ಕನ್ನಡಕ್ಕೆ ಮತ್ತೆ ಜೂಹಿ ಚಾವ್ಲಾ


Team Udayavani, May 4, 2017, 2:51 PM IST

12.jpg

ಪ್ರೇಮಲೋಕದ ಸುಂದರಿ ಎಂದೇ ಕರೆಸಿಕೊಳ್ಳುವ ಬಾಲಿವುಡ್‌ ನಟಿ ಜೂಹಿಚಾವ್ಲಾ ಮತ್ತೂಂದು ಕನ್ನಡ ಚಿತ್ರದಲ್ಲಿ ನಟಿಸೋಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಹೌದು, ಇತ್ತೀಚೆಗೆ ರಮೇಶ್‌ ಅರವಿಂದ್‌ ಅಭಿನಯದ “ಪುಷ್ಪಕ ವಿಮಾನ’ ಚಿತ್ರದ “ಜಲ್ಸಾ ಜಲ್ಸಾರೇ…’ ಹಾಡಿಗೆ ಸ್ಟೆಪ್‌ ಹಾಕಿದ್ದ ಜೂಹಿಚಾವ್ಲಾ ಈಗ,ನಿರ್ದೇಶಕ ಸರದೇಶಪಾಂಡೆ ಅವರ “ವೆರಿಗುಡ್‌’ ಎಂಬ ಹೊಸ ಚಿತ್ರದಲ್ಲಿ ಅವರು ನಟಿಸಲಿದ್ದಾರೆ.

ಇಷ್ಟಕ್ಕೂ ಜೂಹಿಚಾವ್ಲಾ ನಟಿಸುತ್ತಿರುವುದು ಆ ಚಿತ್ರದ ಹಾಡೊಂದರಲ್ಲಿ ಮಾತ್ರ. ಸರದೇಶಪಾಂಡೆ ಅವರು “ಬಾಲ ಎಕ್ಸ್‌ಪ್ರೆಸ್‌’ ಎಂಬ ಕ್ಯಾಂಪ್‌ ಶುರು ಮಾಡಿದ್ದರು. ಆ ಕ್ಯಾಂಪ್‌ನಲ್ಲಿ 120 ಮಕ್ಕಳು ನಟನೆ, ನೃತ್ಯ, ಇತ್ಯಾದಿ ಕಲಿಯುತ್ತಿದ್ದಾರೆ. ಆ ಮಕ್ಕಳನ್ನು ಇಟ್ಟುಕೊಂಡು ಸರದೇಶಪಾಂಡೆ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು “ವೆರಿಗುಡ್‌’ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಈ ಚಿತ್ರಕ್ಕೆ “ಟೆನ್‌ ಔಟ್‌ ಆಫ್ ಟೆನ್‌’ ಎಂಬ ಅಡಿಬರಹವೂ ಇದೆ.

ಅಲ್ಲಿಗೆ ಇದು ಮಕ್ಕಳ ಕುರಿತ ಸಿನಿಮಾ ಅಂತ ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಎಲ್ಲಾ ಸರಿ, ಜೂಹಿಚಾವ್ಲಾ ಅವರು ಇಲ್ಲಿ ಯಾವ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ? ಈ ಪ್ರಶ್ನೆಗೆ ನಿರ್ದೇಶಕರು ಉತ್ತರ ಕೊಡೋದು ಹೀಗೆ, “ಅವರಿಲ್ಲಿ ಸಂಗೀತ ಶಿಕ್ಷಕಿ. “ಕಲಿಸು ಗುರುವೇ ‌ಲಿಸು..’ ಎಂಬ ಹಾಡಲ್ಲಿ ಅವರು ಮಕ್ಕಳೊಂದಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಾಡು ಬರೆದಿರೋದು ರಂಗಾಯಣದ ರಾಮನಾಥ್‌. ಈ ಹಿಂದೆ ಗಾಯಕ ರಾಜು ಅನಂತಸ್ವಾಮಿ ಅವರು ಈ ಹಾಡಿಗೆ ರಾಗ ಸಂಯೋಜಿಸಿ, ಹಾಡಿದ್ದರು. ಈಗ ಚಿತ್ರದ ಸಂಗೀತ ನಿರ್ದೇಶಕ ವಿ.ಮನೋಹರ್‌ ಅವರು ಸಿನಿಮಾಗೆ ಬೇಕಾದ ರೀತಿಯಲ್ಲಿ ಅದನ್ನು ಸಂಯೋಜಿಸಿ, ಹಾಡಿಸಿದ್ದಾರೆ.

ಆ ಹಾಡಲ್ಲಿ ಜೂಹಿಚಾವ್ಲಾ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಯಲ್ಲಾಪುರ ಬಳಿ ಆ ಹಾಡಿನ ಚಿತ್ರೀಕರಣ ನಡೆಯಲಿದೆ. ಅವರು ಬರುವ ಡೇಟ್‌ ಅಂತಿಮವಾಗಿಲ್ಲ. ಆದರೆ, ಮೇ ತಿಂಗಳಲ್ಲೇ ಆ ಹಾಡಿನ ಚಿತ್ರೀಕರಣ ನಡೆಯಲಿದೆ’ ಎಂದು ವಿವರ ಕೊಡುತ್ತಾರೆ ಸರದೇಶಪಾಂಡೆ. ಏಪ್ರಿಲ್‌ 24 ರಂದು ಚಿತ್ರಕ್ಕೆ ಮುಹೂರ್ತ ನಡೆದಿದ್ದು, ಈಗಾಗಲೇ ಚಿತ್ರೀಕರಣ ನಡೆಯುತ್ತಿದೆ.

ಚಿತ್ರದಲ್ಲಿ ಎರಡು ಹಾಡುಗಳಿವೆ “ವೆರಿಗುಡ್‌’ ಎಂಬ ಶೀರ್ಷಿಕೆ ಕುರಿತ ಹಾಡೊಂದು ಇದೆ. ಚಿತ್ರಕ್ಕೆ
ಕಲ್ಯಾಣ್‌ರಾಜ್‌ ಕಪೂರ್‌ಕರ್‌ ಅವರು ಸಹ ಚಿತ್ರಕಥೆ ಮತ್ತು ನಿರ್ದೇಶನದಲ್ಲಿ ಸಾಥ್‌ ನೀಡಿದ್ದಾರೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.