ಕದ್ದುಮುಚ್ಚಿ ಹಾಡು ಬಂತು
Team Udayavani, Nov 15, 2018, 3:33 PM IST
ಸುಮಾರು ನಾಲ್ಕು ವರ್ಷಗಳ ಹಿಂದೆಯೇ ಆರಂಭವಾಗಿದ್ದ “ಕದ್ದು ಮುಚ್ಚಿ’ ಚಿತ್ರ ಅಂತೂ ತೆರೆಗೆ ಬರಲು ತಯಾರಾಗಿದೆ. ಹಂಸಲೇಖ ಅವರ ಗರಡಿಯಲ್ಲಿ ಪಳಗಿರುವ ವಂಸತ್ ರಾಜ್ ಈ ಚಿತ್ರದ ಮೊದಲ ಬಾರಿಗೆ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಕಿರುತೆರೆಯ ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವಿಜಯ್ ಸೂರ್ಯ “ಕದ್ದು ಮುಚ್ಚಿ’ ಚಿತ್ರದಲ್ಲಿ ನಾಯಕ ನಟನಾಗಿದ್ದು, ಮೇಘಶ್ರೀ ನಾಯಕಿಯಾಗಿ ಜೋಡಿಯಾಗಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ “ಕದ್ದು ಮುಚ್ಚಿ’ ಚಿತ್ರತಂಡ ಇತ್ತೀಚೆಗೆ ತನ್ನ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.
ಇತ್ತೀಚೆಗೆ ನಡೆದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ ಚಿನ್ನೆಗೌಡ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್, ಭಾ.ಮಾ ಹರೀಶ್, ಚಂದ್ರಶೇಖರ ಸಾcಮೀಜಿ, ಹಿರಿಯ ನಟ ದೊಡ್ಡಣ್ಣ, ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ, ಲತಾ ಹಂಸಲೇಖ, ನಿರ್ಮಾಪಕ ಉಮೇಶ ಬಣಕಾರ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ಚಿತ್ರದ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ವಸಂತ್ ರಾಜ್, ಇತ್ತೀಚಿನ ದಿನಗಳಲ್ಲಿ ಫ್ಯಾಮಿಲಿ ಓರಿಯೆಂಟೆಡ್ ಚಿತ್ರಗಳ ಮಾಡೋದು ತುಂಬಾ ಕಡಿಮೆಯಾಗಿದೆ. ಕದ್ದು ಮುಚ್ಚಿ ಪಕ್ಕಾ ಕೌಟುಂಬಿಕ ಕಥಾಹಂದರದ ಚಿತ್ರ. ಕೆಲ ಕಾರಣಗಳಿಂದ ಚಿತ್ರ ತೆರೆಗೆ ಬರುವಲ್ಲಿ ವಿಳಂಬವಾಗಿದೆ. ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗುವುದೆಂಬ ನಂಬಿಕೆ ಇದೆ ಎಂದರು.
ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟ ವಿಜಯ್ ಸೂರ್ಯ, “ಇದು ನನ್ನ ಎರಡನೇ ಚಿತ್ರ. ಧಾರಾವಾಹಿ ಮತ್ತು ನನ್ನ ಈ ಹಿಂದಿನ ಚಿತ್ರದಲ್ಲಿ ಲವರ್ ಬಾಯ್ ಪಾತ್ರಗಳಲ್ಲಿ ನಟಿಸಿದ್ದೆ. ಈ ಚಿತ್ರದಲ್ಲಿ ಆ್ಯಕ್ಷನ್ ದೃಶ್ಯಗಳಲ್ಲೂ ಕಾಣಿಸಿಕೊಂಡಿದ್ದೇನೆ ಎಂದರು. ಉಳಿದಂತೆ “ಕದ್ದು ಮುಚ್ಚಿ’ ಚಿತ್ರದಲ್ಲಿ ದೊಡ್ಡಣ್ಣ, ಚಿಕ್ಕಣ್ಣ, ಸುಚೇಂದ್ರ ಪ್ರಸಾದ್, ಹೊನ್ನಾವಳಿ ಕೃಷ್ಣ, ಉಮೇಶ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ವಿ.ಜಿ. ಮಂಜುನಾಥ್ “ಕದ್ದು ಮುಚ್ಚಿ’ ಚಿತ್ರವನ್ನು ನಿರ್ಮಾಣ ಮಾಡಿದ್ದು, ಚಿತ್ರದಲ್ಲಿರುವ ಆರು ಹಾಡುಗಳಿಗೆ ಹಂಸಲೇಖ ಸಂಗೀತ ಸಂಯೋಜಿಸಿದ್ದಾರೆ. ಇದೇ ತಿಂಗಳ ಕೊನೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು