“ಸಲಗ’ನಿಗಾಗಿ ಮತ್ತೆ ಕಡಲೆಕಾಯಿ ಪರಿಷೆ


Team Udayavani, Dec 26, 2019, 7:02 AM IST

salaga

ಪ್ರತಿವರ್ಷದಂತೆ ಈ ವರ್ಷ ಕೂಡ ಇತ್ತೀಚೆಗಷ್ಟೆ ಬಸವನ ಗುಡಿಯಲ್ಲಿ ಕಡಲೆ ಕಾಯಿ ಪರಿಷೆ ಜೋರಾಗಿ ನಡೆದಿದ್ದು ನಿಮಗೆ ನೆನಪಿರಬಹುದು. ಜನ ತಮ್ಮ ಮನೆಮಂದಿಯ ಜೊತೆಗೆ ಹೋಗಿ ಕಡಲೆ ಕಾಯಿ ಪರಿಷೆಯನ್ನು ಎಂಜಾಯ್‌ ಕೂಡ ಮಾಡಿದ್ದರು. ಈಗ ಅದೇ ಜಾಗದಲ್ಲಿ ಮತ್ತೆ ಕಡಲೆ ಕಾಯಿ ಪರಿಷೆ ಶುರುವಾಗಿದೆ. ಹೌದು, ಇಲ್ಲಿಯವರೆಗೆ ಕಡಲೆಕಾಯಿ ಪರಿಷೆ ಬಸವನಗುಡಿಯ ಬಸವನಿಗಾಗಿ ನಡೆಯುತ್ತಿದ್ದರೆ, ಈ ಬಾರಿ “ಸಲಗ’ನಿಗಾಗಿ ನಡೆಯುತ್ತಿದೆ.

ಅದು ಚಿತ್ರೀಕರಣದ ಸಲುವಾಗಿ. ದುನಿಯಾ ವಿಜಯ್‌ ಇದೇ ಮೊದಲ ಬಾರಿಗೆ ನಿರ್ದೇಶಕರಾಗಿರುವ ಜೊತೆಗೆ ನಾಯಕರಾಗಿಯೂ ನಟಿಸುತ್ತಿರುವ “ಸಲಗ’ ಚಿತ್ರದ ಕ್ಲೈಮಾಕ್ಸ್‌ ದೃಶ್ಯಗಳನ್ನು ಇತ್ತೀಚೆಗೆ ನಡೆದ ಕಡಲೆಕಾಯಿ ಪರಿಷೆಯಲ್ಲಿ ನೈಜವಾಗಿ ಸೆರೆಹಿಡಿಯಲಾಗಿತ್ತು. ಆದರೆ ಕ್ಲೈಮ್ಯಾಕ್ಸ್‌ನ ಕೆಲ ಭಾಗದ ಶೂಟಿಂಗ್‌ನಲ್ಲಿ ಅತಿಯಾದ ಜನಜಂಗುಳಿಯಿದ್ದ ಕಾರಣ ಕೆಲ ದೃಶ್ಯಗಳನ್ನು ಚಿತ್ರೀಕರಿಸಲು ಸಾಧ್ಯವಾಗಿರಲಿಲ್ಲ.

ಹಾಗಾಗಿ ಈಗ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದ ಆವರಣದಲ್ಲಿ ಮತ್ತೂಮ್ಮೆ ಕಡಲೆ ಕಾಯಿ ಪರಿಷೆ ಸೆಟ್‌ ನಿರ್ಮಿಸಿರುವ ಚಿತ್ರತಂಡ, ಬಿಟ್ಟು ಹೋಗಿರುವ ಕ್ಲೈಮ್ಯಾಕ್ಸ್‌ ದೃಶ್ಯಗಳನ್ನು ಚಿತ್ರೀಕರಿಸುವ ಕೆಲಸದಲ್ಲಿ ನಿರತವಾಗಿದೆ. ಈ ಬಗ್ಗೆ ಮಾತನಾಡುವ ಚಿತ್ರದ ನಿರ್ಮಾಪಕ ಕೆ.ಪಿ ಶ್ರೀಕಾಂತ್‌, “ಚಿತ್ರದ ಕ್ಲೈಮ್ಯಾಕ್ಸ್‌ ಆದಷ್ಟು ರಿಯಾಲಿಸ್ಟಿಕ್‌ ಆಗಿ ಮೂಡಿಬರಬೇಕು ಎಂಬ ಕಾರಣಕ್ಕೆ ಬಸವನಗುಡಿಯ ಪ್ರಸಿದ್ದ ಕಡಲೆ ಕಾಯಿ ಪರಿಷೆಯಲ್ಲಿ ಕ್ಲೈಮ್ಯಾಕ್ಸ್‌ ಬಾಗವನ್ನು ಶೂಟಿಂಗ್‌ ಮಾಡಲು ನಿರ್ಧರಿಸಿದ್ದೆವು.

