ಥಿಯೇಟರ್‌ನಲ್ಲಿ ಜಲ್ಲಿಕಟ್ಟು ಆಟ: ಗೋ ಸಂರಕ್ಷಣೆ ರಾಜಕೀಯದ ಸುತ್ತ ಒಂದು ಚಿತ್ರ


Team Udayavani, Jan 18, 2022, 2:57 PM IST

jallikattu

ತಮಿಳುನಾಡಿನ “ಜಲ್ಲಿಕಟ್ಟು’ ಸಾಂಪ್ರದಾಯಿಕ ಕ್ರೀಡೆಯ ಬಗ್ಗೆ ನೀವು ಕೇಳಿರಬಹುದು. ರಾಜಕೀಯ ಮತ್ತು ನ್ಯಾಯಾಂಗದ ಅಂಗಳದಲ್ಲಿ ಆಗಾಗ್ಗೆ ಸುದ್ದಿಯಾಗುವ ಇದೇ “ಜಲ್ಲಿಕಟ್ಟು’ ಎಂಬ ಹೆಸರಿನಲ್ಲಿ ಕನ್ನಡದಲ್ಲಿ ಚಿತ್ರವೊಂದು ತೆರೆಗೆ ಬರುವ ತಯಾರಿಯಲ್ಲಿದೆ.

ಅಂದಹಾಗೆ, ಈ ಸಿನಿಮಾದ ಹೆಸರು “ಜಲ್ಲಿಕಟ್ಟು’ ಅಂತಿದ್ದರೂ, ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆಗೂ, ಇದಕ್ಕೂ ಯಾವುದೇ ಸಂಬಂಧವಿಲ್ಲ. ಇಡೀ ಸಿನಿಮಾದ ಕಥೆ ಗೋವು ಮತ್ತು ಗೋ ಸಂರಕ್ಷಣೆಯ ಸುತ್ತ ನಡೆಯುವ ಪರ-ವಿರೋಧ ಸಂಗತಿಗಳ ಸುತ್ತ ನಡೆಯುವುದರಿಂದ, ಚಿತ್ರದ ಕಥೆಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ನಮ್ಮ ಸಿನಿಮಾಕ್ಕೆ “ಜಲ್ಲಿಕಟ್ಟು’ ಎಂದು ಹೆಸರಿಟ್ಟಿದ್ದೇವೆ ಎನ್ನುವುದು ಚಿತ್ರತಂಡದ ಮಾತು.

ಹಲವು ವರ್ಷಗಳಿಂದ ರಂಗಭೂಮಿಯಲ್ಲಿ ಸಕ್ರಿಯವಾಗಿರುವ, ಈಗಾಗಲೇ “ರಾಜ್‌ ಬಹದ್ದೂರ್‌’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಅನುಭವವಿರುವ ಆಲ್ವಿನ್‌ ಫ್ರಾನ್ಸಿಸ್‌ “ಜಲ್ಲಿಕಟ್ಟು’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. “ಭುವನ್‌ ಸಿನಿಮಾಸ್‌’ ಬ್ಯಾನರ್‌ನಲ್ಲಿ ಭುವನ್‌ ಸುರೇಶ್‌ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.

ಇದನ್ನೂ ಓದಿ:15 ನಿಮಿಷದ ವಿಳಂಬಕ್ಕೆ ಕರ್ನಾಟಕದ ಸ್ಥಬ್ದಚಿತ್ರವನ್ನು ರಕ್ಷಣಾ ಇಲಾಖೆ ತಿರಸ್ಕರಿಸಿತ್ತು!

ಪ್ರಭು ಸೂರ್ಯ ಮತ್ತು ಶಿಲ್ಪಾ, ಲಿಖೀತಾ ಸೋನು “ಜಲ್ಲಿಕಟ್ಟು’ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದು, ಉಳಿದಂತೆ ಸುಚೇಂದ್ರ ಪ್ರಸಾದ್‌, ಶೋಭರಾಜ್‌, ಕಿರಿಕ್‌ ಕೀರ್ತಿ, ಸಂಗೀತಾ, ಮಜಾ ಟಾಕೀಸ್‌ ಪವನ್‌, ಕೆಂಪೇಗೌಡ, ಉಗ್ರಂ ರವಿ, ಕರಾಟೆ ರಾಜ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ತಮ್ಮ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಆಲ್ವಿನ್‌ ಫ್ರಾನ್ಸಿಸ್‌, “ಗೋ ಹತ್ಯೆ ವಿಷಯವನ್ನು ಇಟ್ಟುಕೊಂಡು ಮಾಡುತ್ತಿರುವ ಈ ಸಿನಿಮಾ ಮಾಡಿದ್ದೇವೆ. ಹೆಣ್ಣಿನಷ್ಟೇ ಗೋವು ಪವಿತ್ರ ಎಂಬ ಸಂದೇಶ ಸಿನಿಮಾದಲ್ಲಿದೆ. ಗೋ ಹತ್ಯೆಯ ಪರ-ವಿರೋಧ ವಾದಗಳು, ಅದರ ಹಿಂದಿನ ರಾಜಕೀಯ ಎಲ್ಲವನ್ನೂ ಇಲ್ಲಿ ತೋರಿಸಿದ್ದೇವೆ. ಈಗಾಗಲೇ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸೆನ್ಸಾರ್‌ನಿಂದ “ಎ’ ಪ್ರಮಾಣಪತ್ರ ಕೂಡ ಸಿಕ್ಕಿದೆ’ ಎಂಬ ಮಾಹಿತಿ ನೀಡುತ್ತಾರೆ.

“ಜಲ್ಲಿಕಟ್ಟು’ ಚಿತ್ರದ ನಾಲ್ಕು ಹಾಡುಗಳಿಗೆ ವಿಜಯ್‌ ಯಾಡ್ಲಿ ಸಂಗೀತ ಸಂಯೋಜಿಸಿದ್ದು, ಅಂತೋನಿ ದಾಸನ್‌, ಚೇತನ್‌ ಕುಮಾರ್‌, ಅನುರಾಧಾ ಭಟ್‌, ಚೈತ್ರಾ ಮೊದಲಾದವರು ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ.

ಚಿತ್ರಕ್ಕೆ ವೀರೇಶ್‌ ಎನ್‌ಟಿಎ ಛಾಯಾಗ್ರಹಣ, ವಿಶ್ವ ಎನ್‌.ಎಂ ಸಂಕಲನವಿದೆ. ಬೆಂಗಳೂರು, ಮಂಡ್ಯ, ಮಂಗಳೂರು ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಕೋವಿಡ್‌ ಮೊದಲ ಲಾಕ್‌ಡೌನ್‌ ವೇಳೆ ಶುರುವಾದ “ಜಲ್ಲಿಕಟ್ಟು’ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಆದಷ್ಟು ಬೇಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲಿದ್ದೇವೆ ಎನ್ನುವುದು ಚಿತ್ರತಂಡದ ಮಾಹಿತಿ.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.