“ಜೋಡೆತ್ತು’, “ಎಲ್ಲಿದ್ದೀಯಪ್ಪ’, “ನಿಖಿಲ್‌ ಎಲ್ಲಿದ್ದೀಯಪ್ಪ’ ಟೈಟಲ್‌ ಸಿಕ್ತು

ಶೀರ್ಷಿಕೆಗೆ ಸೂಕ್ತವಾಗುವ ಕಥೆಯ ಸಿದ್ಧತೆಯಲ್ಲಿ ಚಿತ್ರತಂಡ

Team Udayavani, May 14, 2019, 3:00 AM IST

jodettu

ಲೋಕಸಭೆ ಚುನಾವಣೆ ವೇಳೆ ಹೆಚ್ಚು ಕುತೂಹಲ ಕೆರಳಿಸಿದ್ದು, ಈಗಲೂ ಕೆರಳಿಸಿರೋದು ಮಂಡ್ಯ ಕ್ಷೇತ್ರ. ಅದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ಹೇಳುವುದಾದರೆ, ಅಲ್ಲಿ ಜೋರಾಗಿ ಸದ್ದು ಮಾಡಿದ “ನಿಖಿಲ್‌ ಎಲ್ಲಿದ್ದೀಯಪ್ಪ’ ಮತ್ತು “ಜೋಡೆತ್ತು’ ಮಾತುಗಳು. ಅತೀ ಹೆಚ್ಚು ಕೇಳಲ್ಪಟ್ಟ ಈ ಪದಗಳೀಗ ಸಿನಿಮಾ ಶೀರ್ಷಿಕೆಗಳಾಗಿವೆ ಎಂಬುದೇ ಈ ಹೊತ್ತಿನ ವಿಶೇಷ.

ಹೌದು, “ಜೋಡೆತ್ತು’ ಮತ್ತು “ನಿಖಿಲ್‌ ಎಲ್ಲಿದ್ದೀಯಪ್ಪ’ ಶೀರ್ಷಿಕೆಗಳು ನೋಂದಣಿಯಾಗಿವೆ. ಅಷ್ಟೇ ಅಲ್ಲ, ಆ ಶೀರ್ಷಿಕೆಯಡಿ ಸಿನಿಮಾ ಮಾಡಲು ನಿರ್ಮಾಪಕರೂ ತಯಾರಾಗಿದ್ದಾರೆ. ಆ ಕುರಿತು “ಜೋಡೆತ್ತು’ ಶೀರ್ಷಿಕೆಯನ್ನು ತಮ್ಮ ಬ್ಯಾನರ್‌ನಲ್ಲಿ ನೋಂದಣಿ ಮಾಡಿಸಿಕೊಂಡಿರುವ ನಿರ್ಮಾಪಕ ಎಂ.ಜಿ.ರಾಮಮೂರ್ತಿ “ಉದಯವಾಣಿ’ ಜೊತೆ ಮಾತನಾಡಿ, ಹೇಳಿದ್ದಿಷ್ಟು.

“ನಾನು ಈಗಾಗಲೇ “ಜೋಡೆತ್ತು’ ಎಂಬ ಶೀರ್ಷಿಕೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಣಿ ಮಾಡಿಸಿದ್ದೇನೆ. ಅದಕ್ಕೂ ಮೊದಲು, ನಿರ್ಮಾಪಕ ಎ.ಗಣೇಶ್‌ ಅವರು ಸಹ ಅವರ ಬ್ಯಾನರ್‌ನಲ್ಲಿ “ಎಲ್ಲಿದ್ದೀಯಪ್ಪ’ ಎಂಬ ಶೀರ್ಷಿಕೆಯನ್ನು ನೋಂದಣಿ ಮಾಡಿಸಿದ್ದರು. ಆ ವಿಷಯ ಹೊರಬರುತ್ತಿದ್ದಂತೆಯೇ, “ಜೋಡೆತ್ತು’ ಶೀರ್ಷಿಕೆಯೂ ನೋಂದಣಿ ಆಗಿರುವ ಬಗ್ಗೆ ಎಲ್ಲರಿಗೂ ಗೊತ್ತಾಗಿದೆ.