ಅದರಂತೆ ಬಹುತೇಕ ದೃಶ್ಯಗಳನ್ನು ಅಲ್ಲಿಯೇ ಚಿತ್ರೀಕರಿಸಿದ್ದೆವು. ಆದರೆ ಕ್ಲೈಮ್ಯಾಕ್ಸ್‌ನಲ್ಲಿ ಬರುವ ಕೆಲ ಆ್ಯಕ್ಷನ್‌ ದೃಶ್ಯಗಳನ್ನು ಕಡಲೆ ಕಾಯಿ ಪರಿಷೆಯಲ್ಲಿ ಜನಜಂಗುಳಿ ಜಾಸ್ತಿಯಿದ್ದ ಕಾರಣ ಶೂಟಿಂಗ್‌ ಮಾಡಲು ಆಗಿರಲಿಲ್ಲ. ಅದಕ್ಕಾಗಿ ಆಗ ಬಿಟ್ಟು ಹೋಗಿದ್ದ ಕೆಲ ದೃಶ್ಯಗಳನ್ನು ಅದೇ ಲೊಕೇಶನ್‌ನಲ್ಲಿ ಕಡಲೆ ಕಾಯಿ ಪರಿಷೆಯನ್ನು ರೀ-ಕ್ರಿಯೆಟ್‌ ಮಾಡಿ ಚಿತ್ರೀಕರಿಸುತ್ತಿದ್ದೇವೆ. ಕಳೆದ ಮೂರು ದಿನಗಳಿಂದ ಈ ಚಿತ್ರೀಕರಣ ನಡೆಯುತ್ತಿದ್ದು, ಕ್ಲೈಮ್ಯಾಕ್ಸ್‌ ಚಿತ್ರೀಕರಣ ಇಲ್ಲಿಗೆ ಮುಗಿಯುತ್ತದೆ.

ಇನ್ನು ಈ ಮೊದಲು ಕಡಲೆ ಕಾಯಿ ಪರಿಷೆಗೆ ದೀಪಾಲಂಕಾರ ಮಾಡಿದ್ದವರೇ, ಈ ಸೆಟ್ಗೂ ಅಲಂಕಾರ ಮಾಡಿದ್ದಾರೆ. 60ಕ್ಕೂ ಹೆಚ್ಚು ಅಂಗಡಿಗಳನ್ನು ಮತ್ತೆ ಹಾಕಲಾಗಿದೆ’ ಎಂದು ಮಾಹಿತಿ ಕೊಡುತ್ತಾರೆ. “ಸಲಗ’ ಚಿತ್ರದಲ್ಲಿ ದುನಿಯಾ ವಿಜಯ್‌ ಅವರಿಗೆ ಸಂಜನಾ ಆನಂದ್‌ ನಾಯಕಿಯಾಗಿ ಅಭಿನಯಿಸುತ್ತಿದ್ದು, ಡಾಲಿ ಧನಂಜಯ್‌ ಇನ್ನೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಭರದಿಂದ ಚಿತ್ರೀಕರಣದಲ್ಲಿರುವ “ಸಲಗ’ ಹೊಸವರ್ಷದಲ್ಲಿ ತೆರೆಗೆ ಬರಲಿದೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.