ʼಟಾಕ್ಸಿಕ್ʼ ಅಪ್ಡೇಟ್ಗಾಗಿ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?
Team Udayavani, May 5, 2024, 1:19 PM IST
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ʼಕೆಜಿಎಫ್ʼ ಬಳಿಕ ಕಾಣಿಸಿಕೊಳ್ಳುತ್ತಿರುವ ಪ್ಯಾನ್ ಇಂಡಿಯಾ ʼಟಾಕ್ಸಿಕ್ʼ ಬಗ್ಗೆ ದಿನ ಕಳೆದಂತೆ ಕುತೂಹಲ ಹೆಚ್ಚಾಗುತ್ತಿದೆ. ಸಿನಿಮಾದ ಚಿತ್ರೀಕರಣ ಶೀಘ್ರದಲ್ಲಿ ಶುರುವಾಗುವ ಸಾಧ್ಯತೆಯಿದೆ.
ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʼಟಾಕ್ಸಿಕ್ʼ ಸಿನಿಮಾ ದೊಡ್ಡ ಬಜೆಟ್ನಲ್ಲಿ ಕೆವಿಎನ್ ಪ್ರೊಡಕ್ಷನ್ಸ್ ಮಾನ್ಸ್ಟರ್ ಮೈಂಡ್ಸ್ ಬ್ಯಾನರ್ನಲ್ಲಿ ನಿರ್ಮಾಣವಾಗಲಿದೆ. ಅಂದಾಜಿನ ಪ್ರಕಾರ 180 ಕೋಟಿ ಬಜೆಟ್ನಲ್ಲಿ ಸಿನಿಮಾ ನಿರ್ಮಾಣವಾಗಲಿದೆ ಎನ್ನಲಾಗುತ್ತಿದೆ.
ಈಗಾಗಲೇ ಸಿನಿಮಾದ ಚಿತ್ರೀಕರಣಕ್ಕೆ ಭರ್ಜರಿ ತಯಾರಿ ನಡೆಸಲಾಗಿದೆ. ಬೆಂಗಳೂರಿನ ಹೆಚ್ಎಂಟಿ ಫ್ಯಾಕ್ಟರಿಯಲ್ಲಿ ಚಿತ್ರೀಕರಣಕ್ಕಾಗಿ ಅದ್ಧೂರಿ ಸೆಟ್ ನಿರ್ಮಿಸಲಾಗಿದೆ. 70 ದಶಕದ ಕಥೆಯೊಂದು ಸಿನಿಮಾದಲ್ಲಿರಲಿದ್ದು, ಆ ಕಾಲಕ್ಕೆ ಹೊಂದಿಕೆಯಾಗುವ ಪಟ್ಟಣವನ್ನು ಸೆಟ್ ಆಗಿ ಸಿದ್ಧ ಪಡಿಸಲಾಗಿದೆ ಎನ್ನಲಾಗಿದೆ. ಇನ್ನುಳಿದಂತೆ ಶ್ರೀಲಂಕಾದಲ್ಲೂ ಸಿನಿಮಾ ಚಿತ್ರೀಕರಣಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ರಾಕಿಂಗ್ ಸ್ಟಾರ್ ಯಶ್ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಪಾರ ಫಾಲೋವರ್ಸ್ ಗಳಿದ್ದಾರೆ. ಸಿನಿಮಾದ ಬಗ್ಗೆ ಆಗಲಿ ಅಥವಾ ವೈಯಕ್ತಿಕವಾಗಿ ಕುಟುಂಬದ ಜೊತೆಗಿನ ಫೋಟೋವನ್ನಗಾಲಿ ಯಶ್ ಸೋಶಿಯಲ್ ಮೀಡಿಯಾದಲ್ಲಿ ಅಪರೂಪಕ್ಕೊಮ್ಮೆ ಮಾತ್ರ ಹಂಚಿಕೊಳ್ಳುತ್ತಾರೆ.
ಯಶ್ ಅವರ ಅಭಿಮಾನಿಗಳು ʼಟಾಕ್ಸಿಕ್ʼ ಅಪ್ಡೇಟ್ ಗಾಗಿ ಕಾಯುತ್ತಿದ್ದಾರೆ. ಈ ನಡುವೆ ಯಶ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಫ್ಯಾನ್ಸ್ ಗಳಲ್ಲಿ ಒಂದು ಪ್ರಶ್ನೆಯೊಂದನ್ನು ಕೇಳಿದ್ದಾರೆ. “ಸೋಶಿಯಲ್ ಮೀಡಿಯಾದಲ್ಲಿ ನಾನು ಹೆಚ್ಚು ಪೋಸ್ಟ್ ಗಳನ್ನು ಮಾಡಬೇಕಾ?” ಎಂದು ಯಶ್ ಇನ್ಸ್ಟಾದಲ್ಲಿ ಯೆಸ್/ ನೋ ಪ್ರಶ್ನೆಯನ್ನು ಕೇಳಿದ್ದಾರೆ. ಇದಕ್ಕೆ 94% ಜನ ಯೆಸ್ ಎಂದು ಉತ್ತರಿಸಿದ್ದಾರೆ.
