ಸಪ್ತ ಸಾಗರ ದಾಟಿದ ಪುನೀತ್‌ ಚಿತ್ರ: ವಿದೇಶದಲ್ಲೂ ಜೇಮ್ಸ್‌ ಅಬ್ಬರ


Team Udayavani, Mar 19, 2022, 8:55 AM IST

james

ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅಭಿನಯದ ಕೊನೆಯ ಚಿತ್ರ “ಜೇಮ್ಸ್’ ತೆರೆಕಂಡು ಎಲ್ಲೆದೆ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ತೆರೆಯ ಮೇಲೆ ಕಂಡು ಪುನೀತರಾಗಿದ್ದಾರೆ. ಜಗತ್ತಿನಾದ್ಯಂತ ಸುಮಾರು 4 ಸಾವಿರ ಪರದೆಗಳಲ್ಲಿ ಗ್ರ್ಯಾಂಡ್‌ ರಿಲೀಸ್‌ ಆಗಿ ಜೊತೆಗೆ ಬಾಕ್ಸಾಫೀಸ್‌ ಕಲೆಕ್ಷನ್‌ ಮೂಲಕ ದಾಖಲೆ ಬರೆಯುತ್ತಿರುವ “ಜೇಮ್ಸ್’ ವಾರಾಂತ್ಯದ ಟಿಕೆಟ್‌ ಎಲ್ಲ ಟಿಕೆಟ್‌ ಗಳು ಸೋಲ್ಡ್‌ ಔಟ್‌ ಆಗಿದ್ದು, ಮುಂದಿನ ವಾರ ಕೂಡ ಇದೇ ಬೇಡಿಕೆ ಮುಂದುವರೆಯಲಿದೆ ಎನ್ನಲಾಗುತ್ತಿದೆ.

ಇನ್ನು ಶುಕ್ರವಾರ ಕೂಡ “ಜೇಮ್ಸ್‌’ ತೆರೆಕಂಡ ರಾಜ್ಯದ ಎಲ್ಲ ಚಿತ್ರಮಂದಿರಗಳು ಅಭಿಮಾನಿಗಳಿಂದ ತುಂಬಿ ತುಳುಕುತ್ತಿದ್ದವು. ಅದರಲ್ಲೂ ಯುವಕರು ಮತ್ತು ಕಾಲೇಜ್‌ ವಿದ್ಯಾರ್ಥಿಗಳು ತಂಡೋಪತಂಡವಾಗಿ ಹರಿದು ಬರುತ್ತಿದ್ದ ದೃಶ್ಯಗಳು ಬಹುತೇಕ ಚಿತ್ರಮಂದಿರಗಳ ಮುಂದೆ ಕಂಡುಬಂದಿತು. ಇನ್ನು ಥಿಯೇಟರ್‌ ಗಳು ಮಾತ್ರವಲ್ಲದೆ ಕಂಠೀರವ ಸ್ಟುಡಿಯೋ ಬಳಿ ಇರುವ ಪುನೀತ್‌ ರಾಜಕುಮಾರ್‌ ಸಮಾಧಿಯ ಮುಂದೆ ಕೂಡ ಜನರ ದಂಡೇ ಹರಿದು ಬಂದಿದೆ.

ಸಪ್ತ ಸಾಗರದಾಚೆ “ಜೇಮ್ಸ್‌’ ಅಬ್ಬರ: ಅಪ್ಪು ಅಭಿಮಾನಿಗಳು ಪ್ರಪಂಚಾದ್ಯಂತ ಇದ್ದು, ಇದೀಗ “ಜೇಮ್ಸ್‌’ ಏಳು ಸಮುದ್ರಗಳನ್ನು ದಾಟಿ ದೂರದ ಅಮೆರಿಕದಲ್ಲೂ ಧೂಳೆಬ್ಬಿಸಲು ರೆಡಿಯಾಗಿದೆ. ಯುಎಸ್‌ಎನಲ್ಲಿರುವ ಕನ್ನಡ ಮೂಲದ “ಸ್ಯಾಂಡಲ್‌ವುಡ್‌ ಗೆಳೆಯರ ಬಳಗ’ ಅಮೆರಿಕದಲ್ಲಿ “ಜೇಮ್ಸ್‌’ ಚಿತ್ರಕ್ಕೆ ಭರ್ಜರಿ ಓಪನಿಂಗ್‌ ನೀಡಿದೆ. ಅಮೆರಿಕದ 35 ರಾಜ್ಯಗಳಲ್ಲಿ ಹಾಗೂ 75 ನಗರಗಳಲ್ಲಿ “ಜೇಮ್ಸ್‌’ ರೀಲಿಸ್‌ ಆಗಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಉತ್ತರ ಅಮೆರಿಕದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಕನ್ನಡದ ಚಿತ್ರವೊಂದು ಬಿಡುಗಡೆಯಾಗಿ, ಉತ್ತಮ ರೆಸ್ಪಾನ್ಸ್‌ ಪಡೆಯುತ್ತಿರುವುದು ಎನ್ನಲಾಗಿದೆ.

