ಜ್ಞಾನಂಗೆ ಅಂತಾರಾಷ್ಟ್ರೀಯ ಮನ್ನಣೆ

ಬುದ್ಧಿಮಾಂದ್ಯ ಮಕ್ಕಳ ಪ್ರಪಂಚದ ಸುತ್ತ

Team Udayavani, Jul 7, 2019, 3:00 AM IST

Gnanam

ಕನ್ನಡದಲ್ಲಿ ಈಗಾಗಲೇ ಬುದ್ಧಿಮಾಂದ್ಯ ಮಕ್ಕಳ ಕುರಿತು ಸಿನಿಮಾಗಳು ಬಂದಿವೆ. ಆದರೆ, ಇಲ್ಲೊಂದು ಚಿತ್ರ ಅಂತಾರಾಷ್ಟ್ರೀಯ ಮಟ್ಟದ ಚಿತ್ರೋತ್ಸವದಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ ಹನ್ನೊಂದು ಪ್ರಶಸ್ತಿ ಪಡೆದು ಮೆಚ್ಚುಗೆ ಗಳಿಸಿದೆ. ಅಂದಹಾಗೆ, ಆ ಚಿತ್ರದ ಹೆಸರು “ಜ್ಞಾನಂ’. ಇದೊಂದು ಹೊಸತನ ಇರುವ ಚಿತ್ರ. ವರದರಾಜ್‌ ವೆಂಕಟಸ್ವಾಮಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ತಮ್ಮ ಮನೆಯ ಪಕ್ಕದಲ್ಲಿರುವ ಬುದ್ದಿಮಾಂದ್ಯ ಮಗುವೊಂದರ ಚಲನವಲನ ನೋಡಿ, ಅದರ ಪ್ರೇರಣೆಯಿಂದ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದು ಮತ್ತು ಸಂಕಲನವನ್ನು ಮಾಡಿ ನಿರ್ದೇಶಿಸಿದ್ದಾರೆ. ಅವರ ಈ ಚಿತ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಹಾಗಾದರೆ, ಚಿತ್ರದ ಕಥೆ ಏನು? ಈ ಕುರಿತು ಹೇಳುವ ನಿರ್ದೇಶಕರು, “ಈ ಚಿತ್ರದಲ್ಲಿ ಸಾಕಷ್ಟು ವಿಶೇಷತೆಗಳಿವೆ.

ಕಥೆ ಕುರಿತು ಹೇಳುವುದಾದರೆ, ಒಂದೇ ದಿನ ಹುಟ್ಟಿದ ಇಬ್ಬರು ಮಕ್ಕಳಲ್ಲಿ ಒಬ್ಬ ಬುದ್ದಿವಂತ. ಮತ್ತೂಬ್ಬ ಬುದ್ದಿಮಾಂದ್ಯ. ಇಂತಹ ಖಾಯಿಲೆಗೆ ತುತ್ತಾಗಿರುವ ಮಕ್ಕಳ ಯೋಚನೆ, ಆಲೋಚನೆಗಳು, ಅವರ ಪ್ರಪಂಚ, ಶಕ್ತಿ ಹೇಗಿದೆ ಅನ್ನುವುದನ್ನು ತೋರಿಸುವ ಪ್ರಯತ್ನವಿದು. ಇಂತಹ ಗುಣವಿರುವ ಪಾತ್ರದಲ್ಲಿ ಮಾಸ್ಟರ್‌ ಧ್ಯಾನ್‌.

ಇದೇ ರೀತಿ ಮಕ್ಕಳು ಇರುವ ಸ್ಥಳಕ್ಕೆ ಭೇಟಿ ನೀಡಿ ಅವರ ಚಲನವಲನಗಳನ್ನು ಕಂಡು ನಟಿಸಿದ್ದಾನೆ. ಇನ್ನು, ಬುದ್ಧಿವಂತ ಹುಡುಗನಾಗಿ ಲೋಹಿತ್‌ ಐದು ಪುಟದ ಸಂಭಾಷಣೆಯನ್ನು ಒಂದೇ ಟೇಕ್‌ಗೆ ಓಕೆ ಮಾಡುವ ಮೂಲಕ ಮೆಚ್ಚುಗೆ ಪಡೆದಿದ್ದಾನೆ’ ಎಂಬುದು ನಿರ್ದೇಶಕರ ಮಾತು. ಬಹಳ ದಿನಗಳ ಬಳಿಕ ಹಿರಿಯ ಕಲಾವಿದೆ ಶೈಲಶ್ರೀ ಚಿತ್ರದಲ್ಲಿ ನಟಿಸಿದ್ದಾರೆ.

ಅವರಿಲ್ಲಿ ಮಕ್ಕಳು ಎಷ್ಟೇ ಪ್ರೀತಿ ತೋರಿಸಿದರೂ, ಅವರನ್ನು ನಿರ್ಲಕ್ಷಿಸುವ ಪಾತ್ರದಲ್ಲಿ ಶೈಲಶ್ರೀ ಕಾಣಿಸಿಕೊಂಡಿದ್ದಾರಂತೆ. ಉಳಿದಂತೆ ಸಿ.ವೇಣು ಭಾರದ್ವಾಜ್‌, ರಾಧಿಕಾ ಶೆಟ್ಟಿ, ಸಂತೋಷ್‌, ಜ್ಯೋತಿ ಮುರೂರು, ನವ್ಯಾ, ಕುಶಾಲ್‌ ನಾರಾಯಣ್‌ ಸೇರಿದಂತೆ ಹಲವರು ನಟಿಸಿದ್ದಾರೆ. ಇತ್ತೀಚೆಗೆ ಲಹರಿ ಆಡಿಯೋ ಸಂಸ್ಥೆ ಮೂಲಕ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು.

ಈ ವೇಳೆ ಲಹರಿ ವೇಲು ಮಾತನಾಡಿ, “ಬುದ್ಧಿಮಾಂದ್ಯ ಮಕ್ಕಳು, ನಿಜವಾಗಿಯೂ ಬುದ್ಧಿವಂತರು. ಅವರು ದೇವರ ಮಕ್ಕಳು’ ಎಂದರು. ರೋಹಿತ್‌ ಸೋವರ್‌ ಸಂಗೀತವಿದ್ದು, ಒಂದು ಹಾಡಿಗೆ ಧ್ವನಿಯಾಗಿದ್ದಾರೆ. ಉಳಿದ ಹಾಡುಗಳನ್ನು ಸ್ಪರ್ಶ ಹಾಡಿದ್ದಾರೆ. ಸಿ.ವೇಣು ಭಾರದ್ವಾಜ್‌ ಮತ್ತು ಸಿ.ರಾಜ್‌ಭಾರದ್ವಾಜ್‌ ನಿರ್ಮಾಣ ಮಾಡಿರುವ “ಜ್ಞಾನಂ’. ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸಾದ್ಯತೆ ಇದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.