ಡಿಸೆಂಬರ್‌ 1ಕ್ಕೆ ಕನಕ


Team Udayavani, Nov 13, 2017, 10:48 AM IST

kanaka_vijay.jpg

ಒಂದು ಕಡೆ ವಾರ ವಾರ ಏಳೆಂಟು ಚಿತ್ರಗಳು ಬಿಡುಗಡೆಯಾಗುತ್ತಿವೆ. ಇವೆಲ್ಲವೂ ಹೊಸಬರ ಚಿತ್ರಗಳೆಂಬುದು ವಿಶೇಷ. ಅದಕ್ಕೆ ಕಾರಣ, ಡಿಸೆಂಬರ್‌ನಲ್ಲಿ ಬರುತ್ತಿರುವ ಸ್ಟಾರ್‌ ಸಿನಿಮಾಗಳು. ಡಿಸೆಂಬರ್‌ ತುಂಬಾ ಸ್ಟಾರ್‌ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಈಗ ಮತ್ತೂಬ್ಬ ಸ್ಟಾರ್‌ ನಟನ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “ಕನಕ’.

ಹೌದು, ಆರ್‌.ಚಂದ್ರು ನಿರ್ದೇಶನದ ದುನಿಯಾ ವಿಜಯ್‌ ನಾಯಕರಾಗಿರುವ “ಕನಕ’ ಚಿತ್ರದ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಡಿಸೆಂಬರ್‌ 1ಕ್ಕೆ ಚಿತ್ರ ಬಿಡುಗಡೆ ಮಾಡಲು ಚಂದ್ರು ಮುಂದಾಗಿದ್ದಾರೆ. ಈ ಚಿತ್ರವನ್ನು ಆರ್‌.ಚಂದ್ರು ನಿರ್ಮಿಸುವ ಜೊತೆಗೆ ನಿರ್ಮಾಣ ಕೂಡಾ ಮಾಡಿದ್ದಾರೆ. ನವೆಂಬರ್‌ 1 ಕನ್ನಡ ರಾಜ್ಯೋತ್ಸವದಂದು ಚಿತ್ರದ ಟ್ರೇಲರ್‌ ಬಿಡುಗಡೆಯಾಗಿತ್ತು.

ಚಿತ್ರದ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾದ್ದರಿಂದ ಚಿತ್ರತಂಡ ಖುಷಿಯಾಗಿದ್ದು, ಸಿನಿಮಾಕ್ಕೂ ಅದೇ ರೀತಿಯ ಪ್ರತಿಕ್ರಿಯೆ ಸಿಗುತ್ತದೆ ಎಂಬ ನಂಬಿಕೆಯಲ್ಲಿದೆ. ದುನಿಯಾ ವಿಜಯ್‌ ನಾಯಕರಾಗಿರುವ “ಕನಕ’ ಆ್ಯಕ್ಷನ್‌ ಹಿನ್ನೆಲೆಯಲ್ಲಿ ಸಾಗುವ ಸಿನಿಮಾವಾಗಿದ್ದು, ಚಿತ್ರದಲ್ಲಿ ಹರಿಪ್ರಿಯಾ ಹಾಗೂ ಮಾನ್ವಿತಾ ಹರೀಶ್‌ ನಾಯಕಿಯರು. ಎಲ್ಲಾ ಓಕೆ, ಡಿಸೆಂಬರ್‌ 1 ರಂದು ಮುರುಳಿ ಹಾಗೂ ಶಿವರಾಜಕುಮಾರ್‌ ಅವರ “ಮಫ್ತಿ’ ಚಿತ್ರವೂ ಬಿಡುಗಡೆಯಾಗುತ್ತದೆಂಬ ಸುದ್ದಿ ಇದೆ.

ಹಾಗಾದರೆ ಎರಡು ಸ್ಟಾರ್‌ ಸಿನಿಮಾಗಳು ಒಟ್ಟಿಗೆ ಬರುತ್ತಾ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಒಂದು ವೇಳೆ “ಮಫ್ತಿ’ ಬಿಡುಗಡೆ ಪಕ್ಕಾ ಆದರೆ ತಾನು ಮುಂದಕ್ಕೆ ಹೋಗುತ್ತೇನೆ ಎನ್ನುತ್ತಾರೆ ನಿರ್ದೇಶಕ ಚಂದ್ರು. “ನಾನು ಶಿವರಾಜಕುಮಾರ್‌ ಅವರ ಅಭಿಮಾನಿ. ಅವರ ಸಿನಿಮಾಗಳನ್ನು ನೋಡಿಕೊಂಡು ಬೆಳೆದವ ನಾನು.

ಅವರ ಸಿನಿಮಾ ಡಿಸೆಂಬರ್‌ 1 ರಂದು ಬರುವುದು ಕನ್ಫರ್ಮ್ ಆದರೆ, ನಾನು ಒಂದು ವಾರ ಮುಂದೆ ಹೋಗುತ್ತೇನೆ’ ಎನ್ನುತ್ತಾರೆ ಚಂದ್ರು. 
ಶಿಡ್ಲಘಟ್ಟದಲ್ಲಿ ಆಡಿಯೋ ಬಿಡುಗಡೆ ಇಲ್ಲ: ಆರ್‌.ಚಂದ್ರು ಅವರು “ಕನಕ’ ಚಿತ್ರದ ಆಡಿಯೋ ಬಿಡುಗಡೆಯನ್ನು ತಮ್ಮ ಹುಟ್ಟೂರಾದ ಶಿಡ್ಲಘಟ್ಟದಲ್ಲಿ ಅದ್ಧೂರಿಯಾಗಿ ಮಾಡಲು ನಿರ್ಧರಿಸಿದ್ದರು.

ಈಗ ಆ ಕಾರ್ಯಕ್ರಮದಲ್ಲಿ ಸಣ್ಣ ಬದಲಾವಣೆಯಾಗಿದೆ. ಅದೇನೆಂದರೆ ಶಿಡ್ಲಘಟ್ಟದಲ್ಲಿ ಆಡಿಯೋ ಬಿಡುಗಡೆಯಾಗುತ್ತಿಲ್ಲ. ಬದಲಾಗಿ ಬೆಂಗಳೂರಿನ ಪಂಚತಾರಾ ಹೋಟೆಲ್‌ವೊಂದರಲ್ಲಿ ಅದ್ಧೂರಿಯಾಗಿ ಆಡಿಯೋ ಬಿಡುಗಡೆಯಾಗಲಿದೆ. ಶಿಡ್ಲಘಟ್ಟದಲ್ಲಿ ಮೈದಾನದಲ್ಲಿ ನಡೆಸಲು ಅನುಮತಿ ಸಿಗದ ಕಾರಣ ಹೋಟೆಲ್‌ನಲ್ಲಿ ಆಡಿಯೋ ಬಿಡುಗಡೆ ಮಾಡುವುದಾಗಿ ಹೇಳುತ್ತಾರೆ ಚಂದ್ರು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.