ಯಶ್ ಈ ರೀತಿ ಪೋಸ್ಟ್ ಮಾಡಿರುವುದು ಮುಂದಿನ ದಿನಗಳಲ್ಲಿ ʼಟಾಕ್ಸಿಕ್ʼ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಎಂದು ಅವರ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಮುಂದಿನ ದಿನದಲ್ಲಿ ಯಶ್ ಫ್ಯಾನ್ಸ್ ಗಳ ಉತ್ತರದಂತೆ ಹೆಚ್ಚು ಪೋಸ್ಟ್ ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುತ್ತಾರಾ? ಎನ್ನುವುದನ್ನು ಕಾದು ನೋಡಬೇಕಿದೆ.
ಇತ್ತ ʼಟಾಕ್ಸಿಕ್ʼ ಪಾತ್ರವರ್ಗದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಕಿಯಾರ ಅಡ್ವಾಣಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದೆಡೆ ಕರೀನಾ ಕಪೂರ್ ಬದಲಿಗೆ ಸೌತ್ ಲೇಡಿ ಸೂಪರ್ ಸ್ಟಾರ್ ನಯನತಾರ ಯಶ್ ಸಹೋದರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಸಿನಿವಲಯದಲ್ಲಿ ಹರಿದಾಡುತ್ತಿದೆ. ಆದರೆ ಇದುವರೆಗೆ ಅದು ಅಧಿಕೃತವಾಗಿಲ್ಲ.
ಡ್ರಗ್ಸ್ ಮಾಫಿಯಾದ ಕಥೆಯನ್ನು ಒಳಗೊಂಡಿದೆ ಎನ್ನಲಾಗುತ್ತಿರುವ ʼಟಾಕ್ಸಿಕ್ʼ 2025 ರ ಏ.10 ರಂದು ರಿಲೀಸ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cannes 2024: ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪಡೆದ ಮೈಸೂರಿನ ಚಿದಾನಂದ ಎಸ್ ನಾಯಕ್
Sandalwood; 2ಘಟನೆ ಒಂದೇಪರಿಣಾಮ: ಇವರು ಗೆದ್ದು ಸೋತವರಾ? ಸೋತು ಗೆದ್ದವರಾ? ನೀವೇ ನಿರ್ಧರಿಸಿ
Kannada Cinema; ಇಂದು ತೆರೆಗೆ ಬರುತ್ತಿದೆ ರವಿಚಂದ್ರನ್ ಅವರ ‘ದಿ ಜಡ್ಜ್ ಮೆಂಟ್’
Kannada Cinema; ತೆರೆಗೆ ಬಂತು ಪ್ರವೀಣ್ ಸಿ.ಪಿ ಅವರ ‘ಎವಿಡೆನ್ಸ್’
Kannada Movies; ರಾಜ್ಯದಲ್ಲಿ ಚಿತ್ರಮಂದಿರ ಸ್ಥಗಿತ ಇಲ್ಲ : ಮಂಡಳಿ
MUST WATCH
ಹೊಸ ಸೇರ್ಪಡೆ
Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು
IPL: ಸಿರಾಜ್, ದಯಾಳ್, ವೈಶಾಖ್ ಗೆ ಮುಗಿಯಿತಾ ಆರ್ ಸಿಬಿ ಪಯಣ; ಕೋಚ್ ಫ್ಲವರ್ ಹೇಳಿದ್ದೇನು?
ಮಂಗಳೂರು ಉತ್ತರ ವಲಯ: ಚಿಣ್ಣರು ಬರುತ್ತಿದ್ದಾರೆ, ಶಾಲೆಗಳು ಸುರಕ್ಷಿತವಾಗಿರಲಿ
POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!
Udupi; ಯಕ್ಷರಂಗಕ್ಕೆ ಜಿವ ತುಂಬುವ ಮಟ್ಟು ಲಕ್ಷ್ಮಣ ಶೆಟ್ಟಿಗಾರರ ಕೈಮಗ್ಗದ ಸೀರೆ