ಮಾಯಾಜಾಲ,ಮನಸ್ಥಿತಿ ಇತ್ಯಾದಿ
Team Udayavani, Aug 28, 2022, 2:26 PM IST
ಬಹುತೇಕ ಹೊಸಬರೇ ಸೇರಿಕೊಂಡು ನಿರ್ಮಿಸುತ್ತಿರುವ “ಇತ್ಯಾದಿ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು.
ನಿರ್ದೇಶಕ ಮಹೇಶ್ ಕುಮಾರ್ “ಇತ್ಯಾದಿ’ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ನಿರ್ಮಾಪಕ ಧರ್ಮಶ್ರೀ ಮಂಜುನಾಥ್, ಸಂಭಾಷಣೆಗಾರ ಮಾಸ್ತಿ ಮೊದಲಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದರು.
ಈ ಹಿಂದೆ “ಬೆಟ್ಟದ ಆಸೆ’ ಎಂಬ ಕಲಾತ್ಮಕ ಚಿತ್ರವನ್ನು ನಿರ್ದೇಶಿಸಿದ್ದ ಚಿತ್ರದುರ್ಗದ ವಿಕಾಸ್ ನಾಗರಾಜ್ ಬಿ. ಎನ್ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. “ನೀಲಕಂಠ ಫಿಲಿಂಸ್’ ಬ್ಯಾನರ್ನಲ್ಲಿ ಯೋಗರಾಜ್. ಡಿ ನಿರ್ಮಾಣ ಮತ್ತು ಛಾಯಾಗ್ರಹಣವಿರುವ “ಇತ್ಯಾದಿ’ ಚಿತ್ರದಲ್ಲಿ ಸಚ್ಚಿನ್, ರಘು ಪಾಂಡೇಶ್ವರ, ವೀರೇಶ್ ಸುತ್ತಿನಮಠ, ರೇಷ್ಮಾ, ರಶ್ಮಿತಾ, ಪ್ರೀತಂ, ರಾಧಿಕಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಮುಹೂರ್ತದ ಬಳಿಕ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ವಿಕಾಸ್ ನಾಗರಾಜ್, “ಜನರು ಮಾಯಾಜಾಲದಲ್ಲಿ ಇದ್ದರೆ ಹೇಗೆ ಇರ್ತಾರೆ ಎಂಬುದನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ನಮ್ಮಲ್ಲಿರುವ ಒಂದು ಪಾತ್ರವನ್ನು ಬೇರೆಯವರು ಹೇಗೆ ಹುಡುಕುತ್ತಾರೆ, ಹೇಗೆ ನೋಡುತ್ತಾರೆ ಅನ್ನೋದೆ ಸಿನಿಮಾದ ಕಥಾಹಂದರ. ಎಲ್ಲರ ಮನಸ್ಥಿತಿಗೂ ಬೇರೆ ಬೇರೆ ಅರ್ಥ ಕಲ್ಪಿಸುತ್ತಾ ಸಿನಿಮಾ ಸಾಗುತ್ತದೆ. ಪ್ರತಿ ಪಾತ್ರಕ್ಕೂ ಅದರದ್ದೇ ಆದ ಸಂಬಂಧವಿರುತ್ತದೆ’ ಎಂದು ವಿವರಣೆ ನೀಡಿದರು. ಸದ್ಯ ಮುಹೂರ್ತವನ್ನು ಆಚರಿಸಿಕೊಂಡಿರುವ “ಇತ್ಯಾದಿ’ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ನಿಂದ ಆರಂಭವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?