ನಟ, ನಿರೂಪಕ ಸಂಜೀವ್ ಕುಲಕರ್ಣಿ ನಿಧನಕ್ಕೆ ಸ್ಯಾಂಡಲ್ ವುಡ್ ಕಂಬನಿ


Team Udayavani, Jan 26, 2020, 6:59 PM IST

Sanjeev-Kulakarni-730

ಬೆಂಗಳೂರು: ಕನ್ನಡ ಕಿರುತೆರೆ ಲೋಕದ ಖ್ಯಾತ ನಟ, ನಿರೂಪಕ ಸಂಜೀವ್ ಕುಲಕರ್ಣಿ ಅವರು ತಮಗಿದ್ದ ಅನಾರೋಗ್ಯದ ಕಾರಣದಿಂದ ಶನಿವಾರದಂದು ನಿಧನ ಹೊಂದಿದ್ದಾರೆ. ನಾರಾಯಣ ಹೃದಯಾಲಯದಲ್ಲಿ ಇಹಲೋಕವನ್ನು ತ್ಯಜಿಸಿದ ಸಂಜೀವ್ ಅವರಿಗೆ 49 ವರ್ಷ ವಯಸ್ಸಾಗಿತ್ತು. ಸಂಜೀವ್ ಅವರು ಕಳೆದ ಕೆಲವು ವರ್ಷಗಳಿಂದ ಗಂಭೀರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

ಸಂಜೀವ್ ಕುಲಕರ್ಣಿ ಅವರ ನಿಧನಕ್ಕೆ ಕನ್ನಡ ಕಿರುತೆರೆ ಮತ್ತು ಹಿರಿತೆರೆ ಲೋಕ ಕಂಬನಿ ಮಿಡಿದಿದೆ. ಅವರ ಜೊತೆಯಲ್ಲಿ ನಟಿಸಿದ್ದ ಹಲವಾರು ಕಿರುತೆರೆ ಕಲಾವಿದರು ಸಂಜೀವ್ ಅವರ ಸಾವಿನ ಸುದ್ದಿ ಕೇಳಿ ಆಘಾತಗೊಂಡಿದ್ದಾರೆ.

‘ಸಂಜೀವ್ ಕುಲಕರ್ಣಿ ಇಲ್ಲ ಎಂದು ನಂಬಲಾಗುತ್ತಿಲ್ಲ. ಹಲವಾರು ಸರ್ಜರಿಗೆ ಒಳಗಾದ ಅವರು ಮೇಲಿಂದ ಮೇಲೆ ನೋವನ್ನು ಅನುಭವಿಸಿದ್ದಾರೆ. ಅವರ ಮಗುವಿನ ಮುಖ ನೋಡಿರುವ ನನಗೆ ಅವರ ಶವವನ್ನು ನೋಡಲು ಆಗದು. ನಾನು ಶವ ನೋಡಲು ಇಷ್ಟಪಡುವುದಿಲ್ಲ. ನೀವು ಜೀವಂತವಾಗಿರುವಾಗ ಹೇಗೆ ಇರುತ್ತಿದ್ದೀರೋ ಹಾಗೆ ನೆನಪಿನಲ್ಲಿ ಇರುತ್ತೀರಿ’ ಎಂದು ನಟಿ ಶಾಂಭವಿ ಅವರು ಇನ್ ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಸಂಜೀವ ನಿಧನಕ್ಕೆ ನಟ, ಗಾಯಕ ರವಿಶಂಕರ್ ಗೌಡ ಅವರೂ ಸಹ ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ಸಂತಾಪ ಸೂಚಿಸಿದ್ದು. ತಮ್ಮ ವೃತ್ತಿರಂಗದ ಗೆಳೆಯನ ಬಗ್ಗೆ ರವಿಶಂಕರ್ ಅವರು ಟ್ವಿಟ್ಟರ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ.

ಸಂಜೀವ್ ಅವರು ‘ಸಂಭ್ರಮ-ಸೌರಭ’ ಎಂಬ ಮಾಸಿಕ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದರು. ಅವರ ಮೃದು ಮಾತಿನ, ನಗುಮುಖದ ನಿರೂಪಣೆ ಈ ಕ್ಷೇತ್ರದಲ್ಲಿ ಅವರಿಗೆ ಅಪಾರ ಅಭಿಮಾನಿಗಳನ್ನು ಗಳಿಸಿಕೊಟ್ಟಿತ್ತು. ಸಂಜೀವ್ ಅವರು ಕಿರುತೆರೆಯ ಹಲವು ಚಾನೆಲ್ ಗಳಲ್ಲಿ ಪ್ರಸಾರವಾಗುತ್ತಿದ್ದ ಧಾರಾವಾಹಿಗಳಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸುವ ಮೂಲಕವೂ ಮನೆಮಾತಾಗಿದ್ದರು. ಸದ್ಯಕ್ಕೆ ಅವರು ‘ಪಾಪಾ ಪಾಂಡು’ ಧಾರಾವಾಹಿಯ ನಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಇತ್ತೀಚೆಗೆ ಕೆಲವು ದಿನಗಳ ಹಿಂದೆಯಷ್ಟೇ ಬಹುಭಾಷಾ ನಟ ಕಿಚ್ಚ ಸುದೀಪ್ ಅವರು ಸಂಜೀವ್ ಕುಲಕರ್ಣಿ ಅವರ ಚಿಕಿತ್ಸಾ ವೆಚ್ಚವನ್ನು ಭರಿಸಲು ಸಹೃದಯ ದಾನಿಗಳು ಸಹಾಯ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದರು.

ಸಂಜೀವ್ ಅವರಿಗಿದ್ದ ಹೃದಯ ಸಂಬಂಧಿ ತೊಂದರೆ ಇತ್ತೀಚೆಗೆ ಉಲ್ಭಣಗೊಂಡಿತ್ತು ಮತ್ತು ಇದಕ್ಕಾಗಿ ಹೃದಯ ಕಸಿ ನಡೆಸುವುದು ಅನಿವಾರ್ಯವಾಗಿತ್ತು. ಆದರೆ ಈ ವೈದ್ಯಕೀಯ ವಿಧಾನಕ್ಕೆ ಸುಮಾರು 40 ರಿಂದ 50 ಲಕ್ಷ ರೂಪಾಯಿ ಅಗತ್ಯವಿತ್ತು. ಕಿಚ್ಚನ ಮನವಿಗೆ ಸ್ಪಂದಿಸಿ ಹಲವರು ಸಂಜೀವ್ ಅವರಿಗೆ ಧನ ಸಹಾಯ ಮಾಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

ಸಂಜೀವ್ ಅವರ ಪುತ್ರ ಸೌರಭ್ ಕುಲಕರ್ಣಿ ಅವರೂ ಸಹ ತಮ್ಮ ಇನ್ ಸ್ಟಾ ಖಾತೆಯಲ್ಲಿ ತಂದೆಯ ಚಿಕಿತ್ಸೆಗಾಗಿ ಧನ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದರು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.