ಇಂಡಿಯನ್‌ ಸಿನಿಮಾ!


Team Udayavani, Apr 11, 2018, 11:22 AM IST

Indian-Cinema.jpg

ಸಿನಿಮಾ ಕಲಾವಿದರು ಮತ್ತು ತಂತ್ರಜ್ಞರ ಕುರಿತು ಈಗಾಗಲೇ ಹಲವು ಸಿನಿಮಾಗಳು ಬಂದಿವೆ. ಆದರೆ, ಚಿತ್ರರಂಗ ನಡೆದು ಬಂದ ಹಾದಿಯ ಬಗ್ಗೆ ಯಾರೊಬ್ಬರೂ ಚಿತ್ರ ಮಾಡುವ ಪ್ರಯತ್ನ ಮಾಡಿರಲಿಲ್ಲ. ಆ ಪ್ರಯತ್ನವನ್ನು ಆಟೋ ರಾಜ ಮಾಡುತ್ತಿದ್ದಾರೆ. ಆಟೋ ಓಡಿಸುತ್ತಿದ್ದ ಅವರು, ಈಗ ಚಿತ್ರದಲ್ಲಿ ಚಿತ್ರರಂಗ ನಡೆದು ಬಂದ ಹಾದಿಯನ್ನು ಸೆರೆಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ.

ಬರೀ ಕನ್ನಡವಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದ ಇತಿಹಾಸವನ್ನೇ ಅವರು ತೋರಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಈಗಾಗಲೇ “ಇಂಡಿಯನ್‌ ಸಿನಿಮಾ’ ಎಂಬ ಚಿತ್ರವನ್ನು ಅವರು ಸದ್ದಿಲ್ಲದೆ ಶುರು ಮಾಡಿದ್ದಾರೆ. ಅಲ್ಲಾ ಸ್ವಾಮೀ, ನೂರು ವರ್ಷದ ಇತಿಹಾಸವಿರುವ ಭಾರತೀಯ ಚಿತ್ರರಂಗದ ಬಗ್ಗೆ ಎರಡೂವರೆ ಗಂಟೆಯಲ್ಲಿ ಹೇಳುವುದಕ್ಕೆ ಸಾಧ್ಯವಾ? ಹಾಗೆ ಹೇಳಿದರೂ ಅದು ಸಾಕ್ಷ್ಯಚಿತ್ರವಾದಂತಾಗುವುದಿಲ್ಲವಾ?

ಮುಂತಾದ ಹಲವು ಪ್ರಶ್ನೆಗಳು ಬರಬಹುದು. ಆಟೋ ಶಿವು ಹೇಳುವಂತೆ, ಅವರು ಈ ಚಿತ್ರವನ್ನು ಐದು ಭಾಗಗಳಲ್ಲಿ ತೋರಿಸುತ್ತಾರಂತೆ. ಮೊದಲ ಭಾಗದಲ್ಲಿ ಭಾರತೀಯ ಚಿತ್ರರಂಗದ 100 ವರ್ಷಗಳ ಇತಿಹಾಸ ಹೇಳಿದರೆ, ಮಿಕ್ಕ ಭಾಗಗಳಲ್ಲಿ ಒಂದೊಂದು ಭಾಷೆಯ ಚಿತ್ರರಂಗದ ಬಗ್ಗೆ ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ. ಅಷ್ಟೇ ಅಲ್ಲ, ಒಂದೊಂದು ಭಾಷೆಯ ಚಿತ್ರದಲ್ಲೂ, ಆಯಾ ಭಾಷೆಯ ಸೂಪರ್‌ಸ್ಟಾರ್‌ ಕುಟುಂಬದವರು ಇರುತ್ತಾರಂತೆ.

ಇದೆಲ್ಲಾ ಸಾಧ್ಯವಾ ಎಂದರೆ, ಖಂಡಿತಾ ಸಾಧ್ಯ ಎಂಬ ಉತ್ತರ ಶಿವು ಅವರಿಂದ ಬರುತ್ತದೆ. ಅವರು ಇದಕ್ಕೂ ಮುನ್ನ “ಬಾಹುಲಿಗಳು’ ಎಂಬ ಚಿತ್ರ ಪ್ರಾರಂಭಿಸಿದ್ದವರು. ಈ ಮಧ್ಯೆ ಈ ಚಿತ್ರದ ಐಡಿಯಾ ಹೊಳೆದು, ಇದನ್ನು ಮುಗಿಸಿ, ಆ ನಂತರ ಆ ಚಿತ್ರವನ್ನು ಮಾಡುವ ಯೋಚನೆಯಲ್ಲಿದ್ದಾರೆ. ಈ ಚಿತ್ರದಲ್ಲಿ ಹಿರಿಯ ನಟರಾದ ರಾಜೇಶ್‌, ಗಿರಿಜಾ ಲೋಕೇಶ್‌, ಸಿಹಿಕಹಿ ಚಂದ್ರು, ಜಯಲಕ್ಷ್ಮೀ ಮುಂತಾದವರು ನಟಿಸುತ್ತಿದ್ದಾರೆ. ನಟ-ನಿರ್ದೇಶಕ ಸಂದೀಪ್‌ ಮಲಾನಿ ಈ ಚಿತ್ರದಲ್ಲಿ ಫಿಲ್ಮ್ ಇನ್‌ಸ್ಟಿಟ್ಯೂಟ್‌ವೊಂದನ್ನು ನಡೆಸುತ್ತಿರುತ್ತಾರಂತೆ.

ಅಲ್ಲಿನ ವಿದ್ಯಾರ್ಥಿಗಳಿಗೆ ಅವರು ಭಾರತೀಯ ಸಿನಿಮಾ ಬಗ್ಗೆ ಪಾಠ ಮಾಡುವುದೇ ಕಥೆಯಂತೆ. ಆ ಸಂದರ್ಭದಲ್ಲಿ ಚಿತ್ರರಂಗ ನಡೆದು ಬಂದ ಹಾದಿಯನ್ನು ತೋರಿಸಲಾಗುತ್ತದಂತೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು ಒಂದು ಚಿತ್ರರಂಗ ನಡೆದು ಬಂದ ದಾರಿಯನ್ನು ಬಿಂಬಿಸಿದರೆ, ಇನ್ನೊಂದು ಹಾಡನ್ನು ನಟಿ ಶ್ರೀದೇವಿಗೆ ಅರ್ಪಿಸಲಾಗುತ್ತದಂತೆ. ಆ ಹಾಡು, ಶ್ರೀದೇವಿ ಅಭಿನಯದ ಹಲವು ಹಾಡುಗಳ ಕೊಲಾಜ್‌ ಆಗಲಿದೆಯಂತೆ. ಚಿತ್ರದ ಒಂದು ಹಾಡನ್ನು ಕಾರ್ತಿಕ್‌ ವೆಂಕಟೇಶ್‌ ಸಂಯೋಜಿಸುತ್ತಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.