ಜೈ ಜಗದೀಶ್‌ ದಂಪತಿ ಪುತ್ರಿಯರ “ಯಾನ’ ರೆಡಿ

ಜು.12 ರಿಂದ ಕಲರ್‌ಫ‌ುಲ್‌ ಜರ್ನಿಯತ್ತ ಬೆಡಗಿಯರು

Team Udayavani, Jun 24, 2019, 3:00 AM IST

yaana

ಹಿರಿಯ ನಟ ಜೈಜಗದೀಶ್‌ ಮತ್ತು ವಿಜಯಲಕ್ಷ್ಮೀ ಸಿಂಗ್‌ ಅವರ ಪುತ್ರಿಯರಾದ ವೈಭವಿ, ವೈನಿಧಿ, ವೈಸಿರಿ ಅವರುಗಳು ನಾಯಕಿಯರಾಗಿ ಎಂಟ್ರಿಕೊಟ್ಟಿರುವುದು ಗೊತ್ತೇ ಇದೆ. ಈ ಮೂವರು ಸಹೋದರಿಯರು “ಯಾನ’ ಚಿತ್ರದ ಮೂಲಕ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿರುವುದು ಸಹ ಎಲ್ಲರಿಗೂ ಗೊತ್ತು. ಈಗ ಹೊಸ ಸುದ್ದಿಯೆಂದರೆ, “ಯಾನ’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ.

ಹೌದು, ಈಗಾಗಲೇ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ “ಯಾನ’, ಜುಲೈ 12 ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ “ಯು/ಎ’ ಪ್ರಮಾಣ ಪತ್ರ ನೀಡಿ ಬಿಡುಗಡೆಯ ಹಾದಿಯನ್ನು ಸುಗಮಗೊಳಿಸಿದೆ.

“ಆಕ್ಮೆ ಮೂವೀಸ್‌ ಇಂಟರ್‌ ನ್ಯಾಷನಲ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಹರೀಶ್‌ ಶೇರಿಗಾರ್‌, ಶರ್ಮಿಳಾ ಶೇರಿಗಾರ್‌ ನಿರ್ಮಿಸಿದ್ದಾರೆ. ಸಿನಿಮಾ ಹಿನ್ನೆಲೆಯಿರುವ ಕುಟುಂಬದ ಮೂವರು ಸಹೋದರಿಯರು ನಟಿಸಿರುವುದು ಹೊಸದೇನಲ್ಲ. ಆದರೆ, ಮೂವರು ಸಹೋದರಿಯರು ಒಂದೇ ಚಿತ್ರದಲ್ಲಿ ನಟಿಸುತ್ತಿರುವುದು ವಿಶೇಷ.

ಅದರಲ್ಲೂ ತಾಯಿ ನಿರ್ದೇಶನದಲ್ಲಿ ಕ್ಯಾಮೆರಾ ಮುಂದೆ ನಿಲ್ಲುತ್ತಿರುವುದು ಬಹುಶಃ ಭಾರತೀಯ ಚಿತ್ರರಂಗದಲ್ಲೇ ದಾಖಲೆ. ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಇದೊಂದು ಜರ್ನಿ ಕುರಿತಾದ ಕಥೆ ಎಂಬುದು ನಿರ್ದೇಶಕರ ಮಾತು. “ಯಾನ’ ಬಗ್ಗೆ ಹೇಳುವುದಾದರೆ, ಇದೊಂದು ಜನಿರ ಕಥೆ. ಬೆಂಗಳೂರಿನಿಂದ ಗೋವಾದವರೆಗೆ ಕಥೆ ನಡೆಯುತ್ತೆ.

ದಾರಿ ಮಧ್ಯೆ ಸಿಗುವ ಚಿತ್ರದುರ್ಗ, ದಾವಣಗೆರೆ ಹೀಗೆ ಕೆಲ ಸ್ಥಳಗಳಲ್ಲೂ ಚಿತ್ರ ಸಾಗುತ್ತದೆ. ಚಿತ್ರದಲ್ಲಿ ಮನರಂಜನೆ ಇರುತ್ತೆ. ಅದಕ್ಕಿಂತ ಹೆಚ್ಚಾಗಿ ಈ ವಯಸ್ಸಿನ ಹುಡುಗಿಯರು ಏನಿಷ್ಟ ಪಡ್ತಾರೆ, ಎಂಥಾ ಕಷ್ಟಪಡ್ತಾರೆ, ಏನೆಲ್ಲಾ ತೊಂದರೆ ಅನುಭವಿಸ್ತಾರೆ ಎಂಬುದನ್ನು ಹೇಳುತ್ತಿದ್ದಾರಂತೆ ಅವರು. ಚಿತ್ರಕ್ಕೆ ಸುಹಾಸ್‌ ಗಂಗಾಧರ್‌ ಹಾಗೂ ವಿಜಯಲಕ್ಷ್ಮಿ ಸಿಂಗ್‌ ಚಿತ್ರಕಥೆ ಬರೆದರೆ, ಸಿಂಪಲ್‌ ಸುನಿ ಹಾಗೂ ಅಭಿಷೇಕ್‌ ಅವರು ಚಿತ್ರಕ್ಕೆ ಮಾತುಗಳನ್ನು ಪೋಣಿಸಿದ್ದಾರೆ.

ಚಿತ್ರದ ಹಾಡುಗಳಿಗೆ ಜೋಶ್ವಾ ಶ್ರೀಧರ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ದೃಶ್ಯಗಳನ್ನು ಕರಮ್‌ ಚಾವ್ಲಾ ಅವರು ಛಾಯಾಗ್ರಹಣ ಮಾಡಿದ್ದಾರೆ. “ಯಾನ’ ಚಿತ್ರದಲ್ಲಿ ವೈಭವಿ, ವೈನಿಧಿ, ವೈಸಿರಿ ಅವರೊಂದಿಗೆ ಚಕ್ರವರ್ತಿ, ಸುಮುಖ, ಅಭಿಷೇಕ್‌, ಅನಂತನಾಗ್‌, ಸುಹಾಸಿನಿ, ಸಾಧುಕೋಕಿಲ, ರಂಗಾಯಣ ರಘು, ಚಿಕ್ಕಣ್ಣ, ರಾಮಕೃಷ್ಣ, ಸುಂದರ ರಾಜ್‌, ಸುಂದರ್‌, ವೀಣಾಸುಂದರ್‌, ಎಂ.ಎನ್‌.ಲಕ್ಷ್ಮೀದೇವಿ ಮುಂತಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.