ವಿದ್ಯಾರ್ಥಿ ಶಕ್ತಿಯ ಸುತ್ತ “ಜಾಗೋ’

ಕೃಷ್ಣ ತುಳಸಿ ನಿರ್ದೇಶಕನ ಹೊಸ ಕನಸು

Team Udayavani, Nov 7, 2019, 5:01 AM IST

Jaago

ಹಿಂದಿಯಲ್ಲಿ ನೀವು “ಜಾಗೊ’ ಎನ್ನುವ ಪದವನ್ನು ಕೇಳಿರಬಹುದು. ಈಗ ಅದೇ ಪದ ಕನ್ನಡದಲ್ಲಿ ಚಿತ್ರವೊಂದರ ಟೈಟಲ್‌ ಆಗಿ ತೆರೆಮೇಲೆ ಬರುತ್ತಿದೆ. ಅಂದಹಾಗೆ, ಟೈಟಲ್‌ ಕ್ಯಾಚಿ ಆಗಿದ್ದರೆ, ಜನ ಸಿನಿಮಾ ನೋಡೋಕೆ ಬರುತ್ತಾರೆ ಅನ್ನೋ ಉದ್ದೇಶದಿಂದ ಚಿತ್ರತಂಡ ತಮ್ಮ ಚಿತ್ರಕ್ಕೆ “ಜಾಗೊ’ ಅಂಥ ಹೆಸರಿಟ್ಟಿದೆಯಂತೆ! ಬಹುತೇಕ ಹೊಸ ಪ್ರತಿಭೆಗಳು ಸೇರಿ ನಿರ್ಮಿಸುತ್ತಿರುವ “ಜಾಗೊ’ ಚಿತ್ರದಲ್ಲಿ 1990ರ ಕಾಲಘಟ್ಟದ ಕಥೆಯನ್ನು ಹೇಳಲಾಗುತ್ತಿದೆಯಂತೆ.

“ರಾಜಕೀಯದಲ್ಲಿ ಅಧಿಕಾರಕ್ಕೆ ಬರಲು ನಾಲ್ಕು ಕಾಲುಗಳು ಇರುವ ಕುರ್ಚಿ ಮುಖ್ಯವಾಗಿರುತ್ತದೆ. ಅದರಲ್ಲಿ ಕೂತರೇನೆ ಅಧಿಕಾರ ಸಿಗೋದು. ಹಾಗಾಗಿ ಕೂರುವ ಕುರ್ಚಿಯ ಒಂದೊಂದು ಕಾಲಿಗೂ ತುಂಬಾ ಮಹತ್ವ ಇದೆ. ಆ ನಾಲ್ಕು ಕಾಲುಗಳ ಪೈಕಿ ಒಂದು ಕಾಲು ವಿದ್ಯಾರ್ಥಿಗಳು. ಇದನ್ನೇ ಕಥೆಯ ಎಳೆಯನ್ನಾಗಿ ಇಟ್ಟುಕೊಂಡು “ಜಾಗೊ’ ಚಿತ್ರವನ್ನು ತೆರೆಮೇಲೆ ತರುತ್ತಿದ್ದೇವೆ’ ಎಂದು ಚಿತ್ರದ ಕಥಾನಕದ ಬಗ್ಗೆ ವಿವರಣೆ ನೀಡುತ್ತದೆ ಚಿತ್ರತಂಡ.

