ಹೊಸಬರ ‘ಜನುಮದ ಜಾತ್ರೆ’ಗೆ ಮೆಚ್ಚುಗೆ
Team Udayavani, Sep 27, 2021, 2:53 PM IST
“ಜನುಮದ ಜಾತ್ರೆ’ – ಹೀಗೊಂದು ಶೀರ್ಷಿಕೆಯ ಸಂಪೂರ್ಣ ಹೊಸಬರ ಚಿತ್ರ ಕಳೆದ ವಾರ ಬಿಡುಗಡೆಯಾಗಿತ್ತು. ಹಳ್ಳಿ ಹಿನ್ನೆಲೆಯಲ್ಲಿ ನಡೆಯುವ ಈ ಸಿನಿಮಾಕ್ಕೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಹೊಸಬರ ತಂಡ ಖುಷಿಯಾಗಿದೆ. ಈ ಚಿತ್ರವನ್ನು ದೊಡ್ಮನೆ ಮಂಜುನಾಥ್ ಎಂ ನಿರ್ಮಿಸಿದ್ದಾರೆ. ಆಟೋ ಆನಂದ್ ಈ ಚಿತ್ರದ ನಿರ್ದೇಶಕರು.
ಜನ ಚಿತ್ರಮಂದಿರಕ್ಕೆ ಬರಬೇಕಾದರೆ ಪಕ್ಕಾ ಹಳ್ಳಿ ಸೊಗಡಿನ ದೇಸಿ ಸಿನಿಮಾ ಕೊಡಬೇಕೆಂಬ ಉದ್ದೇಶದಿಂದ “ಜನುಮದ ಜೋಡಿ’ ಚಿತ್ರ ಮಾಡಿದ್ದು, ಗ್ರಾಮೀಣ ಶೈಲಿಯನ್ನು ಸಿನಿಮಾದಲ್ಲಿ ಪ್ರಸ್ತುತ ಪಡಿಸಿದ್ದಾರೆ. ಮಾಟ, ಮಂತ್ರ, ಅದರಿಂದಾಗುವ ತೊಂದರೆ, ಪರಿಹಾರ… ಹೀಗೆ ಹಲವು ವಿಚಾರಗಳನ್ನು ಚಿತ್ರದಲ್ಲಿ ಹೇಳಲಾಗಿದೆ. ಬಹುತೇಕ ಚಿತ್ರೀಕರಣ ಕೂಡಾ ಹಳ್ಳಿಯಲ್ಲೇ ನಡೆದಿದೆ.
ಇದನ್ನೂ ಓದಿ:ಹೈ ಸ್ಪೀಡ್ ನಲ್ಲಿ ಮೇಘಾ ಶೆಟ್ಟಿ ಸಿನಿ ರೈಡ್
ದುಷ್ಟಶಕ್ತಿಯೊಂದು ನಾಯಕನ ಕುಟುಂಬಕ್ಕೆ ಯಾವ ರೀತಿ ತೊಂದರೆ ಕೊಡುತ್ತದೆ ಮತ್ತು ಅದರಿಂದ ಆ ಕುಟುಂಬ ಹಾಗೂ ತನ್ನ ಪ್ರೀತಿಯನ್ನು ನಾಯಕ ಹೇಗೆ ಉಳಿಸಿಕೊಳ್ಳುತ್ತಾನೆ ಎಂಬ ಅಂಶದೊಂದಿಗೆ ಚಿತ್ರ ಸಾಗುತ್ತದೆಯಂತೆ. ಜೊತೆಗೆ ಸುಖ ಬಂದಾಗ ಹಿಂದಿನ ಕಷ್ಟವನ್ನು ಮರೆಯಬೇಡಿ ಎನ್ನುವ ಸಂದೇಶ ಕೂಡಾ ಈ ಚಿತ್ರದಲ್ಲಿದೆ.
ನಾಯಕನಾಗಿ ಮದನ್ಕುಮಾರ್, ನಾಯಕಿಯಾಗಿ ಚೈತ್ರಾ ಅಭಿನುಸಿದ್ದು, ಮತ್ತೂಂದು ಜೋಡಿಯಾಗಿ ಮಂಡ್ಯ ಕೆಂಪ ಹಾಗೂ ಅಂಜಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