ಥಿಯೇಟರ್‌ನಲ್ಲಿ ಜಲ್ಲಿಕಟ್ಟು ಆಟ: ಗೋ ಸಂರಕ್ಷಣೆ ರಾಜಕೀಯದ ಸುತ್ತ ಒಂದು ಚಿತ್ರ


Team Udayavani, Jan 18, 2022, 2:57 PM IST

jallikattu

ತಮಿಳುನಾಡಿನ “ಜಲ್ಲಿಕಟ್ಟು’ ಸಾಂಪ್ರದಾಯಿಕ ಕ್ರೀಡೆಯ ಬಗ್ಗೆ ನೀವು ಕೇಳಿರಬಹುದು. ರಾಜಕೀಯ ಮತ್ತು ನ್ಯಾಯಾಂಗದ ಅಂಗಳದಲ್ಲಿ ಆಗಾಗ್ಗೆ ಸುದ್ದಿಯಾಗುವ ಇದೇ “ಜಲ್ಲಿಕಟ್ಟು’ ಎಂಬ ಹೆಸರಿನಲ್ಲಿ ಕನ್ನಡದಲ್ಲಿ ಚಿತ್ರವೊಂದು ತೆರೆಗೆ ಬರುವ ತಯಾರಿಯಲ್ಲಿದೆ.

ಅಂದಹಾಗೆ, ಈ ಸಿನಿಮಾದ ಹೆಸರು “ಜಲ್ಲಿಕಟ್ಟು’ ಅಂತಿದ್ದರೂ, ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆಗೂ, ಇದಕ್ಕೂ ಯಾವುದೇ ಸಂಬಂಧವಿಲ್ಲ. ಇಡೀ ಸಿನಿಮಾದ ಕಥೆ ಗೋವು ಮತ್ತು ಗೋ ಸಂರಕ್ಷಣೆಯ ಸುತ್ತ ನಡೆಯುವ ಪರ-ವಿರೋಧ ಸಂಗತಿಗಳ ಸುತ್ತ ನಡೆಯುವುದರಿಂದ, ಚಿತ್ರದ ಕಥೆಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ನಮ್ಮ ಸಿನಿಮಾಕ್ಕೆ “ಜಲ್ಲಿಕಟ್ಟು’ ಎಂದು ಹೆಸರಿಟ್ಟಿದ್ದೇವೆ ಎನ್ನುವುದು ಚಿತ್ರತಂಡದ ಮಾತು.

ಹಲವು ವರ್ಷಗಳಿಂದ ರಂಗಭೂಮಿಯಲ್ಲಿ ಸಕ್ರಿಯವಾಗಿರುವ, ಈಗಾಗಲೇ “ರಾಜ್‌ ಬಹದ್ದೂರ್‌’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಅನುಭವವಿರುವ ಆಲ್ವಿನ್‌ ಫ್ರಾನ್ಸಿಸ್‌ “ಜಲ್ಲಿಕಟ್ಟು’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. “ಭುವನ್‌ ಸಿನಿಮಾಸ್‌’ ಬ್ಯಾನರ್‌ನಲ್ಲಿ ಭುವನ್‌ ಸುರೇಶ್‌ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.

ಇದನ್ನೂ ಓದಿ:15 ನಿಮಿಷದ ವಿಳಂಬಕ್ಕೆ ಕರ್ನಾಟಕದ ಸ್ಥಬ್ದಚಿತ್ರವನ್ನು ರಕ್ಷಣಾ ಇಲಾಖೆ ತಿರಸ್ಕರಿಸಿತ್ತು!

ಪ್ರಭು ಸೂರ್ಯ ಮತ್ತು ಶಿಲ್ಪಾ, ಲಿಖೀತಾ ಸೋನು “ಜಲ್ಲಿಕಟ್ಟು’ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದು, ಉಳಿದಂತೆ ಸುಚೇಂದ್ರ ಪ್ರಸಾದ್‌, ಶೋಭರಾಜ್‌, ಕಿರಿಕ್‌ ಕೀರ್ತಿ, ಸಂಗೀತಾ, ಮಜಾ ಟಾಕೀಸ್‌ ಪವನ್‌, ಕೆಂಪೇಗೌಡ, ಉಗ್ರಂ ರವಿ, ಕರಾಟೆ ರಾಜ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ತಮ್ಮ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಆಲ್ವಿನ್‌ ಫ್ರಾನ್ಸಿಸ್‌, “ಗೋ ಹತ್ಯೆ ವಿಷಯವನ್ನು ಇಟ್ಟುಕೊಂಡು ಮಾಡುತ್ತಿರುವ ಈ ಸಿನಿಮಾ ಮಾಡಿದ್ದೇವೆ. ಹೆಣ್ಣಿನಷ್ಟೇ ಗೋವು ಪವಿತ್ರ ಎಂಬ ಸಂದೇಶ ಸಿನಿಮಾದಲ್ಲಿದೆ. ಗೋ ಹತ್ಯೆಯ ಪರ-ವಿರೋಧ ವಾದಗಳು, ಅದರ ಹಿಂದಿನ ರಾಜಕೀಯ ಎಲ್ಲವನ್ನೂ ಇಲ್ಲಿ ತೋರಿಸಿದ್ದೇವೆ. ಈಗಾಗಲೇ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸೆನ್ಸಾರ್‌ನಿಂದ “ಎ’ ಪ್ರಮಾಣಪತ್ರ ಕೂಡ ಸಿಕ್ಕಿದೆ’ ಎಂಬ ಮಾಹಿತಿ ನೀಡುತ್ತಾರೆ.

“ಜಲ್ಲಿಕಟ್ಟು’ ಚಿತ್ರದ ನಾಲ್ಕು ಹಾಡುಗಳಿಗೆ ವಿಜಯ್‌ ಯಾಡ್ಲಿ ಸಂಗೀತ ಸಂಯೋಜಿಸಿದ್ದು, ಅಂತೋನಿ ದಾಸನ್‌, ಚೇತನ್‌ ಕುಮಾರ್‌, ಅನುರಾಧಾ ಭಟ್‌, ಚೈತ್ರಾ ಮೊದಲಾದವರು ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ.

ಚಿತ್ರಕ್ಕೆ ವೀರೇಶ್‌ ಎನ್‌ಟಿಎ ಛಾಯಾಗ್ರಹಣ, ವಿಶ್ವ ಎನ್‌.ಎಂ ಸಂಕಲನವಿದೆ. ಬೆಂಗಳೂರು, ಮಂಡ್ಯ, ಮಂಗಳೂರು ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಕೋವಿಡ್‌ ಮೊದಲ ಲಾಕ್‌ಡೌನ್‌ ವೇಳೆ ಶುರುವಾದ “ಜಲ್ಲಿಕಟ್ಟು’ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಆದಷ್ಟು ಬೇಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲಿದ್ದೇವೆ ಎನ್ನುವುದು ಚಿತ್ರತಂಡದ ಮಾಹಿತಿ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.