ರಕ್ಷಿತ್ ಬಗ್ಗೆ ಜಗ್ಗೇಶ್ ಟ್ವೀಟ್
Team Udayavani, Oct 7, 2018, 12:04 PM IST
ಜಗ್ಗೇಶ್ ತಮಗೆ ಅನಿಸಿದ್ದನ್ನು ನೇರವಾಗಿ ಹೇಳುವ ಗುಣವುಳ್ಳವರು. ಅದೇ ಕಾರಣದಿಂದ ಟ್ವೀಟರ್ನಲ್ಲಿ ತಮಗೆ ಇಷ್ಟವಾದ, ಇಷ್ಟವಾಗದ ವಿಷಯಗಳ ಬಗ್ಗೆ ಹೇಳುತ್ತಲೇ ಇರುತ್ತಾರೆ. ಈ ಬಾರಿ ಜಗ್ಗೇಶ್, ನಟ ರಕ್ಷಿತ್ ಶೆಟ್ಟಿ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ರಕ್ಷಿತ್ ಅವರ ಸಿನಿಮಾ ಪ್ರೀತಿ ಹಾಗೂ ಚಿತ್ರರಂಗದಲ್ಲಿ ಮುಖವಾಡ ಹಾಕಿ ಬರುವವರನ್ನು ದೂರು ಇಡುವ ಕಲೆ ಕರಗತವಾಗಬೇಕೆಂದೂ ಹೇಳಿದ್ದಾರೆ.
ಜಗ್ಗೇಶ್ ಅವರ ಈ ಟ್ವೀಟ್ಗೆ ಅಭಿಮಾನಿಗಳಿಂದ ಒಳ್ಳೆಯ ಪ್ರತಿಕ್ರಿಯೆ ಕೂಡಾ ವ್ಯಕ್ತವಾಗಿದೆ. ರಕ್ಷಿತ್ ಹಾಗೂ ಜಗ್ಗೇಶ್ “ವಾಸ್ತುಪ್ರಕಾರ’ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದಾರೆ. ಅಷ್ಟಕ್ಕೂ ಜಗ್ಗೇಶ್ ಮಾಡಿರುವ ಟ್ವೀಟ್ ಏನೆಂದರೆ, “ನಾನು ಕಂಡ ಅದ್ಭುತ ಸಜ್ಜನಿಕೆಯ ಕಲಾ ಬಂಧು. ಸದಾ ಸಿನಿಮಾಗಾಗಿ ತುಡಿಯುವ ಕಲಾತಪಸ್ವಿ.ಇವನಿಗೆ ದೇವರ ದಯೆಯಿಂದ ಇನ್ನು ಎತ್ತರದ ದಿನಗಳು ಕಾದಿದೆ ಎಂದು ನನ್ನ ಮನ ಹೇಳಿತು.
ನಮ್ಮ ಯಶಸ್ಸು ಕಬಳಿಸಿ ಮೇಲೆರಲು ಅನೇಕರು ಮುಖವಾಡ ಹಾಕಿ ಬರುತ್ತಾರೆ. ಇದು ಪ್ರಾಪಂಚಿಕ ವಾಮ ಮಾರ್ಗ ತಂತ್ರ! ಇಂಥವರ ನಗುತ್ತ ಪಕ್ಕ ತಳ್ಳುವ ಕಲೆ ಕರಗತವಾಗಲಿ ಮುಂದೆ!’ ಎಂದು ಟ್ವೀಟ್ ಮಾಡಿದ್ದಾರೆ. ಜಗ್ಗೇಶ್ ಅವರು ಟ್ವೀಟರ್ನಲ್ಲಿ ಬಳಸಿರುವ “ನಮ್ಮ ಯಶಸ್ಸು ಕಬಳಿಸಿ ಮೇಲೆರಲು ಅನೇಕರು ಮುಖವಾಡ ಹಾಕಿ ಬರುತ್ತಾರೆ.
ಇದು ಪ್ರಾಪಂಚಿಕ ವಾಮ ಮಾರ್ಗ ತಂತ್ರ’ ಎಂಬ ಅಂಶ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಅಂಶವನ್ನು ಜಗ್ಗೇಶ್ ಯಾರ ಕುರಿತಾಗಿ ಹೇಳಿರಬಹುದೆಂಬ ಲೆಕ್ಕಾಚಾರಗಳೂ ಆರಂಭವಾಗಿವೆ.ಅಂದಹಾಗೆ, ಇತ್ತೀಚೆಗೆ ರಕ್ಷಿತ್, ರಶ್ಮಿಕಾ ಜೊತೆಗಿನ ಬ್ರೇಕಪ್ನಿಂದ ಹೆಚ್ಚು ಸುದ್ದಿಯಾಗಿದ್ದರು. ಸದ್ಯ ರಕ್ಷಿತ್ ಅವರ “ಅವನೇ ಶ್ರೀಮನ್ನಾರಾಯಣ’ ಚಿತ್ರೀಕರಣ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು