸ್‌ ಇಂಗ್ಲೆಂಡ್‌ ಸಿನಿ ಮ್ಯಾಚ್‌


Team Udayavani, Dec 12, 2019, 5:01 AM IST

sumalatha

ನಟಿ ಸುಮಲತಾ ಅಂಬರೀಶ್‌ ಕಳೆದೊಂದು ವರ್ಷದಿಂದ ಚಿತ್ರರಂಗಕ್ಕಿಂತ ಹೆಚ್ಚಾಗಿ ಸುದ್ದಿಯಾಗುತ್ತಿರುವುದು ರಾಜಕೀಯ ರಂಗದಲ್ಲಿ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆಯಾಗಿ ಆಯ್ಕೆಯಾದ ಅವರು ಸದ್ಯ ರಾಜಕೀಯ ರಂಗದಲ್ಲೇ ಬ್ಯುಸಿ. ಅದೇನೆ ಇರಲಿ, ತೆರೆಮೇಲೆ ಸುಮಲತಾ ಅವರನ್ನು ನೋಡಿ ತುಂಬ ಸಮಯವಾಯ್ತು, ಬಿಗ್‌ಸ್ಕ್ರೀನ್‌ನಲ್ಲಿ ಸುಮಲತಾ ಅವರನ್ನು ಮಿಸ್‌ ಮಾಡಿಕೊಳ್ಳುತ್ತಿದ್ದೇವೆ, ಸುಮಲತಾ ಮತ್ತೆ ಬಣ್ಣ ಹಚ್ಚುತ್ತಾರಾ? ಎನ್ನುತ್ತಿದ್ದ ಸಿನಿಪ್ರಿಯರ ಮುಂದೆ, ಶೀಘ್ರದಲ್ಲೇ ಸುಮಲತಾ ಹೊಸ ಪಾತ್ರದ ಮೂಲಕ ದರ್ಶನ ಕೊಡಲಿದ್ದಾರೆ.

ಹೌದು, ಸುಮಲತಾ ಸದ್ಯ ಅಭಿನಯಿಸಿರುವ “ಇಂಡಿಯಾ ವರ್ಸಸ್‌ ಇಂಗ್ಲೆಂಡ್‌’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ನಾಗತಿಹಳ್ಳಿ ಚಂದ್ರಶೇಖರ್‌ ನಿರ್ದೇಶನದ ಈ ಚಿತ್ರದ ಪ್ರಮೋಶನ್‌ ಕೆಲಸಗಳ ಜೋರಾಗಿವೆ. ಚಿತ್ರ ಜನವರಿ 24ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಲಂಡನ್‌ನಲ್ಲಿ ನೆಲೆಸಿರುವ ಕನ್ನಡ ಭಾಷೆ, ಸಂಸ್ಕೃತಿ ಬಗ್ಗೆ ಅಪಾರ ಅಭಿಮಾನ ಹೊಂದಿರುವ, ಜಾನಕಿ ಎಂಬ ಅನಿವಾಸಿ ಕನ್ನಡತಿ ಪಾತ್ರದಲ್ಲಿ ಸುಮಲತಾ ಕಾಣಿಸಿಕೊಳ್ಳುತ್ತಿದ್ದಾರೆ.

ಸುಮಲತಾ ಅವರ ಪಾತ್ರದ ಬಗ್ಗೆ ಮಾತನಾಡುವ ನಾಗತಿಹಳ್ಳಿ ಚಂದ್ರಶೇಖರ್‌, “ಅಂಬರೀಶ್‌ ಅವರು ಇದ್ದಾಗಲೇ ಸುಮಲತಾ ಅವರ ಪಾತ್ರದ ಚಿತ್ರೀಕರಣ ನಡೆಸಲಾಗಿತ್ತು. ಅಂಬರೀಶ್‌ ಕೂಡ ಈ ಪಾತ್ರವನ್ನು ಕೇಳಿ ಖುಷಿಪಟ್ಟಿದ್ದರು. ಲಂಡನ್‌ನಲ್ಲಿ ತುಂಬ ವರ್ಷಗಳಿಂದ ನೆಲೆಸಿರುವ ಜಾನಕಿ ಎಂಬ ಗೃಹಿಣಿ ಪಾತ್ರದಲ್ಲಿ ಸುಮಲತಾ ಅಭಿನಯಿಸಿದ್ದಾರೆ. ಲಂಡನ್‌ನಲ್ಲಿ ಕನ್ನಡ ಭಾಷೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ, ತಾಯ್ನಾಡಿನ ಮೇಲೆ ಮೋಹ ಇಟ್ಟುಕೊಂಡಿರುವಂಥ ಪಾತ್ರ ಅವರದ್ದು. ಚಿತ್ರದಲ್ಲಿ ಅವರ ಮೇಲೆ ಒಂದು ವಿಶೇಷವಾದ ಹಾಡಿದೆ.

