“ಕೃಷ್ಣ ಟಾಕೀಸ್’ನೊಳಗೆ ಐಟಂ ಸಾಂಗ್
"ನೈಟಿ ಮಾತ್ರ ಹಾಕೋಬೇಡ ಮೇನಕ' ಹಾಡಿಗೆ ಲಾಸ್ಯಾ ಸ್ಟೆಪ್
Team Udayavani, Oct 30, 2019, 3:02 AM IST
ಅಜೇಯ್ ರಾವ್ ನಾಯಕರಾಗಿರುವ “ಕೃಷ್ಣ ಟಾಕೀಸ್’ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಇತ್ತೀಚೆಗಷ್ಟೇ ರಾಜಸ್ಥಾನ ಚಿತ್ರೀಕರಣ ಮುಗಿಸಿಕೊಂಡು ಬಂದಿರುವ ಚಿತ್ರತಂಡ ಈಗ ಐಟಂ ಸಾಂಗ್ವೊಂದನ್ನು ಚಿತ್ರೀಕರಿಸಿಕೊಂಡಿದೆ. ಇತ್ತೀಚೆಗೆ ಮೋಹನ್ ಬಿ.ಕೆರೆ ಸ್ಟುಡಿಯೋದಲ್ಲಿ ಹಾಡಿನ ಚಿತ್ರೀಕರಣ ನಡೆಯಿತು.
ಗೋಕುಲ ಎಂಟರ್ ಟೈನರ್ ಲಾಂಛನದಲ್ಲಿ ಗೋವಿಂದರಾಜು ಎ.ಹೆಚ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ವಿಜಯಾನಂದ್ ನಿರ್ದೇಶಿಸುತ್ತಿದ್ದಾರೆ. “ಕೃಷ್ಣ ಟಾಕೀಸ್” ಚಿತ್ರಕ್ಕಾಗಿ ಅಭಿಷೇಕ್ ಹಾಗೂ ಪ್ರಮೋದ್ ಮರವಂತೆ ಅವರು ಬರೆದಿರುವ “ನೈಟಿ ಮಾತ್ರ ಹಾಕೋಬೇಡ ಮೇನಕ.
ನಮಗೆ ನೈಂಟಿ ಹೊಡದಂಗೆ ಆಗ್ತದೆ ಜೀವಕ’ ಎಂಬ ಹಾಡಿನ ಚಿತ್ರೀಕರಣ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಹಾಕಲಾಗಿದ್ದ ಅದ್ಧೂರಿ ಸೆಟ್ನಲ್ಲಿ ಮೂರು ದಿನಗಳ ಕಾಲ ನಡೆದಿದೆ. ಭೂಷಣ್ ನೃತ್ಯ ನಿರ್ದೇಶನ ಮಾಡಿದ ಈ ಹಾಡಿನ ಚಿತ್ರೀಕರಣದಲ್ಲಿ ಅಜೇಯ್ ರಾವ್, ಚಿಕ್ಕಣ್ಣ, ಲಾಸ್ಯಾ ನಾಗರಾಜ್ ಹಾಗೂ ಐವತ್ತಕ್ಕೂ ಹೆಚ್ಚು ಜನ ನೃತ್ಯ ಕಲಾವಿದರು ನಟಿಸಿದ್ದಾರೆ.
ಶ್ರೀಧರ್ ಸಂಭ್ರಮ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಈ ರೀತಿಯ ಹಾಡಿಗೆ ಮೊದಲ ಬಾರಿಗೆ ಶ್ರೀಧರ್ ಸಂಭ್ರಮ್ ಸಂಗೀತ ಸಂಯೋಜಿಸಿದ್ದು, ಅವರಿಗೂ ಇದು ಹೊಸ ಅನುಭವವಂತೆ. ಈ ಚಿತ್ರಕ್ಕೆ ಅಭಿಷೇಕ್ ಕಾಸರಗೋಡು ಅವರ ಛಾಯಾಗ್ರಹಣದೆ.
ಶ್ರೀಕಾಂತ್ ಸಂಕಲನ, ಮದನ್ – ಹರಿಣಿ, ಭೂಷಣ್ ನೃತ್ಯ ನಿರ್ದೇಶನ, ವಿಕ್ರಂ ಸಾಹಸ ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಅಜೇಯ್ ರಾವ್, ಅಪೂರ್ವ, ಚಿಕ್ಕಣ್ಣ, ಸಿಂಧೂ ಲೋಕನಾಥ್, ಪ್ರಮೋದ್ ಶೆಟ್ಟಿ, ಪ್ರಕಾಶ್, ಶೋಭರಾಜ್, ಮಂಡ್ಯ ರಮೇಶ್, ನಿರಂತ್, ಯಶ್ ಶೆಟ್ಟಿ, ಉಮೇಶ್, ಶ್ರೀನಿವಾಸ ಪ್ರಭು, ಶಾಂಭ, ಲಕ್ಷ್ಮೀ ಗೌಡ, ಯಮುನ, ಧರ್ಮೆಂದ್ರ ಅರಸ್ ಮುಂತಾದವರಿದ್ದಾರೆ.