ಅನಂತವಾಗಿರು ಪುಸ್ತಕದ ಬಗ್ಗೆ ನಟ ಜಗ್ಗೇಶ್ ಮೆಚ್ಚುಗೆ
Team Udayavani, Jul 17, 2021, 7:51 AM IST
ಕನ್ನಡದ ದಿವಂಗತ ನಟ ಸಂಚಾರಿ ವಿಜಯ್ ಜೀವನದ ಕುರಿತಾದ ‘ಅನಂತವಾಗಿರು’ ಎಂಬ ಪುಸ್ತಕ ಪ್ರಕಟವಾಗುತ್ತಿದೆ. ಈ ಕುರಿತು ಹಿರಿಯ ನಟ ಜಗ್ಗೇಶ್ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಟ್ವಿಟ್ಟರ್ ನಲ್ಲಿ ಕಲಾಭಿಮಾನಿ ಇರುವತನಕ ಕಲಾವಿದನಿಗೆ ಸಾವಿಲ್ಲಾ ಎಂದು ಬರೆದುಕೊಂಡಿದ್ದಾರೆ.
ಅನಂತವಾಗಿರು ಪುಸ್ತಕದ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ”ಕಲಾವಠಾರ ಪರವಾಗಿ ಹೃದಯಪೂರ್ವಕ ಧನ್ಯವಾದ. ಕೆಲದಿನ ಕೆಲಚಿತ್ರಕ್ಕೆ ಮಾತ್ರ ಕಲಾವಿದನ ಕೃಷಿ ಕಣ್ಮರೆಯಾಗದೆ ಇಂಥ ಅದ್ಭುತ ಕಾರ್ಯದಿಂದ ಕಲಾವಿದ ಜನರಮನದಲ್ಲಿ ಉಳಿಯಲಿ. ನೂರಾರು ಕನಸುಗಳ ತೆರೆಯಮೇಲೆ ಅನಾವರಣ ಮಾಡಬೇಕಿದ್ದ ಆತ್ಮ. ಆಕಸ್ಮಿಕ ನಿರ್ಗಮನ. ಇದರಿಂದ ಪೂರ್ಣವಾಗಿ ಕಲಾವಿದನ ಆತ್ಮ ಸಂತೃಪ್ತಿ ಹೊಂದಲಿ. ಕಲಾಭಿಮಾನಿ ಇರುವತನಕ ಕಲಾವಿದನಿಗೆ ಸಾವಿಲ್ಲಾ” ಎಂದು ಹೇಳಿದ್ದಾರೆ.
ಹಲವು ಗಣ್ಯರ ಬಗ್ಗೆ ಪುಸ್ತಕಗಳನ್ನು ಬರೆದಿದ್ದ, ಪತ್ರಕರ್ತ, ರಾಜ್ಯ ಪ್ರಶಸ್ತಿ ವಿಜೇತ ಲೇಖಕ ಶರಣು ಹುಲ್ಲೂರು ಸಂಪಾದಕತ್ವದಲ್ಲಿ ‘ಅನಂತವಾಗಿರು’ ಪುಸ್ತಕ ಹೊರಬರುತ್ತಿದೆ. ಇದರಲ್ಲಿ ಸಂಚಾರಿ ವಿಜಯ್ ಅವರ ಜೀವನದ ಕಥೆಗಳು ಇರಲಿವೆ.
ಕಲಾವಠಾರ ಪರವಾಗಿ ಹೃದಯಪೂರ್ವಕ ಧನ್ಯವಾದ!
ಕೆಲದಿನ ಕೆಲಚಿತ್ರಕ್ಕೆ ಮಾತ್ರ ಕಲಾವಿದನ ಕೃಷಿ ಕಣ್ಮರೆಯಾಗದೆ ಇಂಥ ಅದ್ಭುತ ಕಾರ್ಯದಿಂದ ಕಲಾವಿದ ಜನರಮನದಲ್ಲಿ ಉಳಿಯಲಿ!ನೂರಾರು ಕನಸುಗಳ ತೆರೆಯಮೇಲೆ ಅನಾವರಣ ಮಾಡಬೇಕಿದ್ದ ಆತ್ಮ!ಆಕಸ್ಮಿಕ ನಿರ್ಗಮನ!ಇದರಿಂದ ಪೂರ್ಣವಾಗಿ ಕಲಾವಿದನ ಆತ್ಮ ಸಂತೃಪ್ತಿ ಹೊಂದಲಿ!ಕಲಾಭಿಮಾನಿ ಇರುವತನಕ ಕಲಾವಿದನಿಗೆ ಸಾವಿಲ್ಲಾ! https://t.co/lx6TSu3XVr— ನವರಸನಾಯಕ ಜಗ್ಗೇಶ್ (@Jaggesh2) July 15, 2021