ಸದ್ಯಕ್ಕೆ “ಜೋಡೆತ್ತು’ ಶೀರ್ಷಿಕೆ ಪಕ್ಕಾ ಆಗಿದೆ. ಕಥೆ ಈಗಷ್ಟೇ ರೆಡಿಯಾಗಬೇಕಿದೆ. ಒಂದು ವೇಳೆ, ಕಥೆ ಚೆನಾಗಿದ್ದು, ದರ್ಶನ್‌ ಅವರು ಶೀರ್ಷಿಕೆ ಹಾಗೂ ಕಥೆ ಒಪ್ಪಿದರೆ “ಜೋಡೆತ್ತು’ ಚಿತ್ರ ಶುರುವಾಗಲಿದೆ. ಇನ್ನು, ಚಿತ್ರದಲ್ಲಿ ದರ್ಶನ್‌ ಜೊತೆ ಯಾರು ಇರಬೇಕು ಎಂಬುದನ್ನೂ ಇನ್ನು ನಿರ್ಧರಿಸಿಲ್ಲ. ದರ್ಶನ್‌ ಅವರು ಮೊದಲು ಒಪ್ಪಬೇಕು.

ಆ ಬಳಿಕ ಯಾರು ಇರಬೇಕು ಎಂಬ ಬಗ್ಗೆ ಸ್ಪಷ್ಟನೆ ಸಿಗಲಿದೆ. ದರ್ಶನ್‌ ಅವರಿಗಿನ್ನೂ “ಜೋಡೆತ್ತು’ ಶೀರ್ಷಿಕೆ ಬಗ್ಗೆ ಗೊತ್ತಿಲ್ಲ. ಶೀರ್ಷಿಕೆಯಲ್ಲಿ ಫೋರ್ಸ್‌ ಇದೆ ಮತ್ತು ಹೆಚ್ಚು ಬಳಕೆಯಾದ ಪದ ಎಂಬ ಕಾರಣಕ್ಕೆ ನೋಂದಣಿ ಮಾಡಿಸಿದ್ದೇನೆ. ಮುಂದಿನ ದಿನಗಳಲ್ಲಿ ಅದರ ಬಗ್ಗೆ ಎಲ್ಲವೂ ಸ್ಪಷ್ಟತೆ ಸಿಗಲಿದೆ’ ಎನ್ನುತ್ತಾರೆ ನಿರ್ಮಾಪಕ ಎಂ.ಜಿ.ರಾಮಮೂರ್ತಿ.

ಇನ್ನು, ನಿರ್ಮಾಪಕ ಎ.ಗಣೇಶ್‌ ಅವರು ತಮ್ಮ ಬ್ಯಾನರ್‌ನಲ್ಲಿ “ಎಲ್ಲಿದ್ದೀಯಪ್ಪ’ ಎಂಬ ಶೀರ್ಷಿಕೆ ನೋಂದಣಿ ಮಾಡಿಸಿದ್ದಾರೆ. ಆದರೆ, ಆ ಚಿತ್ರಕ್ಕೆ ನಿರ್ದೇಶಕ, ನಾಯಕ ಯಾರೆಂಬುದು ಗೊತ್ತಿಲ್ಲ. ಹೆಸರಷ್ಟೇ ಸುದ್ದಿಯಲ್ಲಿದೆ. ಅತ್ತ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ ಅವರು ಸಹ ತಮ್ಮ ಚೇಂಬರ್‌ನಲ್ಲಿ ಮತ್ತು ಅವರದೇ ಬ್ಯಾನರ್‌ನಲ್ಲಿ “ನಿಖಿಲ್‌ ಎಲ್ಲಿದ್ದೀಯಪ್ಪ’ ಶೀರ್ಷಿಕೆ ನೋಂದಾಯಿಸಿದ್ದಾರೆ.

