ಹಿಂದೂಗಳೇ ಎಲ್ಲೋಗಿದ್ದೀರಾ? ವಿಜಯಲಕ್ಷ್ಮಿ ಕಷ್ಟಕ್ಕೆ ಸ್ಪಂದಿಸದವರ ವಿರುದ್ಧ ಜಗದೀಶ್ ವಾಗ್ದಾಳಿ
Team Udayavani, Sep 29, 2021, 2:00 PM IST
ಬೆಂಗಳೂರು: ಸಂಕಷ್ಟದಲ್ಲಿರುವ ನಟಿ ವಿಜಯಲಕ್ಷ್ಮಿ ಅವರ ಕಷ್ಟಕ್ಕೆ ಸ್ಪಂದಿಸದ ಕನ್ನಡ ಚಿತ್ರರಂಗ, ಸಿನಿಮಾ ನಟ-ನಟಿಯರು, ರಾಜಕಾರಣಿಗಳು ಹಾಗೂ ಲಿಂಗಾಯತ ಧರ್ಮದವರು, ಹಿಂದೂ ಸಂಘಟನೆಗಳ ವಿರುದ್ಧ ವಕೀಲ ಜಗದೀಶ್ ಅವರು ವಾಗ್ದಾಳಿ ನಡೆಸಿದ್ದಾರೆ.
ಕಷ್ಟದ ಪರಿಸ್ಥಿತಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿ ಕಣ್ಣೀರಿಡುತ್ತಿದ್ದ ಕುಳಿತ್ತಿದ್ದ ಹೆಣ್ಣುಮಗಳ ಸಹಾಯಕ್ಕೆ ಯಾರು ಬರದೆ ಇರುವುದು ನೋಡಿ ನನಗೆ ನೋವು ಆಯಿತು.
“ಕರ್ನಾಟಕದಲ್ಲಿ ಕಷ್ಟ ಬಂದಾಗ ಸಮುದಾಯ, ಸಂಘ, ಸರ್ಕಾರ, ಜಾತಿ, ಧರ್ಮ ಸಹಾಯ ಮಾಡುತ್ತೆ ಅಂತ ನಂಬಿಕೆ ಇದೆ. ಆದರೆ ಇವತ್ತು ನಟಿ ವಿಜಯಲಕ್ಷ್ಮಿ ಅವರ ಪರಿಸ್ಥಿತಿ ನೋಡಿದಾಗ ಎಲ್ಲಾ ಸುಳ್ಳು ಎನಿಸುತ್ತದೆ. ಮನುಷ್ಯ ಅಂದಮೇಲೆ ತಪ್ಪು ಮಾಡುವುದು ಸಹಜ. ಒಂದು ಹೆಣ್ಣು ನಟಿಯಾಗಿ ಮನರಂಜನೆ ನೀಡಿ ಕಾರಣಾಂತರಗಳಿಂದ ಕಷ್ಟ ಬಂದಿರುತ್ತದೆ. ಕೋಪದಲ್ಲಿ ಏನಾದರು ಹೇಳಿರಬಹುದು. ಹಾಗಂದ ಮಾತ್ರಕ್ಕೆ ಇವತ್ತಿನ ಆ ಕೆಟ್ಟ ಪರಿಸ್ಥಿತಿಯಲ್ಲಿ ನಾವುಗಳು ಆಕೆಯನ್ನು ಒಂಟಿಯಾಗಿ ಬಿಟ್ಟರೆ ನಾವು ಕನ್ನಡಿಗರಾಗಿ ಮಾನವಿಯಾತೆ ಇರುವ ಮನುಷ್ಯರಾಗುತ್ತೀರಾ?” ಎಂದು ಪ್ರಶ್ನೆ ಮಾಡಿದ್ದಾರೆ.
