ತಾರೆಯರ ಒಗ್ಗಟ್ಟಿಗೆ ಅಭಿಮಾನದ ಒತ್ತಾಯ
Team Udayavani, Nov 3, 2021, 8:57 AM IST
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಠಾತ್ ಸಾವು ಎಲ್ಲರಲ್ಲೂ ದಿಗ್ಭ್ರಮೆ ಮೂಡಿಸಿದೆ. ಇರುವಷ್ಟು ದಿನ ಯಾವ ಜಗಳವಿಲ್ಲದೆ ಒಗ್ಗಟ್ಟಿನಿಂದ ಇರೋಣ, ಈ ಸ್ಟಾರ್ವಾರ್, ಫ್ಯಾನ್ವಾರ್ ಎಲ್ಲ ಪಕ್ಕಕ್ಕಿಟ್ಟು. ಜೀವಿಸೋಣ ಎಂಬ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಕನ್ನಡ ಚಲನಚಿತ್ರ ಮಂಡಳಿ ಎಲ್ಲ ತಾರೆಯರ ಅಭಿ ಮಾನಿಗಳು ಒಂದಾಗಿದ್ದಾರೆ. ಸದಾ ಸ್ಟಾರ್ವಾರ್, ಫ್ಯಾನ್ ವಾರ್ಗಳಲ್ಲಿ ತೊಡಗಿದ್ದವರು ಸಾಮಾಜಿಕ ಜಾಲತಾಣ ದಲ್ಲಿ ಕಿತ್ತಾಟ ನಡೆಸಿದ್ದವರು ನಾವೇಲ್ಲ ಒಂದೇ ಎಂಬ ಮಂತ್ರ ಜಪಿಸುತ್ತಿದ್ದಾರೆ.ಕನ್ನಡದ ಹಿರಿಯ ನಟ ನವರಸ ನಾಯಕ ಜಗ್ಗೇಶ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಎಲ್ಲ ತಾರೆಯರು ಒಂದಾಗಿರುವ ಚಿತ್ರಗಳನ್ನು ಹಂಚಿಕೊಂಡು, ಈ ಭಾವ ನನ್ನ ಕಣ್ಣಲ್ಲಿ ಆನಂದಭಾಷ್ಪ ತರಿಸಿತು. ಮಾನ್ಯರೆ ನಾವೆಲ್ಲಾ ಶಾರದೆಯ ಮಕ್ಕಳು ಚಿತ್ರರಂಗ ನಮ್ಮ ಮನೆ! ಕನ್ನಡಿಗರು ನಮ್ಮ ಬಂಧುಗಳು! ನಮ್ಮ ಈ ಒಗ್ಗಟ್ಟು ರಾಜಣ್ಣನ ಕಾಲದಲ್ಲಿ ಇತ್ತು! ಮತ್ತೆ ಬರೋದಿಲ್ಲವೆ ಎಂಬ ಕೊರಗು ಕಾಡುತ್ತಿತ್ತು! ಈಗ ಇದನ್ನ ನೋಡಿ ಹಾಲುಜೇನು ಸವಿದಂತೆ ಆಯಿತು ಎಂದು ಬರೆದುಕೊಂಡಿದ್ದಾರೆ.
ಅಭಿಮಾನಿಗಳ ಈ ನಡೆಗೆ ಜಗ್ಗೇಶ್ ಅವರಿಗೆ ಸಾಥ್ ನೀಡಿದ್ದಾರೆ. ಅಪ್ಪು, ಕಿಚ್ಚ, ದಚ್ಚು, ಗಣಿ, ಶಿವಣ್ಣ ಹೀಗೆ ಕನ್ನಡದ ಎಲ್ಲಾ ತಾರೆಯರ ಅಭಿಮಾನಿಗಳು, ಫ್ಯಾನ್ Õವಾರ್ ಬೇಡ್ವೇ ಬೇಡ ಅನ್ನೋ ನಿರ್ಧಾರಕ್ಕೆ ಬಂದಿದ್ದಾರೆ. ಜೇನಿನ ಗೂಡಿನಂತೆ ಇರೋಣ ಎಂದು ತಿಳಿಸಿದ್ದಾರೆ.
ಈಭಾವ ನನ್ನಕಣ್ಣಲ್ಲಿ ಆನಂದಭಾಷ್ಪ ತರಿಸಿತು!
ಮಾನ್ಯರೆ ನಾವೆಲ್ಲಾ ಶಾರದೆಯ ಮಕ್ಕಳು ಚಿತ್ರರಂಗ ನಮ್ಮ ಮನೆ!
ಕನ್ನಡಿಗರು ನಮ್ಮ ಬಂಧುಗಳು!
ನಮ್ಮ ಈಒಗ್ಗಟ್ಟು ರಾಜಣ್ಣನ ಕಾಲದಲ್ಲಿ ಇತ್ತು!ಮತ್ತೆ ಬರೋದಿಲ್ಲವೆ ಎಂಬ ಕೊರಗು ಕಾಡುತ್ತಿತ್ತು!ಈಗ ಇದನ್ನ ನೋಡಿ ಹಾಲುಜೇನು ಸವಿದಂತೆ ಆಯಿತು!ಈಒಗ್ಗಟ್ಟಿನ ಮಂತ್ರ ಯಾವ ಅಡೆತಡೆ ಇಲ್ಲದೆ ಮುಂದುವರಿಯಲಿlove all pic.twitter.com/FC4WM7wQ0r— ನವರಸನಾಯಕ ಜಗ್ಗೇಶ್ (@Jaggesh2) November 2, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು