ಪುನೀತ್‌ ನೆನಪಿನಲ್ಲಿ ಜೇಮ್ಸ್‌ ಪ್ರಿ-ರಿಲೀಸ್‌


Team Udayavani, Mar 15, 2022, 9:11 AM IST

ಪುನೀತ್‌ ನೆನಪಿನಲ್ಲಿ ಜೇಮ್ಸ್‌ ಪ್ರಿ-ರಿಲೀಸ್‌

ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅಭಿನಯದ “ಜೇಮ್ಸ್‌’ ಬಿಡುಗಡೆಗೆ ಕೌಂಟ್‌ಡೌನ್‌ ಶುರುವಾಗಿದೆ. ದಿನದಿಂದ ದಿನಕ್ಕೆ ಸ್ಯಾಂಡಲ್‌ವುಡ್‌ ಅಂಗಳಲ್ಲಿ ಮತ್ತು ಅಭಿಮಾನಿಗಳಲ್ಲಿ “ಜೇಮ್ಸ್‌’ ಫೀವರ್‌ ಜೋರಾಗುತ್ತಿದೆ. ಇದರ ಬೆನ್ನಲ್ಲೆ ಭಾನುವಾರ ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ “ಜೇಮ್ಸ್‌’ ಚಿತ್ರತಂಡ “ಜೇಮ್ಸ್‌’ ಸಿನಿಮಾದ ಅದ್ಧೂರಿ ಪ್ರಿ-ರಿಲೀಸ್‌ ಇವೆಂಟ್‌ ಅನ್ನು ಹಮ್ಮಿಕೊಂಡಿತ್ತು. ಸುಮಾರು ಮೂರು ಗಂಟೆಗಳ ಕಾಲ ನಡೆದ “ಜೇಮ್ಸ್‌’ ಪ್ರಿ-ರಿಲೀಸ್‌ ಇವೆಂಟ್‌ನಲ್ಲಿ ವರನಟ ಡಾ. ರಾಜಕುಮಾರ್‌ ಕುಟುಂಬದ ಬಹುತೇಕ ಸದಸ್ಯರು, “ಜೇಮ್ಸ್‌’ ಚಿತ್ರದ ಕಲಾವಿದರು, ತಂತ್ರಜ್ಞರು ಮತ್ತು ಚಿತ್ರರಂಗದ ಅನೇಕ ಗಣ್ಯರು, ಸಾವಿರಾರು ಸಂಖ್ಯೆಯಲ್ಲಿ ಪುನೀತ್‌ ರಾಜಕುಮಾರ್‌ ಅಭಿಮಾನಿಗಳು ಭಾಗಿಯಾಗಿದ್ದರು. ಪುನೀತ್‌ ರಾಜಕುಮಾರ್‌ ಅವರೊಂದಿಗಿನ ಒಡನಾಟ, “ಜೇಮ್ಸ್‌’ ಚಿತ್ರದ ವಿಶೇಷತೆಗಳ ಬಗ್ಗೆ ಕಾರ್ಯಕ್ರಮದಲ್ಲಿ ಹಾಜರಿದ್ದ ಅನೇಕರು ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಹಂಚಿಕೊಂಡರು.

ಪ್ರಿ-ರಿಲೀಸ್‌ಗೆ ಅಭಿಮಾನಿಗಳ ದಂಡು

ಪುನೀತ್‌ ರಾಜಕುಮಾರ್‌ ಅಭಿಮಾನಿಗಳಿಗಾಗಿಯೇ “ಜೇಮ್ಸ್‌’ ಚಿತ್ರತಂಡ ಈ ಪ್ರಿ-ರಿಲೀಸ್‌ ಇವೆಂಟ್‌ ಆಯೋಜಿಸಿತ್ತು. ಕಾರ್ಯಕ್ರಮಕ್ಕಾಗಿ ಮುಂಚಿತವಾಗಿಯೇ ಅಭಿಮಾನಿಗಳಿಗೆ ಸುಮಾರು 3 ಸಾವಿರಕ್ಕೂ ಹೆಚ್ಚು ವಿಶೇಷ ಪಾಸ್‌ಗಳನ್ನು ವಿತರಣೆ ಮಾಡಲಾಗಿತ್ತು. ಒಂದು ಪಾಸ್‌ನಲ್ಲಿ ಇಬ್ಬರ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ಕೊನೆಯ ಕ್ಷಣದಲ್ಲಿ ವಿತರಿಸಿದ ಪಾಸ್‌ಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಜಮಾಯಿಸಿ, “ಜೇಮ್ಸ್‌’ ಪ್ರಿ-ರಿಲೀಸ್‌ ಇವೆಂಟ್‌ ಕಣ್ತುಂಬಿಕೊಂಡರು. ಇನ್ನು ಕಾರ್ಯಕ್ರಮಕ್ಕಾಗಿ 100/40 ಅಳತೆಯ ಬೃಹತ್‌ ಸೆಟ್‌ ಅಳವಡಿಸಲಾಗಿದ್ದು, ವೇದಿಕೆ ಕಾರ್ಯಕ್ರಮವನ್ನು ಸುಮಾರು 18 ಎಲ್ ಇಡಿ ಸ್ಕ್ರೀನ್‌ಗಳಲ್ಲಿ ಪ್ರಸಾರವಾಗುತ್ತಿತ್ತು. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಲೈವ್‌ ಮೂಲಕವೂ “ಜೇಮ್ಸ್‌’ ಪ್ರಿ-ರಿಲೀಸ್‌ ಇವೆಂಟ್‌ ಬಿತ್ತರವಾಯಿತು.

