ಹೊರ ಬಂತು ಜವ ಹಾಡುಗಳು
Team Udayavani, Oct 23, 2017, 10:57 AM IST
ಸಾಯಿಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಜವ’ ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಡೆಯಿತು. ನಟ ಶಿವರಾಜಕುಮಾರ್ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. “ಚಿತ್ರದ ಟೈಟಲ್ ವಿಭಿನ್ನವಾಗಿದ್ದು, ಸಿನಿಮಾ ನೋಡಬೇಕು ಎನಿಸುವಂತಿದೆ. ಹೊಸಬರ ತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು. ಅಂದಹಾಗೆ, “ಜವ’ ಚಿತ್ರವನ್ನು ಅಭಯ್ ಚಂದ್ರ ನಿರ್ದೇಶಿಸಿದ್ದಾರೆ. ಇವರಿಗಿದು ಮೊದಲ ಸಿನಿಮಾ.
“ಜವ’ ಒಂದು ಮಿಸ್ಟರಿ-ಥ್ರಿಲ್ಲರ್ ಕಥೆಯಾಗಿದ್ದು, ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣವಾಗಿದೆ. ಚಿತ್ರಕ್ಕೆ ಅಭಯ್ ಚಂದ್ರ ಸಹೋದರ ವಿನಯ್ ಚಂದ್ರ ಸಂಗೀತ ನೀಡಿದ್ದಾರೆ. ಸನ್ನಿವೇಶಕ್ಕೆ ತಕ್ಕಂತಹ ಹಾಡುಗಳಿದ್ದು, ಜನಕ್ಕೆ ಇಷ್ಟವಾಗುವ ವಿಶ್ವಾಸ ಅವರಿಗಿದೆ. ಈ ಚಿತ್ರವನ್ನು ತಮ್ಮದೇ ನಿರ್ಮಾಣ ಸಂಸ್ಥೆ ಹುಟ್ಟುಹಾಕಿ ನಿರ್ಮಿಸಿದ್ದಾಗಿ ಹೇಳಿಕೊಂಡರು.
ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸಾಯಿಕುಮಾರ್ ಅವರಿಗೆ “ಜವ’ ಒಂದು ವಿಭಿನ್ನ ಸಿನಿಮಾ ಎನಿಸಿದೆಯಂತೆ. ಜೊತೆಗೆ ಸಹೋದರರಾದ ವಿನಯ್ ಚಂದ್ರ ಹಾಗೂ ಅಭಯ್ ಚಂದ್ರ ಅವರ ಸಿನಿಮಾ ಪ್ರೀತಿ ಕೂಡಾ ಇಷ್ಟವಾಗಿದ್ದಾಗಿ ಹೇಳುತ್ತಾರೆ ಸಾಯಿಕುಮಾರ್. “ರಂಗಿತರಂಗ’ ಮಾಡುವಾ ಅನೂಪ್ ಹಾಗೂ ನಿರೂಪ್ ಅವರನ್ನು ರಾಮ-ಲಕ್ಷ್ಮಣ ಎಂದು ಕರೆಯುತ್ತಿದ್ದೆ.
ಈ ಅಣ್ಣ-ತಮ್ಮಂದಿರನ್ನು ಲವ-ಕುಶ ಎಂದು ಕರೆಯಲಿಚ್ಛಿಸುತ್ತೇನೆ. ಕನ್ನಡದಲ್ಲಿ ಈಗ ಸಾಕಷ್ಟು ಪ್ರಯೋಗಾತ್ಮಕ, ಹೊಸ ಬಗೆಯ ಸಿನಿಮಾಗಳು ಬರುತ್ತಿವೆ. ಆ ಸಾಲಿಗೆ “ಜವ’ ಕೂಡಾ ಸೇರುತ್ತದೆ ಎಂಬ ನಂಬಿಕೆ ಇದೆ’ ಎನ್ನುವುದು ಸಾಯಿಕುಮಾರ್ ಮಾತು. ಆಡಿಯೋ ಬಿಡುಗಡೆಯಲ್ಲಿ ನಟಿ ಭಾವನಾ, ಅನೂಪ್ ರೇವಣ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಾ.ನಗರದಲ್ಲಿ ʼಬೈರಾಗಿʼ ವೀಕ್ಷಿಸಿದ ಶಿವಣ್ಣ: ಚಿತ್ರ ಪ್ರದರ್ಶನ ಯಾತ್ರೆಗೆ ಅದ್ದೂರಿ ಸ್ವಾಗತ
ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
ಸಾಯಿ ಪಲ್ಲವಿ ‘ಗಾರ್ಗಿ’ಗೆ ಸಾಥ್ ನೀಡಿದ ರಕ್ಷಿತ್ ಶೆಟ್ಟಿ
ಚಾರ್ಲಿ ಕಲೆಕ್ಷನ್ 150 ಕೋಟಿ!: ಲಾಭದಲ್ಲಿ ಶ್ವಾನಗಳಿಗೂ ಪಾಲು
ಕಿಚ್ಚ ಸುದೀಪ್ ವಿರುದ್ಧ ಅವಹೇಳನಕಾರಿ ವಿಡಿಯೋ: ನಿರ್ದೇಶಕ ನಂದಕಿಶೋರ್ ಆಕ್ರೋಶ
MUST WATCH
ಹೊಸ ಸೇರ್ಪಡೆ
ಬೀದರ್:ಇತಿಹಾಸದಲ್ಲಿ ಪ್ರಥಮ ಬಾರಿಗೆ ಐಎಎಫ್ ಯುದ್ಧ ವಿಮಾನ ಹಾರಿಸಿದ ಅಪ್ಪ-ಮಗಳು
ಸಾರ್ವಜನಿಕರಿಂದ ಅಹವಾಲು ಸಲ್ಲಿಕೆ: ಶಾಸಕ ಯು.ಟಿ.ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
ಕಲಬುರಗಿ: ವಾಹನಗಳ ಅನಧಿಕೃತ ನಾಮಫಲಕ ತೆರವು; ಪೊಲೀಸರಿಂದ ಕಾರ್ಯಾಚರಣೆ
ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಸಭಾಪತಿ ಸ್ಥಾನ ಕೊಟ್ಟರೆ ನಿಭಾಯಿಸುವೆ: ಬಸವರಾಜ್ ಹೊರಟ್ಟಿ
ಮೊದಲ ಬಾರಿಗೆ ಹಿಂದೂ ಸಂಪ್ರದಾಯ ಮೂಲಕ ದಾಂಪತ್ಯ ಜೀವನಕ್ಕೆ ಗೇ ಕಪಲ್ಸ್!