“ಒಂದು ಟ್ರಸ್ಟ್ ಲಿಂಗಾಯುತ ಸಂಪ್ರದಾಯದ ಪ್ರಕಾರ ಆಕೆಯ ತಾಯಿ ಅಂತ್ಯಸಂಸ್ಕಾರ ಮಾಡಿದ್ರು. ನಾವುಗಳೆಲ್ಲ ಕಟುಕರಾಗಲು ಸಾಧ್ಯನಾ. ನನಗೂ ಗೊತ್ತಿರಲಿಲ್ಲ. ನನ್ನ ಸ್ನೇಹಿತೆ ಅವರ ವಿಡಿಯೋ ಕಳುಹಿಸಿದರು. ಅವರು ಕೂಡ ಮರುಕ ವ್ಯಕ್ತ ಪಡಿಸಿದ್ರು. ಎಲ್ಲರೂ ಈ ರೀತಿ ಆಗಿ ಬಿಟ್ಟರೆ ಅವರ ಕಥೆ ಏನಾಗಬಹುದು. ಆಕೆಯೂ ಒಬ್ಬಳು ಹಿಂದೂ ಹೆಣ್ಣು ಮಗಳಲ್ಲವಾ. ಲಿಂಗಾಯತ ಹೆಣ್ಣು. ಜಾತಿ, ಧರ್ಮ ಕೇವಲ ರಾಜಕೀಯಕ್ಕೆ ಮಾತ್ರ ಸೀಮಿತವಾಯಿತಾ. ರಾಜಕೀಯದಿಂದ ನಾಲ್ಕು ಜನರ ಕಣ್ಣೀರು ಒರೆಸಿಲ್ಲ ಎಂದರೆ ಆ ಜಾತಿ, ಧರ್ಮ ಸರ್ಕಾರ ಸಮುದಾಯ ಇದ್ದರೆ ಎಷ್ಟು ಬಿಟ್ಟರೆ ಎಷ್ಟು. ನಮ್ಮ ಹಿಂದೂಗಳು ಎಂದು ಬಡ್ಕೋತ್ತೀರಾ..ವಿಜಯಲಕ್ಷ್ಮಿ ಹಿಂದೂ ಅಲ್ಲವಾ, ಲಿಂಗಾಯತರು ಅವರು. ಈಗ ಹಿಂದೂಗಳೆಲ್ಲಾ ಎಲ್ಲಿ ಹೋಗಿದ್ದೀರಾ” ಎಂದಿದ್ದಾರೆ.
“ಆಕೆ ಏನೆ ತಪ್ಪು ಮಾಡಿರಬಹುದು. ಏನು ಕೊಲೆ ಮಾಡಿದ್ದಾರಾ?.. ಅಥವಾ ರೇಪ್ ಮಾಡಿ, ಸಹಾಯ ತೆಗೆದುಕೊಂಡು ಬಚ್ಚಿಟ್ಟುಕೊಂಡಿದ್ದಾರಾ?..ಏನು ಇಲ್ಲ ತಾನೆ. ರೇಪ್ ಮಾಡಿದವರು, ಬ್ಲೂ ಫಿಲ್ಮ್ ನೋಡಿದವರು ಎಲ್ಲರೂ ಚೆನ್ನಾಗೇ ಇದ್ದಾರೆ. ಎಲ್ಲರಿಗೂ ಉತ್ತಮ ಸೌಕರ್ಯ ಸಿಗ್ತಿದೆ. ಮಾನವೀಯ ಮೌಲ್ಯಗಳನ್ನು ಮರಿಯಬಾರದು” ಎಂದು ಅಸಮಾಧಾನ ಹೊರಹಾಕಿದ್ದಾರೆ.