ಕ್ಯಾಲಿಪೋರ್ನಿಯಾದ ಸಿಲಿಕಾನ್‌ ವ್ಯಾಲಿಯಲ್ಲಿ ಮಾ. 17 ರಂದೇ ಮುಂಜಾನೆ 7.45 ಕ್ಕೆ “ಜೇಮ್ಸ್‌’ ಮೊದಲ ಪ್ರದರ್ಶನ ಕಂಡಿದ್ದು, ಚಿತ್ರ ಹೌಸ್‌ಫ‌ುಲ್‌ ಪ್ರದರ್ಶನ ಕಂಡಿದೆ.  ಮಿಚಿಗನ್‌ ಡೆಟ್ರಾಯಟ್‌ ಪ್ರದೇಶದಲ್ಲಿ ಗ್ರೂಪ್‌ ಡಾನ್ಸ್‌ ಮೂಲಕ ಅಪ್ಪುಗೆ ಗೌರವ ಸಲ್ಲಿಸಲಾಗಿದೆ. ನ್ಯೂಯಾರ್ಕ್‌ ಮತ್ತು ನ್ಯೂ ಜೆರ್ಸಿ ಪ್ರದೇಶದಲ್ಲಿ “ಜೇಮ್ಸ್‌ ಜಾತ್ರೆ’ ಸಮಾರಂಭ ಆಯೋಜಿಸಿದ್ದು, ಇಂದು (ಶನಿವಾರ) ಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಇನ್ನು ಲಾಸ್‌ ಎಂಜಲೀಸ್‌ನಲ್ಲಿ ಅಪ್ಪು ನೆನಪಿಗಾಗಿ ನಾಳೆ (ಭಾನುವಾರ) ಕಾರ್‌ ರ್ಯಾಲಿ ಆಯೋಜಿಸಿದ್ದು, ಚಿತ್ರ ಪದರ್ಶನವು ನೆರವೇರಲಿದೆ. ಚಿಕಾಗೋ, ದಲ್ಲಾಸ್‌, ಸಿಟೆಲ್‌ ಮುಂತಾದ ಪ್ರದೇಶಗಳಲ್ಲಿ ಕೂಡ “ಜೇಮ್ಸ್‌ ಜಾತ್ರೆ” ಜರುಗಲಿದೆ ಎಂದು ಅನಿವಾಸಿ ಕನ್ನಡ ಸಂಘಟನೆಗಳು ತಿಳಿಸಿವೆ.

ದಾಖಲೆಗೆ ಮಾರಾಟವಾದ ರೈಟ್‌? ಈ ಹಿಂದೆ ಯಶ್‌ ಅಭಿನಯದ “ಕೆಜಿಎಫ್’ ಸ್ಯಾಟ್‌ ಲೈಟ್‌ ರೇಟ್‌ 6 ಕೋಟಿಗೆ ಬಿಕರಿಯಾಗಿತ್ತು. ಆದರೆ “ಜೇಮ್ಸ್‌’ ಬರೋಬ್ಬರಿ 13.80 ಕೋಟಿಗೆ ಮಾರಾಟವಾಗಿದೆ ಎಂದು ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗದಲ್ಲೇ ಅತೀ ದೊಡ್ಡ ದಾಖಲೆಯಾಗಿದ್ದು, ಕನ್ನಡ ಹೊರತುಪಡಿಸಿ ಇತರ ಭಾಷೆಗಳಲ್ಲಿ ಕೂಡ ಟಿವಿ ಸ್ಯಾಟ್‌ಲೈಟ್‌ ಹಕ್ಕು ಮಾರಾಟವಾಗಿದೆ ಎನ್ನುತ್ತಿವೆ ಚಿತ್ರರಂಗದ ಮೂಲಗಳು

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.