ವರನಟ ರಾಜ್‌ ಕುಟುಂಬ ಭಾಗಿ

“ಜೇಮ್ಸ್‌’ ಪ್ರಿ-ರಿಲೀಸ್‌ ಇವೆಂಟ್‌ನಲ್ಲಿ ನಟರಾದ ಶಿವರಾಜಕುಮಾರ್‌, ರಾಘವೇಂದ್ರ ರಾಜಕುಮಾರ್‌, ಪುನೀತ್‌ ರಾಜಕುಮಾರ್‌ ಪತ್ನಿ ಅಶ್ವಿ‌ನಿ, ಸೋದರಿಯರಾದ ಲಕ್ಷ್ಮೀ, ಪೂರ್ಣಿಮಾ, ಎಸ್‌. ಎ ಚಿನ್ನೇಗೌಡ, ಎಸ್‌. ಎ ಗೋವಿಂದ ರಾಜ್‌, ನಟರಾದ ಶ್ರೀಮುರಳಿ, ವಿನಯ್‌ ರಾಜಕುಮಾರ್‌, ಧನ್ಯಾ, ಧೀರನ್‌ ರಾಮ್‌ಕುಮಾರ್‌ ಸೇರಿದಂತೆ ವರನಟ ಡಾ. ರಾಜಕುಮಾರ್‌ ಕುಟುಂಬದ ಬಹುತೇಕ ಸದಸ್ಯರು ಹಾಜರಿದ್ದು, ವೇದಿಕೆಯ ಮೇಲೆ ಪುನೀತ್‌ ಅವರನ್ನು ನೆನೆದರು.

ವೇದಿಕೆ ಮೇಲೆ ಅಪ್ಪು ನೆನಪು ಮೆಲುಕು

ನಾವು ಐದು ಜನ ಸಹೋದರ- ಸಹೋದರಿಯರು ಒಟ್ಟಿಗೆ ಇದ್ದೆವು. ಈಗ ನಮ್ಮ ಜೊತೆ ಒಬ್ಬ ಇಲ್ಲ. ಅದರಲ್ಲೂ ಚಿಕ್ಕವನಾಗಿದ್ದ ಅಪ್ಪು ಹೋಗಿದ್ದು ಎಂದೂ ಮಾಯದ ನೋವು. ಅಪ್ಪು ಎಲ್ಲರಿಗೂ ಮುದ್ದಿನ ಮಗನಾಗಿದ್ದ. ಎಲ್ಲರಿಗೂ ಅವನೆಂದರೆ ಅಚ್ಚು-ಮೆಚ್ಚು. ಅವನ ಅಗಲಿಕೆ ಯಾರಿಗೂ ಅರಗಿಸಿಕೊಳ್ಳಲು ಆಗಿಲ್ಲ. ಹೊರಗಿನಿಂದ ನೋಡುವುದಕ್ಕೆ ಚೆನ್ನಾಗಿಯೇ ಇರುತ್ತೇವೆ. ಶೂಟಿಂಗ್‌ಗೆ ಹೋಗುತ್ತೇವೆ. ಹಾಡುತ್ತೇವೆ, ಕುಣಿಯುತ್ತೇವೆ, ಡಬ್ಬಿಂಗ್‌ ಮಾಡುತ್ತೇವೆ. ಆದರೆ ಆ ನೋವು ಒಳಗಡೆಯೇ ಇದೆ. ಅಪ್ಪು ನಮ್ಮನ್ನು ಬಿಟ್ಟು ಹೋದ, ರಾಘು ಆರೋಗ್ಯ ಹೀಗೆ ಆಯಿತು. ಇವರಿಬ್ಬರೂ ನನಗಿಂತಲೂ ಚಿಕ್ಕವರು ಇವರನ್ನು ಹೀಗೆಲ್ಲ ನೋಡುವುದು ನನಗೆ ಹೇಗೆ ತಾನೆ ಸಾಧ್ಯ?

