ನಿರ್ಮಾಪಕರ ಪರ ಜಗ್ಗೇಶ್‌ ಮಾತು


Team Udayavani, May 19, 2020, 4:16 AM IST

twwet jaggi

ನಿಧಾನವಾಗಿ ಓಟಿಟಿ ಪ್ಲಾಟ್‌ ಫ್ಲಾರ್ಮ್ ಕನ್ನಡ ಚಿತ್ರರಂಗವನ್ನು ತನ್ನತ್ತ ಸೆಳೆಯುತ್ತಿವೆ. ಚಿತ್ರಮಂದಿರದಲ್ಲೇ ಸಿನಿಮಾ ಬಿಡುಗಡೆ ಮಾಡಬೇಕೆಂಬ ಕಾನ್ಸೆಪ್ಟ್ನಿಂದ ಹೊರಬರುತ್ತಿದ್ದಾರೆ. ಈಗ ಪುನೀತ್‌ ರಾಜ್‌ ಕುಮಾರ್‌ ಒಡೆತನದ ಪಿಆರ್‌ ಕೆ  ಪ್ರೊಡಕ್ಷನ್ಸ್‌ ಬ್ಯಾನರ್‌ ನಲ್ಲಿ ನಿರ್ಮಾಣವಾಗಿರುವ ಎರಡು ಚಿತ್ರಗಳು ಓಟಿಟಿಯಲ್ಲಿ ಬಿಡುಗಡೆಯಾಗುತ್ತಿವೆ. ಫ್ರೆಂಚ್‌ ಬಿರಿಯಾನಿ ಹಾಗೂ ಲಾ ಚಿತ್ರಗಳು ಪ್ರೇಕ್ಷಕರಿಗೆ ಓಟಿಟಿಯಲ್ಲಿ ಮನರಂಜನೆ ನೀಡಲಿವೆ.

ಅಮೆಜಾನ್‌ನಲ್ಲಿ ಜುಲೈ 24ಕ್ಕೆ  ಫ್ರೆಂಚ್‌ ಬಿರಿಯಾನಿ ತೆರೆಕಂಡರೆ, ಜೂನ್‌ 26ರಂದು ಲಾ ತೆರೆಕಾಣಲಿದೆ. ಇದರ ಬೆನ್ನಿಗೆ ಇನ್ನೊಂದಿಷ್ಟು ಚಿತ್ರಗಳು ಓಟಿಟಿಯಲ್ಲಿ ಬಿಡುಗಡೆಗೆ ಆಸಕ್ತಿ ತೋರಿಸಿವೆ. ಈ ಹಿನ್ನೆಲೆಯಲ್ಲಿ ಜಗ್ಗೇಶ್‌ ಒಂದಷ್ಟು ಟ್ವಿಟ್‌ ಮಾಡಿದ್ದಾರೆ. ಜೊತೆಗೆ  ಓಟಿಟಿಯಲ್ಲಿ ಪಾರದರ್ಶಕ ವ್ಯವಸ್ಥೆ ಬರಬೇಕು ಮತ್ತು ನಿರ್ಮಾಪಕನಿಗೆ ಮೋಸವಾಗಬಾರದು ಎಂದು ಕಳಕಳಿ ವ್ಯಕ್ತಪಡಿಸಿದ್ದಾರೆ. ಓಟಿಟಿ ರಿಲೀಸ್‌ ಕುರಿತು ಜಗ್ಗೇಶ್‌ ಮಾಡಿರುವ ಟ್ವೀಟ್‌ ಹೀಗಿದೆ;

ಷರತ್ತುಗಳ ಅಗತ್ಯವಿದೆ: ಓಟಿಟಿಯಲ್ಲಿ ನಿರ್ಮಾಪಕರಿಗೆ ಯಾವ ವ್ಯತ್ಯಾಸವೂ ಇಲ್ಲ. ಕಾರಣ ಟಿವಿ, ಥಿಯೇಟರ್‌ ಹೆಸರು ದುಡ್ಡು ಉಳ್ಳವರ ಲಾಬಿ ಆಗಿತ್ತು. ಯಾವ ಲಾಬಿಯೂ ಇಲ್ಲದವರ ಗೋಳಾಗಿತ್ತು. ಈಗ ಒಟಿಟಿಯಲ್ಲಿಯೂ ಇದೇ ಗತಿ  ಮುಂದುವರಿದು ಉಳ್ಳವರಿಗೆ ಮಾತ್ರ ದಕ್ಕಿ, ಹೊಸಬರು ಅದೇ ಸಂಕಷ್ಟದ ಸುಳಿಯಲ್ಲೆ ಉಳಿಯುತ್ತಾರೆ. ಎಲ್ಲರಿಗೂ ಸಹಾಯ ಆಗಲು ಕೆಲವು ಷರತ್ತುಗಳು ಇರಬೇಕಾದ ಅಗತ್ಯವಿದೆ.