” ಕನ್ನಡ ಚಿತ್ರರಂಗ ಎಲ್ಲಿ ಹೋಯ್ತು. ನೀವೆಲ್ಲ ಹೀರೋಗಳು ಸಿನಿಮಾದಲ್ಲಿ ಕಂಡ್ರೆಲೇ. ನೀವು ಜನಸಾಮಾನ್ಯರ ಮಾನವೀಯತೆಗೆ ಹೀರೋ ಆಗಲು ಸಾಧ್ಯನೇ ಇಲ್ಲ. ದೊಡ್ಡ ದೊಡ್ಡ ಡೈಲಾಗ್ ಹೊಡೆಯುವಂತ ಕನ್ನಡ ಚಿತ್ರರಂಗ ಎಲ್ಲಿ ಹೋಯ್ತು. ನಾಯಕಿಯರು, ನಟಯರು ಎಲ್ಲಾ ಎಲ್ ಹೋದ್ರಿ..ಬರಿ ಮೇಕಪ್ ಮಾಡಿಕೊಂಡು ಮನರಂಜನೆ ನೀಡುವುದು ಅಷ್ಟೆನಾ. ಕಷ್ಟಕ್ಕೆ ಆಗದೆ ಇರುವ ಹೀರೋಗಳು ನೀವು ಹೀರೋನಾ” ಎಂದು ಚಿತ್ರರಂಗವನ್ನು ಪ್ರಶ್ನೆ ಮಾಡಿದ್ದಾರೆ.
“ಆಕೆಯ ಪರಿಸ್ಥಿತಿ ನಾಳೆ ಎಲ್ಲರಿಗೂ ಬರಬಹುದು. ಸಮಾಜದಲ್ಲಿ ಯಾವುದು ಶಾಶ್ವತ ಅಲ್ಲ. ಹಾಗಾಗಿ ಆ ಪರಿಸ್ಥಿತಿಗೆ ಬಂದ ಜನರನ್ನು ಮಾನವೀಯತೆಯಿಂದ ನೋಡಿ. ಜಾತಿ ಧರ್ಮ ಅಂತ ಬಡಿದುಕೊಳ್ಳುವವರು ಎಲ್ಲಿ ಹೋಗಿದ್ದಾರೆ…ನೀವೆಲ್ಲ ಸಮಾಜ ಘಾತುಕರು…6 ಕೋಟಿ ಕನ್ನಡಿಗರು ಯಾರು ತಪ್ಪೆ ಮಾಡುವುದಿಲ್ಲವಾ. ನೀವು ಯಾರು ಉದ್ದಾರ ಆಗಲ್ಲ. ಯಾವ ಸಮಾಜ ಕಣ್ಣೀರು ಇಡುತ್ತಿರುವ ವ್ಯಕ್ತಿ ಪರ ನಿಲ್ಲುವುದಿಲ್ಲವೊ ಇಂಥ ಸಮಾಜ ಇದ್ರು ಅಷ್ಟೆ ಹೋದರು ಅಷ್ಟೆ” ಎಂದಿದ್ದಾರೆ.
“ಸತ್ತಿರುವ ಈ ಸಮಾಜಕ್ಕೆ ನಾವು ಯಾಕೆ ಸ್ಪಂದಿಸಬೇಕು. ಎಂಥ ಹುಚ್ಚರ ಸಮಾಜದಲ್ಲಿ ಬದುಕುತ್ತಿದ್ದೇವೆ. ಬಸವಣ್ಣ, ಬುದ್ದ, ಕುವೆಂಪು, ಅಂಬೇಡ್ಕರ್ ಹುಟ್ಟಿದ ನಾಡು ಇದು. ನಮಗೂ ಇಂಥ ಪರಿಸ್ಥಿತಿ ಬರಬಹುದು. ಇಂಥ ನಾಡಲ್ಲಿ ಇಂಥ ಪರಿಸ್ಥಿತಿ ಬಂದಿರುವುದು ನಾಚಿಕೆ ಆಗುತ್ತದೆ. ಕೊಡುವವನು ದೊಡ್ಡವನಲ್ಲ, ಬೇಡುವವನು ದೊಡ್ಡವನು. ಮಾನವೀಯತೆ ಮರೆಯಬೇಡಿ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