ಪುನೀತ್‌ ಬರ್ತ್‌ಡೇ ಬಳಿಕ “ಜೇಮ್ಸ್‌’

ಎರಡನೇ ಹಂತದ ಶೂಟಿಂಗ್‌ಗೆ ಚಿತ್ರತಂಡ ತಯಾರಿ

Team Udayavani, Feb 24, 2020, 7:02 AM IST

Punith

ಪುನೀತ್‌ರಾಜಕುಮಾರ್‌ ಅಭಿನಯದ “ಜೇಮ್ಸ್‌’ ಶುರುವಾಗಿದ್ದು ಗೊತ್ತೇ ಇದೆ. ಸದ್ಯಕ್ಕೆ ಒಂದೆರೆಡು ಮಾತಿನ ದೃಶ್ಯ ಹಾಗು ಫೈಟ್‌ ಬಿಟ್‌ ಚಿತ್ರೀಕರಣಗೊಂಡಿದ್ದು, ಇದೀಗ ಎರಡನೇ ಹಂತದ ಚಿತ್ರೀಕರಣಕ್ಕೆ ತಯಾರಿ ನಡೆಸಲಾಗಿದೆ. ಹೌದು, “ಬಹದ್ದೂರ್‌’ ಚೇತನ್‌ಕುಮಾರ್‌ ನಿರ್ದೇಶನದ “ಜೇಮ್ಸ್‌’ ಈಗ ಎರಡನೇ ಹಂತದ ಚಿತ್ರೀಕರಣಕ್ಕೆ ರೆಡಿಯಾಗುತ್ತಿದೆ. ಮೊದಲ ಹಂತದಲ್ಲಿ ಚಿಕ್ಕದ್ದೊಂದು ಫೈಟ್‌ ಬಿಟ್‌ ಹಾಗು ಸಣ್ಣ ಮಾತಿನ ಭಾಗದ ದೃಶ್ಯವನ್ನು ಚಿತ್ರೀಕರಿಸಲಾಗಿದೆ.

ಎರಡನೇ ಹಂತದ ಚಿತ್ರೀಕರಣ ಮಾರ್ಚ್‌ 28 ರಿಂದ ನಡೆಯಲಿದೆ. ಬೆಂಗಳೂರಿನಲ್ಲಿ ಸುಮಾರು 10 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಅದಾದ ಬಳಿಕ ಉತ್ತರ ಕರ್ನಾಟಕ ಭಾಗದಲ್ಲಿ 10 ದಿನಗಳ ಕಾಲ ಚಿತ್ರೀಕರಿಸುವ ಯೋಜನೆ ಇದೆ ಎಂಬುದು ನಿರ್ದೇಶಕ “ಬಹದ್ದೂರ್‌’ ಚೇತನ್‌ಕುಮಾರ್‌ ಮಾತು. ಸದ್ಯಕ್ಕೆ ಪುನೀತ್‌ರಾಜಕುಮಾರ್‌ ಅವರು “ಯುವರತ್ನ’ ಚಿತ್ರದ ಡಬ್ಬಿಂಗ್‌ನಲ್ಲಿ ಬಿಝಿಯಾಗಿದ್ದಾರೆ. ಅದಾದ ಬಳಿಕ ಫಾರಿನ್‌ನಲ್ಲಿ ಸಾಂಗ್‌ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಾರ್ಚ್‌ 17 ರಂದು ಅವರ ಬರ್ತ್‌ಡೇ ಮುಗಿಸಿದ ನಂತರ “ಜೇಮ್ಸ್‌’ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು, ನಾಯಕಿಯ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಕನ್ನಡದ ನಟಿಯರು ಸೇರಿದಂತೆ ಪರಭಾಷೆ ನಟಿಯರಿಗೂ ಹುಡುಕಾಟ ನಡೆದಿದೆ. ಸರಿಯಾಗಿ ಡೇಟ್‌ ಹೊಂದಾಣಿಕೆಯಾಗುತ್ತಿಲ್ಲ. ಇಷ್ಟರಲ್ಲೇ ನಾಯಕಿ ಯಾರು ಎಂಬುದನ್ನು ಬಹಿರಂಗ ಪಡಿಸುತ್ತೇನೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕ ಚೇತನ್‌. “ಇದೊಂದು ಪಕ್ಕಾ ಕಮರ್ಷಿಯಲ್‌ ಎಂಟರ್‌ಟೈನರ್‌ ಸಿನಿಮಾ.

ಇಲ್ಲಿಯವರೆಗೆ ಪುನೀತ್‌ ಅವರು ಮಾಡಿದ ಚಿತ್ರಗಳಿಗಿಂತಲೂ ಭಿನ್ನವಾಗಿರುತ್ತೆ. ಪಾತ್ರ ಕೂಡ ಹೊಸ ರೀತಿಯಾಗಿದೆ. ಬಾಡಿಲಾಂಗ್ವೇಜ್‌ ಕೂಡ ಹೊಸತನದಿಂದ ಕೂಡಿದೆ. “ಜೇಮ್ಸ್‌’ ಎಂಬ ಶೀರ್ಷಿಕೆಗೆ ತಕ್ಕದ್ದಾದ ಪಾತ್ರವಿದೆ. ಇಲ್ಲಿನ ಮುಖ್ಯ ಆಕರ್ಷಣೆ ಅಂದರೆ, ಅದು ಹೈವೋಲ್ಟೆಜ್‌ ಆ್ಯಕ್ಷನ್‌. ಪುನೀತ್‌ ಸರ್‌ ಅವರ ವಿಶೇಷ ಸ್ಟಂಟ್ಸ್‌ ಇಲ್ಲಿರಲಿದೆ. ಅವರ ಫ್ಯಾನ್ಸ್‌ಗೆ ವಿಶೇಷತೆಗಳು ತುಂಬಿರಲಿವೆ. ಒಟ್ಟಾರೆ, “ಜೇಮ್ಸ್‌’ ಪಕ್ಕಾ ಮನರಂಜನಾತ್ಮಕವಾಗಿಯೇ ಮೂಡಿಬರಲಿದೆ’ ಎಂಬುದು ಚೇತನ್‌ಕುಮಾರ್‌ ಮಾತು.

ಚಿತ್ರಕ್ಕೆ ಚರಣ್‌ರಾಜ್‌ ಸಂಗೀತವಿದೆ. ಶ್ರೀಷ ಛಾಯಾಗ್ರಹಣವಿದೆ. ರವಿಸಂತೆ ಹೈಕ್ಲು ಕಲಾ ನಿರ್ದೇಶನವಿದೆ. ಕಿಶೋರ್‌ ಪತ್ತಿಕೊಂಡ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹರ್ಷ ಅವರ ನೃತ್ಯ ನಿರ್ದೇಶನವಿದೆ. ದೀಪು ಎಸ್‌.ಕುಮಾರ್‌ ಅವರ ಸಂಕಲನ ಚಿತ್ರಕ್ಕಿದೆ. ಉಳಿದಂತೆ “ಜೇಮ್ಸ್‌’ನಲ್ಲಿ ಯಾರೆಲ್ಲಾ ಇರುತ್ತಾರೆ ಎಂಬುದನ್ನೂ ಇಷ್ಟರಲ್ಲೇ ಹೇಳುತ್ತೇನೆ ಎಂದು ಸುಮ್ಮನಾಗುತ್ತಾರೆ ಚೇತನ್‌.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.