“90ರ ದಶಕದ ಕಾಲೇಜು ವಾತಾವರಣದ ಚಿತ್ರಣ ಚಿತ್ರದಲ್ಲಿದೆ. ಆಗೆಲ್ಲ ವಿದ್ಯಾರ್ಥಿಯೊಬ್ಬ ಕಾಲೇಜು ಚುನಾವಣೆಗೆ ನಿಂತುಕೊಂಡರೆ, ಅವನನ್ನು ಮುಂದಿನ ಶಾಸಕ ಅಂತ ಬಿಂಬಿಸುತ್ತಿದ್ದರು. ಇದರೊಂದಿಗೆ ಭಾಷಾ ಪ್ರೇಮ, ನಾಯಕತ್ವ ಗುಣ, ಯುವಶಕ್ತಿಯ ಸಾಮರ್ಥ್ಯ, ಭಾವನಾತ್ಮಕ ಅಂಶಗಳು ಎಲ್ಲವೂ ಮೇಳೈಸಿಕೊಂಡಿದ್ದು, ಅದೆಲ್ಲವೂ ರಾಜಕೀಯದ ಜೊತೆ ಹೇಗೆ ನಂಟು ಬೆಳೆಸಿಕೊಳ್ಳುತ್ತದೆ.

ಅಂತಿಮವಾಗಿ ದೇಶದ ಅಭಿವೃದ್ದಿಗೆ ಇವೆಲ್ಲದರ ಕೊಡುಗೆಯೇನು ಎಂಬ ಸಂದೇಶ ಕೂಡ ಚಿತ್ರದಲ್ಲಿದೆ. ಒಟ್ಟಾರೆ ಹಿಂದಿನ ತಲೆಮಾರಿನ ಹುಡುಗರ ವಿದ್ಯಾರ್ಥಿ ಜೀವನ, ರಾಜಕೀಯ ನಂಟು ಇವೆಲ್ಲವು ಇಂದಿನ ಯುವ ಜನಾಂಗಕ್ಕೆ ತಿಳಿದಿಲ್ಲ. ಅದನ್ನು ತೋರಿಸಲು ಚಿತ್ರ ಬರುತ್ತಿದೆ’ ಎನ್ನುವುದು ಚಿತ್ರತಂಡದ ಮಾತು. ಇಲ್ಲಿಯವರೆಗೆ ಕೆಲ ಕಿರುಚಿತ್ರಗಳಲ್ಲಿ ಬಾಲನಟನಾಗಿದ್ದ ವಿರೇನ್‌ ಕೇಶವ್‌ ಮೊದಲ ಬಾರಿಗೆ ನಾಯಕನಾಗಿ ಈ ಚಿತ್ರದ ಮೂಲಕ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ.

ಇನ್ನು ನಾಯಕಿ ಸೇರಿದಂತೆ ಇತರೆ ಕಲಾವಿದರ ಆಯ್ಕೆ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಅದರ ಬಗ್ಗೆ ಮಾಹಿತಿ ನೀಡುತ್ತೇವೆ ಎಂದಿದೆ ಚಿತ್ರತಂಡ. ಈ ಹಿಂದೆ ಸಂಚಾರಿ ವಿಜಯ್‌ ಅಭಿನಯದ “ಕೃಷ್ಣತುಳಸಿ’ ಚಿತ್ರವನ್ನು ನಿರ್ದೇಶಿಸಿದ್ದ ಸುಕೇಶ್‌ ನಾಯಕ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ವಾಸುಕಿ ವೈಭವ್‌ ಸಂಗೀತ ಸಂಯೋಜನೆಯಿದೆ. ಚಿತ್ರಕ್ಕೆ ಲಿವಿತ್‌ ಛಾಯಾಗ್ರಹಣ, ವಿಜಯ್‌ ರಾಜ್‌ ಸಂಕಲನವಿದೆ.

ರಂಗಭೂಮಿ ಕಲಾವಿದ ಸ್ವಯಂ ನಿವೃತ್ತ ಐಇಎಸ್‌ ಅಧಿಕಾರಿ ಸೊರಬದ ಡಾ.ಶಿವಪ್ಪ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇತ್ತೀಚೆಗೆ ಮುಹೂರ್ತವನ್ನು ಆಚರಿಸಿಕೊಂಡಿದ್ದು, ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರದ ಕಥೆಗೆ ತಕ್ಕಂತೆ ಬೆಳಗಾಂ, ಧಾರವಾಡ ಭಾಗಗಳಲ್ಲಿ “ಜಾಗೊ’ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.