ಇಶಾನ್- ಅಶಿಕಾ ಅಭಿನಯದ ಪ್ಯೂರ್ ಲವ್ ಸ್ಟೋರಿ “ರೆಮೋ” ಟೀಸರ್ ರಿಲೀಸ್


Team Udayavani, Nov 29, 2021, 10:10 AM IST

raymo

“ರೆಮೋ’- ಸದ್ಯ ಕನ್ನಡ ಚಿತ್ರರಂಗದಲ್ಲಿ ನಿರೀಕ್ಷೆ ಹುಟ್ಟಿಸಿರುವ ಲವ್‌ ಸ್ಟೋರಿ. ನಿರ್ದೇಶಕ ಪವನ್‌ ಒಡೆಯರ್‌ ತುಂಬಾ ಗ್ಯಾಪ್‌ ನಂತರ ನಿರ್ದೇಶಿಸರುವ ಫ್ಯೂರ್‌ ಲವ್‌ಸ್ಟೋರಿ ಇದಾಗಿದ್ದು, ಇತ್ತೀಚೆಗೆ ಚಿತ್ರದ ಟೀಸರ್‌ ಬಿಡುಗಡೆ ನಡೆದಿದೆ. ಚಿತ್ರರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಚಿತ್ರವನ್ನು ಸಿ.ಆರ್‌.ಮನೋಹರ್‌ ನಿರ್ಮಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡಿದ ಮನೋಹರ್‌, ನಮ್ಮದು ತುಂಬು ಕುಟುಂಬ. ಇಶಾನ್‌ ನನ್ನ ತಮ್ಮ. ನಮ್ಮ ಮನೆಗೆ ಬಂದವರೆಲ್ಲಾ ಇಶಾನ್‌ನನ್ನು ಹೀರೋ ಮಾಡಿ ಎನ್ನುತ್ತಿದ್ದರು. ರೋಗ್‌ ಚಿತ್ರದ ಮೂಲಕ ಇಶಾನ್‌ ಹೀರೋ ಆದ. ನಂತರ ಪವನ್‌ ಒಡೆಯರ್‌ ಈ ಚಿತ್ರದ ಕಥೆ ಹೇಳಿದರು. ಇಷ್ಟವಾಯಿತು. ನಾನು ಸಿನಿಮಾ ನೋಡಿದ್ದೀನಿ. ಚೆನ್ನಾಗಿದೆ. ಇಡೀ ಚಿತ್ರತಂಡದ ಪರಿಶ್ರಮದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ’ ಎಂದರು.

ಇದನ್ನೂ ಓದಿ:ಪುನೀತ್‌ ಇಲ್ಲದೇ ಒಂದು ತಿಂಗಳು: ಮಾಸ ಕಳೆದರೂ ಮಾಸದ ನೋವು

ದೊಡ್ಡ ಗ್ಯಾಪ್‌ನ ನಂತರ ಒಂದು ಫ್ಯೂರ್‌ ಲವ್‌ಸ್ಟೋರಿಯನ್ನು ಕಟ್ಟಿಕೊಟ್ಟಿರುವ ಪವನ್‌, ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಅವರು, “ನನ್ನ ಚಿತ್ರ ನಿಮ್ಮ ನಿರೀಕ್ಷೆಯನ್ನು ಹುಸಿ ಮಾಡಲ್ಲ ಎಂದು ಹೇಳಲು ಇಚ್ಛಿಸುತ್ತೇನೆ. ನಾನು ಬರೆದಂತ ಪಾತ್ರಗಳನ್ನು ಪ್ರೀತಿಯಿಂದ ಅಪ್ಪಿಕೊಂಡು ನಟಿಸಿದ್ದ ಕಲಾವಿದರಿಗೆ, ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಿದ ನಿರ್ಮಾಪಕರಿಗೆ ಥ್ಯಾಂಕ್ಸ್‌ ಹೇಳುತ್ತೇನೆ’ ಎನ್ನುತ್ತಾ ಸಿನಿಮಾ ಬಗ್ಗೆ ಖುಷಿಯಿಂದ ಮಾತನಾಡಿದರು.

ಚಿತ್ರದಲ್ಲಿ ಇಶಾನ್‌ ನಾಯಕರಾಗಿ ನಟಿಸಿದ್ದಾರೆ. ಅವರು ನಿರ್ದೇಶಕ ಪವನ್‌ ಒಡೆಯರ್‌ ಅವರನ್ನು ದುಬೈನಲ್ಲಿ ಭೇಟಿಯಾದರಂತೆ. ಅಲ್ಲೇ ಚಿತ್ರದ ಬಗ್ಗೆ ಮಾತನಾಡಿಕೊಂಡರಂತೆ. ಸಿನಿಮಾ ಮೇಲೆ ಸಿನಿಮಾ ಮಾಡುತ್ತಾ ಬಿಝಿಯಾಗಿರುವ ಆಶಿಕಾ ರಂಗನಾಥ್‌ ಈಗ “ರೆಮೋ’ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. “ಚಿತ್ರದ ಟೀಸರ್‌ ನೋಡಿದವರು ನಿಮ್ಮ ಹಾಗೂ ಇಶಾನ್‌ ಅವರ ಜೋಡಿ ತುಂಬಾ ಚೆನ್ನಾಗಿದೆ ಎನ್ನುತ್ತಿದ್ದಾರೆ’ ಎಂದರು

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.