ಈ ಚಿತ್ರಕ್ಕೂ ಈಗಷ್ಟೇ ಸ್ಕ್ರಿಪ್ಟ್ ಕೆಲಸ ನಡೆಯುತ್ತಿದೆಯಂತೆ. ಆ ಕುರಿತು ಹೇಳಿಕೊಳ್ಳುವ ಕೃಷ್ಣೇಗೌಡರು, “ಒನ್‌ಲೈನ್‌ ಸ್ಟೋರಿ ಇಟ್ಟುಕೊಂಡು ಚಿತ್ರ ಮಾಡಲು ನಿರ್ಧರಿಸಿದ್ದೇನೆ. ಇಲ್ಲಿ ಚುನಾವಣೆ ಸಮಯದಲ್ಲಿ ನಡೆದ ಘಟನೆಗಳು ಸೇರಿದಂತೆ ತೆರೆಮರೆಯಲ್ಲಿ ನಡೆದ ಅನೇಕ ವಿಷಯಗಳೂ ಇಲ್ಲಿರಲಿವೆ. ಚಿತ್ರದಲ್ಲಿ ಭಾ.ಮ.ಹರೀಶ್‌ ಅವರು ಮಾಜಿ ಸಿಎಂ ಪಾತ್ರ ನಿರ್ವಹಿಸಲಿದ್ದಾರೆ.

ಉಳಿದಂತೆ ಯಾರೆಲ್ಲಾ ಇರುತ್ತಾರೆ ಎಂಬುದಕ್ಕೆ ಇನ್ನು ಸ್ವಲ್ಪ ದಿನ ಕಾಯಬೇಕು. ಇನ್ನು, “ನಿಖಿಲ್‌ ಎಲ್ಲಿದ್ದೀಯಪ್ಪ’ ಎಂದು ಎಲ್ಲೆಡೆ ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ ಸಚಿವ ಸಾ.ರಾ.ಮಹೇಶ್‌ ಅವರು ಈ ಹೆಸರಲ್ಲಿ ಸಿನಿಮಾ ಸೆಟ್ಟೇರಿದರೆ, ನಾನು ನಟನೆ ಮಾಡ್ತೀನಿ ಅಂತ ಹೇಳಿಕೆ ನೀಡಿದ್ದರು. ಇಷ್ಟರಲ್ಲೇ ಅವರನ್ನು ಭೇಟಿ ಮಾಡಿ ಕಥೆ, ಪಾತ್ರ ಬಗ್ಗೆ ವಿವರಿಸುವುದಾಗಿ’ ಹೇಳುತ್ತಾರೆ ಅವರು.

ಚಿತ್ರ ರಾಜಕೀಯ ಹಿನ್ನೆಲೆಯಲ್ಲಿ ನಡೆಯಲಿದ್ದು, ಹಾಸ್ಯದ ಜೊತೆಗೊಂದು ಸಂದೇಶವೂ ಇದೆ. ಯುವ ಪೀಳಿಗೆ ಮತ್ತು ಸಮಾಜದ ನಡುವಿನ ಕಥೆ ಇಲ್ಲಿರಲಿದೆಯಂತೆ. “ಇದು ಯಾರ ಘನತೆಗೂ ಧಕ್ಕೆ ತರುವಂತಹ ಸಿನಿಮಾವಲ್ಲ. ಸದ್ಯಕ್ಕೆ ಸ್ಕ್ರಿಪ್ಟ್ ನಡೆಯುತ್ತಿದೆ.

ಇಲ್ಲೂ ಮೂರು ಹಾಡುಗಳಿವೆ. ತಂತ್ರಜ್ಞರು ಮತ್ತು ತಾರಾಬಳಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಸದ್ಯ “ನಿಗರ್ವ’ ಚಿತ್ರ ಪೂರ್ಣಗೊಂಡಿದ್ದು, ಆ ಮಧ್ಯೆ ಇನ್ನೊಂದು ಚಿತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಅದಾದ ಬಳಿಕ “ನಿಖಿಲ್‌ ಎಲ್ಲಿದ್ದೀಯಪ್ಪ’ ಚಿತ್ರ ಕೈಗೆತ್ತಿಕೊಳ್ಳುವುದಾಗಿ’ ಹೇಳುತ್ತಾರೆ ಕೃಷ್ಣೇಗೌಡ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.