ಅದನ್ನು ಸಿನಿಮಾದಲ್ಲೇ ನೋಡಬೇಕು. ಈ ಹಿಂದೆ ನಾನು ನಿರ್ದೇಶಿಸಿದ್ದ “ಪ್ಯಾರಿಸ್‌ ಪ್ರಣಯ’ ಸಿನಿಮಾದಲ್ಲೂ ಸುಮಲತಾ ನಟಿಸಿದ್ದರು. ಈ ಸಿನಿಮಾದಲ್ಲಿ ಎರಡನೇ ಬಾರಿ ಅವರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿತು. ಈ ಸಿನಿಮಾದ ಶೂಟಿಂಗ್‌ ನಡೆಯುವಾಗ ಸುಮಲತಾ ರಾಜಕೀಯಕ್ಕೆ ಬರುತ್ತಾರೆ, ಚುನಾವಣೆಗೆ ನಿಲ್ಲುತ್ತಾರೆ ಎನ್ನುವ ಸುಳಿವು ಇರಲಿಲ್ಲ. ಆನಂತರ ಎಲ್ಲವೂ ಅನಿರೀಕ್ಷಿತವಾಗಿ ನಡೆದು ಹೋಯಿತು. ಚುನಾವಣೆ ಮುಗಿದ ನಂತರ ಸುಮಲತಾ ತಮ್ಮ ಪಾತ್ರಕ್ಕೆ ಡಬ್ಬಿಂಗ್‌ ಮಾಡಿದರು. ಸಿನಿಮಾದಲ್ಲಿ ಅವರ ಪಾತ್ರ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎನ್ನುತ್ತಾರೆ.

ವಿತರಣೆಯತ್ತ ಮೇಷ್ಟ್ರು ಚಿತ್ತ: ಇಲ್ಲಿಯವರೆಗೆ ನಿರ್ದೇಶಕನಾಗಿ, ನಿರ್ಮಾಪಕನಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಾಗತಿಹಳ್ಳಿ ಚಂದ್ರಶೇಖರ್‌, “ಇಂಡಿಯಾ ವರ್ಸಸ್‌ ಇಂಗ್ಲೆಂಡ್‌’ ಚಿತ್ರದ ಮೂಲಕ ವಿತರಕರಾಗುತ್ತಿದ್ದಾರೆ. ಆ ಬಗ್ಗೆ ಮಾತನಾಡುವ ನಾಗತಿಹಳ್ಳಿ, “ಒಬ್ಬ ನಿರ್ದೇಶಕ, ನಿರ್ಮಾಪಕನಿಗೆ ತನ್ನ ಸಿನಿಮಾ ತನ್ನ ಮಗುವಿದ್ದಂತೆ. ಅದನ್ನು ಸರಿಯಾಗಿ ಪೋಷಿಸಿ, ಪ್ರೇಕ್ಷಕರ ಕೈಗಿಡುವ ಹೊಣೆಗಾರಿಕೆ ಅವರ ಮೇಲಿರುತ್ತದೆ.

ಸದ್ಯ ನನ್ನ ಸಿನಿಮಾವನ್ನೂ ಸರಿಯಾಗಿ ಪ್ರೇಕ್ಷಕರಿಗೆ ತಲುಪಿಸಬೇಕಾದ ಹೊಣೆಗಾರಿಕೆ, ಅನಿವಾರ್ಯತೆ ಎಲ್ಲವೂ ನನ್ನ ಮೇಲಿರುವುದರಿಂದ, ಈ ಸಿನಿಮಾವನ್ನು ನಾವೇ ವಿತರಣೆ ಮಾಡೋಣ ಎಂಬ ನಿರ್ಧಾರಕ್ಕೆ ಬರಬೇಕಾಯ್ತು. ಇದು ಯಾರ ವಿರುದ್ದವೂ ಸಮರ ಮಾಡಲು, ಅಥವಾ ಜಿದ್ದಿಗಾಗಿ ಮಾಡಿದ ನಿರ್ಧಾರವಲ್ಲ. ಚಿತ್ರರಂಗದಲ್ಲಿ ಒಳ್ಳೆಯ ಸಿನಿಮಾಗಳಿಗೆ ಥಿಯೇಟರ್‌ ಸಿಗುತ್ತಿಲ್ಲ ಎಂದು ದೂರುವ ಬದಲು, ನಾವೇ ಏನಾದ್ರೂ ಪರಿಹಾರ ಕಂಡುಕೊಳ್ಳಬೇಕು ಎಂಬ ಉದ್ದೇಶದಿಂದ ವಿತರಣೆಗೆ ಮುಂದಾಗುತ್ತಿದ್ದೇವೆ. ಸದ್ಯಕ್ಕೆ ನಮ್ಮ ಸಿನಿಮಾವನ್ನು ಭಾರತದಾದ್ಯಂತ ಮತ್ತು ಭಾರತದ ಹೊರಗೆ ಏಕಕಾಲಕ್ಕೆ ಬಿಡುಗಡೆ ಮಾಡುವ ತಯಾರಿ ನಡೆದಿದೆ.

ಮುಂದೆ ಬೇರೆ ಚಿತ್ರಗಳನ್ನೂ ಇದೇ ರೀತಿ ವಿತರಣೆ ಮಾಡಬೇಕಾ ಎಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಜ. 24ರಂದು “ಇಂಡಿಯಾ ವರ್ಸಸ್‌ ಇಂಗ್ಲೆಂಡ್‌’ ಕನ್ನಡ ಸಬ್‌ ಟೈಟಲ್‌ ಜೊತೆ ಭಾರತದ ಬಹುತೇಕ ಎಲ್ಲಾ ಮೆಟ್ರೋ ನಗರಗಳಲ್ಲಿ ಬಿಡುಗಡೆಯಾಗಲಿದೆ. ಜೊತೆಗೆ ಅಮೆರಿಕಾ, ಕೆನಡಾ, ಆಫ್ರಿಕಾ, ಅರಬ್‌, ಆಸ್ಟ್ರೇಲಿಯಾ ಸೇರಿ ಇತರೆಡೆ ಕನ್ನಡಿಗರು ಹೆಚ್ಚಾಗಿರುವ ದೇಶಗಳಲ್ಲಿ ಚಿತ್ರ ಬಿಡುಗಡೆಯ ತಯಾರಿ ನಡೆಯುತ್ತಿದೆ ಎಂಬುದು ಮೇಷ್ಟ್ರು ಮಾತು.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.