‘ಜನ ರಕ್ಷಕ’ ಟೈಟಲ್‌ ಪೋಸ್ಟರ್‌ ರಿಲೀಸ್‌ : ನವ ನಿರ್ದೇಶಕಿಯ ಹೊಸ ಚಿತ್ರ


Team Udayavani, Jan 26, 2022, 3:05 PM IST

Janarakshaka_Film Poster Release

ಕನ್ನಡ ಚಿತ್ರರಂಗದಲ್ಲಿ ಪ್ರತಿವರ್ಷ ನೂರಾರು ಹೊಸ ಪ್ರತಿಭೆಗಳು ನಿರ್ದೇಶಕರಾಗಿ ಪರಿಚಯವಾದರೂ, ಹೀಗೆ ಪರಿಚಯವಾಗುವವರಲ್ಲಿ ಮಹಿಳಾ ನಿರ್ದೇಶಕರ ಸಂಖ್ಯೆ ತೀರಾ ಕಡಿಮೆ ಎಂದೇ ಹೇಳಬಹುದು. ಕನ್ನಡದಲ್ಲಿ ನಿರ್ದೇಶಕಿಯರ ಕೊರತೆ ಇದೆ ಎಂಬ ಮಾತುಗಳ ನಡುವೆಯೇ, ಆಗಾಗ್ಗೆ ಕೆಲವು ವನಿತೆಯರು

ನಿರ್ದೇಶಕರಾಗಿ ಚಿತ್ರರಂಗದಲ್ಲಿ ಚಿತ್ರ ಪ್ರಯೋಗಕ್ಕೆ ಮುಂದಾಗುತ್ತಲೇ ಇರುತ್ತಾರೆ ಅನ್ನೋದು ಸಮಾಧಾನದ ಸಂಗತಿ. ಈ ವರ್ಷದ ಆರಂಭದಲ್ಲಿ ಗೌರಿಶ್ರೀ ಎಂಬ ನವ ಪ್ರತಿಭೆ ನಿರ್ದೇಶಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹ ನಟಿಯಾಗಿ, ನೃತ್ಯ ಸಂಯೋಜಕಿಯಾಗಿ ಗುರುತಿಸಿಕೊಂಡಿರುವ ಗೌರಿಶ್ರೀ, ಈಗ “ಜನರಕ್ಷಕ’ ಎಂಬ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳುವ ಮೂಲಕ ಡೈರೆಕ್ಟರ್‌ ಕ್ಯಾಪ್‌ ಧರಿಸಿದ್ದಾರೆ. ಜೊತೆಗೆ ಚಿತ್ರದಲ್ಲಿ ನಾಯಕಿಯಾಗಿಯೂ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಗೌರಿಶ್ರೀ ನಿರ್ದೇಶನದ “ಜನರಕ್ಷಕ’ ಚಿತ್ರದ ಟೈಟಲ್‌ ಪೋಸ್ಟರ್‌ ಬಿಡುಗಡೆಯಾಗಿದೆ. ಹಿರಿಯ ನಿರ್ಮಾಪಕ ಮತ್ತು ವಿತರಕ ಎಸ್‌. ಎ ಚಿನ್ನೇಗೌಡ, ಕರಿಸುಬ್ಬು, ನೃತ್ಯ ನಿರ್ದೇಶಕ ಫೈವ್‌ಸ್ಟಾರ್‌ ಗಣೇಶ್‌, ನಟರಾದ ಶಿವಕುಮಾರ್‌ ಆರಾಧ್ಯ ಮೊದಲಾದವರು ಹಾಜರಿದ್ದು, “ಜನರಕ್ಷಕ’ ಚಿತ್ರದ ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕಿ ಗೌರಿಶ್ರೀ, “ಚಿತ್ರರಂಗಕ್ಕೆ ಬರಲು, ಇಲ್ಲೇ ಏನಾದ್ರೂ ಸಾಧಿಸಲು ಪುನೀತ್‌ ರಾಜಕುಮಾರ್‌ ಪ್ರೇರಣೆಯಾಗಿದ್ದರು. ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಿಗೆ ನಟಿಯಾಗಿ, ನೃತ್ಯ ಸಂಯೋಜಕಿಯಾಗಿ ಕೆಲಸ ಮಾಡಿದ ಅನುಭವವಿದೆ. ಲಾಕ್‌ಡೌನ್‌ ಸಮಯದಲ್ಲಿ ಹೊಳೆದ ಕಥೆಯೊಂದನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಮಹಿಳಾ ಕೇಂದ್ರಿತ ಕಥೆ ಇದರಲ್ಲಿದ್ದು, ಮನರಂಜನಾತ್ಮಕ ಮತ್ತು ಸಂದೇಶವಿರುವಂಥ ಸಿನಿಮಾ ಮಾಡಿದ್ದೇವೆ. ಈಗಾಗಲೇ ಸಿನಿಮಾದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್‌ ಪ್ರೊಡಕ್ಷನ್ಸ್‌ ಕೆಲಸ ನಡೆಯುತ್ತಿದೆ’ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಕ್ರಿಸ್ ಗೇಲ್ ಗೆ ಸಂದೇಶ ಕಳುಹಿಸಿದ ಪ್ರಧಾನಿ ನರೇಂದ್ರ ಮೋದಿ: ಯುನಿವರ್ಸಲ್ ಬಾಸ್ ಹೇಳಿದ್ದೇನು?

“ವಿ2 ಪ್ರೊಡಕ್ಷನ್‌’ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗಿರುವ “ಜನರಕ್ಷಕ’ ಚಿತ್ರಕ್ಕೆ “ನಾ ಭಕ್ಷಕ’ ಎಂಬ ಅಡಿಬರಹವಿದೆ. ಚಿತ್ರದಲ್ಲಿ ಗೌರಿಶ್ರೀ ಅವರೊಂದಿಗೆ ರಘು ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಸೋಮಸುಂದರ್‌, ಪ್ರಿಯಾ, ನಟರಾಜ್‌, ತ್ರಿಶೂಲ್‌, ರತ್ನಮಾಲಾ, ನಾಗೇಂದ್ರ, ಭಾಗ್ಯಶ್ರೀ ಮೊದಲಾದವರು “ಜನರಕ್ಷಕ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಜನರಕ್ಷಕ’ ಚಿತ್ರಕ್ಕೆ ಪಿ.ಕೆ.ಹೆಚ್‌ ದಾಸ್‌ ಛಾಯಾಗ್ರಹಣವಿದ್ದು, ಚಿತ್ರದ ಹಾಡುಗಳಿಗೆ ದೇವದಾಸ್‌ ಸಂಗೀತ ಸಂಯೋಜಿಸಿದ್ದಾರೆ.

ಸದ್ಯ “ಜನರಕ್ಷಕ’ ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಶೀಘ್ರದಲ್ಲಿಯೇ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ. ಒಟ್ಟಾರೆ ನಿರ್ದೇಶಕಿಯಾಗಿ “ಜನ ರಕ್ಷಕ’ ಚಿತ್ರವನ್ನು ತೆರೆಮೇಲೆ ತರಲು ಸಿದ್ಧವಾಗಿರುವ ಗೌರಿಶ್ರೀ ಅವರ ಹೊಸ ಚಿತ್ರ ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಅನ್ನೋದು ಚಿತ್ರ ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.