 ಶಿವರಾಜಕುಮಾರ್‌, ನಟ

ಅಪ್ಪು ಸಿನಿಮಾವನ್ನು ವಿಶ್ವದಾದ್ಯಂತ ಬಿಗ್‌ ಸ್ಕ್ರೀನ್‌ ಮೇಲೆ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ಇದೇ ಕಾರಣದಿಂದ ಇಷ್ಟೊಂದು ಸ್ಕ್ರೀನ್‌ಗಳಲ್ಲಿ “ಜೇಮ್ಸ್’ ರಿಲೀಸ್‌ ಆಗುತ್ತಿದೆ. ಸಿನಿಮಾದಲ್ಲಿ ಅಪ್ಪು ಅವರನ್ನು ನೋಡುವಾಗ ಮನಸ್ಸು ಭಾರವಾಗುತ್ತದೆ. ಅಪ್ಪು ಹೃದಯದಿಂದ ನಗುತ್ತಿದ್ದರು. ಅದು ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವಂತಿತ್ತು. ಚಿಕ್ಕಂದಿನಿಂದ ಇಲ್ಲಿಯವರೆಗೂ ಅದೇ ನಗು ಅವರಲ್ಲಿತ್ತು. ಎಲ್ಲರನ್ನೂ ರಂಜಿಸುತ್ತ ಇದ್ದವರು, “ಜೇಮ್ಸ್’ ಚಿತ್ರದ ಪ್ರಿ-ರಿಲೀಸ್‌ ಇವೆಂಟ್‌ನಲ್ಲಿ ಇಲ್ಲ ಅಂದುಕೊಂಡಾಗ ತುಂಬ ದುಃಖವಾಗುತ್ತದೆ.

 ಪ್ರಿಯಾ ಆನಂದ್‌, “ಜೇಮ್ಸ್‌’ ನಾಯಕ ನಟಿ

ಬಹಳ ಪ್ರೀತಿಯಿಂದ ಅಪ್ಪು ಮಾಮ ಎನ್ನುತ್ತಿದ್ದೆ. ಅವರ ಸಿನಿಮಾಗಳನ್ನು ಬಹಳ ಇಷ್ಟಪಟ್ಟು ನೋಡುತ್ತಿದ್ದೆ. ಅವರ ಸಿನಿಮಾಗಳನ್ನು ನೋಡಿ ನೀವು ಹೇಗೆ ಪ್ರೇರಿತರಾಗುತ್ತೀರಿ ಅಂಥ ಯಾರೋ ಪ್ರಶ್ನೆ ಕೇಳಿದ್ದರು. ಏನೇ ಇನ್ಸ್‌ಫೈರ್‌ ಆದ್ರೂ, ಅವರ ತರ ಎರಡು ಸ್ಟೆಪ್‌ ಹಾಕೋಕೆ ಆಗಲ್ಲ, ಎರಡು ಫೈಟ್‌ ಮಾಡೋಕೆ ಆಗಲ್ಲ. ಇರೋದು ಒಬ್ರೇ ಪವರ್‌ಸ್ಟಾರ್‌. ಅವರು ಪುನೀತ್‌ ರಾಜಕುಮಾರ್‌ ಮಾತ್ರ. ಅವರ ಗುಣನಡತೆ ನೋಡಿ ಎಲ್ಲ ಕಲಾವಿದರೂ ಅನುಸರಿಸುವಂಥದ್ದು ಸಾಕಷ್ಟಿದೆ. ಅವರು ಮಾಡಿದ ಎಷ್ಟೋ ಕೆಲಸಗಳು ನಮಗೆ ಗೊತ್ತೇ ಇರಲಿಲ್ಲ. ನಮ್ಮ ಪಕ್ಕದಲ್ಲೇ ದೇವರಿದ್ದರು. ಅವರನ್ನು ಮತ್ತೂಬ್ಬ ದೇವರು ಕಿತ್ತುಕೊಂಡಿದ್ದಕ್ಕೆ ಬೇಜಾರಾಗುತ್ತಿದೆ.

 ಶ್ರೀಮುರಳಿ, ನಟ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.