ಪಾರದರ್ಶಕತೆ ಬೇಕು: ಹೇಗೆ ಯಡಿಯೂರಪ್ಪ ರವರು ರೈತರು ತಾವು ಬೆಳೆದ ಬೆಳೆ ಇಷ್ಟಬಂದವರಿಗೆ ಮಾರುವ  ಕಾನೂನು ಎಪಿಎಂಸಿಯಲ್ಲಿ ತಂದಿದ್ದಾರೋ, ಹಾಗೆಯೇ ಸಿನಿಮಾ ನಿರ್ಮಾಪಕ ತನ್ನ ಸಿನಿಮಾ ಇಷ್ಟಬಂದ ವೇದಿಕೆಯಲ್ಲಿ ಮಾರುವ, ಬಿತ್ತರಿಸುವ ಹಕ್ಕು ಸ್ವಾತಂತ್ರವನ್ನು ಪಡೆದುಕೊಳ್ಳುವಂತೆ ಆಗಬೇಕು. ಹಾಗೆಯೇ ನಮ್ಮ ಶ್ರಮವನ್ನು ನುಂಗುವ ನುಂಗಣ್ಣರನ್ನು ದೂರ ಇಡಬೇಕು. ಅಂದರೆ ಪಾರದರ್ಶಕ ಮಾರುಕಟ್ಟೆ ವ್ಯವಸ್ಥೆ ಬರಬೇಕು.

ಮಧ್ಯವರ್ತಿಗಳಿಂದ  ಮುಕ್ತವಾಗಿರಲಿ: ಇಂದು ಚಿತ್ರಮಂದಿರದಲ್ಲಿ ಕಲೆಕ್ಷನ್‌ ರಿಪೋರ್ಟ್‌ನಲ್ಲಿ ಮೋಸ ನಡೆಯುತ್ತಿದೆ. ಟಿವಿಯಲ್ಲಿ ಅವರು ಕೊಟ್ಟಷ್ಟು ಭಿಕ್ಷೆ ಪಡೆದು ವಿತರಣೆ ಹಕ್ಕು ನೀಡುವುದು ಶಾಶ್ವತ ಅವಧಿಗಾಗಿ. ಅಂದರೆ ಸಿನಿಮಾ ಮಾಡಿ ಅವರ ಪಾದಕ್ಕೆ  ಸಮರ್ಪಣೆ ಮಾಡಿ ಮರೆತುಬಿಡಬೇಕು. ಹೀಗೆ ಟಿವಿಗೆ ಮಾರಲು ಕೂಡ ಕೆಲವು ನುಂಗಣ್ಣರ ಕೃಪೆ ಇರಬೇಕು. ಇಲ್ಲದಿದ್ದರೆ ಡಬ್ಬ ಸಿನಿಮಾ ಎಂದು ತಿರಸ್ಕರಿಸುವಂತೆ ಟಿವಿಯವರೊಂದಿಗೆ ಸಲಹೆ ನೀಡುತ್ತಾರೆ. ಈಗ ಒಟಿಟಿ ವೇದಿಕೆಗೂ ಇಂಥ  ನುಂಗಣ್ಣರ ಪ್ರವೇಶ ಆಗುತ್ತದೆ. ಪ್ಲಾಟ್‌ ಫಾರ್ಮ್ ಮುಖ್ಯಸ್ಥರನ್ನು ಬುಟ್ಟಿಗೆ ಹಾಕಿಕೊಂಡು, ತಮ್ಮ ಹೆಸರಿನದ್ದೇ ಪ್ರಭಾವ ಬಳಸಿ ಎಲ್ಲಾ ತರಹ ಬಿಲ್ಡಪ್‌ ಕೊಟ್ಟು ಕನ್ನಡ ಚಿತ್ರರಂಗಕ್ಕೆ ನಾವೇ ಎಲ್ಲಾ  ಅಂತ ಪುಂಗಿ ಊದಿ, ಒಟಿಟಿಯವರನ್ನು  ಬುಟ್ಟಿಗೆ ಹಾಕಿಕೊಂಡು ಅವರ ಬೇಳೆ ಬೇಯಿಸಲು ಶುರು ಮಾಡುತ್ತಾರೆ. ಇದರಿಂದ ಮತ್ತೆ ಸಣ್ಣ ನಿರ್ಮಾಪಕರು, ನಟ ನಟಿರಿಗೆ ದೇವರೇ ಗತಿ.

ಒಗ್ಗಟ್ಟು ಮುಖ್ಯ: ಈಗಲಾದರೂ ಸಿನಿಮಾಗಾಗಿಯೇ ಬಾಳಿದ, ಬಾಳುತ್ತಿರುವ ಹಿರಿಯರು ಒಗ್ಗಟ್ಟಾಗಿ ಒಂದು ವೇದಿಕೆ ರಚಿಸಿ ನಿಸ್ವಾರ್ಥ ಯತ್ನ ಮಾಡಿದರೆ ಉದ್ಯಮ ಎಲ್ಲಾ ವೇದಿಕೆಗಳಲ್ಲಿಯೂ ನಿಲ್ಲುತ್ತದೆ, ಉಳಿಯುತ್ತದೆ. ಇಲ್ಲದಿದ್ದರೆ ಪರಭಾಷೆಯ ಚಿತ್ರಗಳು ರಾಜರಂತೆ ನಮ್ಮ  ಭಾಷೆಯ ಸಿನಿಮಾಗಳನ್ನು ಆಕ್ರಮಿಸಿ ನಮ್ಮ ಭಾಷೆ ಗುಲಾಮರಂತೆ ಆಗುವುದು ನಿಶ್ಚಿತ. ನಮ್ಮ ಚಿತ್ರರಂಗಕ್ಕೆ ನಮ್ಮವರೆ ಶತ್ರುಗಳು. ಹೀಗೆ ಜಗ್ಗೇಶ್‌ ಓಟಿಟಿ ಕುರಿತು ಟ್ವೀಟ್‌ ಮಾಡಿದ್ದು, ಇದಕ್ಕೆ  ಸಾಕಷ್ಟು ಪ್ರತಿಕ್ರಿಯೆ, ಕಾಮೆಂಟ್‌ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.