ಕೋವಿಡ್ ನಿಂದಾಗಿ ಝೂಗಳಿಗೆ ಸಂಕಷ್ಟ:ಪ್ರಾಣಿ ದತ್ತು ಪಡೆಯುವಂತೆ ದರ್ಶನ್ ಕರೆ
Team Udayavani, Jun 5, 2021, 3:48 PM IST
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೋವಿಡ್ ಸಂಕಷ್ಟದಿಂದ ಸಂಕಷ್ಟದಲ್ಲಿರುವ ರಾಜ್ಯದ ಪ್ರಾಣಿ ಸಂಗ್ರಹಾಲಯಗಳ ನೆರವಿಗೆ ಧಾವಿಸಿದ್ದಾರೆ.
ಲಾಕ್ ಡೌನ್ ನಿಂದಾಗಿ ಪ್ರವಾಸಿಗರು ಇಲ್ಲದೆ ಝೂಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಇದರಿಂದಾಗಿ ಪ್ರಾಣಿಗಳಿಗೆ ಆಹಾರದ ಕೊರತೆ ಎದುರಾಗಿದೆ. ಈ ಸಮಸ್ಯೆಗೆ ಪ್ರಾಣಿ ಪ್ರಿಯ ದಚ್ಚು ಒಳ್ಳೆಯ ಪರಿಹಾರ ಹೇಳಿದ್ದಾರೆ. ಸಂಗ್ರಹಾಲಯಗಳಲ್ಲಿರುವ ಪ್ರಾಣಿಗಳನ್ನ ದತ್ತು ಪಡೆಯುವಂತೆ ಕೇಳಿಕೊಂಡಿದ್ದಾರೆ.
ಈ ಬಗ್ಗೆ ವಿಶೇಷ ವಿಡಿಯೋ ಮಾಡಿರುವ ಡಿ ಬಾಸ್, ಕೊವಿಡ್ನಿಂದ ಮಾನವರಿಗೆ ತೊಂದರೆ ಆಗಿದೆ. ಅದರ ಜತೆಗೆ ಪ್ರಾಣಿ ಸಂಕುಲಕ್ಕೂ ಸಮಸ್ಯೆ ಆಗಿದೆ. ನಮ್ಮ ರಾಜ್ಯದಲ್ಲಿ 9 ಝೂಗಳು ಇವೆ. ಹೀಗಾಗಿ, ಬೇರೆ ದೇಶದಿಂದ ಎಲ್ಲರೂ ಇಲ್ಲಿಗೆ ಬರ್ತಾರೆ. ಅವರು ನೀಡುವ ಟಿಕೆಟ್ ಹಣದಿಂದ ಝೂ ನಿರ್ವಹಣೆ ಆಗುತ್ತಿತ್ತು. ಆದರೆ, ಈಗ ಈ ಪ್ರಕ್ರಿಯೆ ನಿಂತಿದೆ. ಹೀಗಾಗಿ, ಪ್ರಾಣಿಗಳ ನಿರ್ವಹಣೆ, ಅವರನ್ನು ನೋಡಿಕೊಳ್ಳೋರಿಗೆ ಸಂಬಳ ನೀಡೋದು ಕಷ್ಟವಾಗುತ್ತಿದೆ ಎಂದಿದ್ದಾರೆ.
ಎಲ್ಲರೂ ಮನೆಯಲ್ಲಿ ಪ್ರಾಣಿ ಸಾಕಲು ಆಗುವುದಿಲ್ಲ. ಆದರೆ, ಅದನ್ನು ನಿರ್ವಹಣೆ ಮಾಡಲು ಅವಕಾಶ ಇದೆ. ಲವ್ಬರ್ಡ್ಗೆ 1 ಸಾವಿರ, ಹುಲಿಗೆ 1 ಲಕ್ಷ, ಆನೆಗೆ 1.70 ಲಕ್ಷ ರೂಪಾಯಿ ನೀಡಿ ದತ್ತು ಪಡೆದರೆ ಒಂದು ವರ್ಷಗಳ ಕಾಲ ಅವುಗಳ ನಿರ್ವಹಣೆ ನಿಮ್ಮ ಹೆಸರಲ್ಲಾಗುತ್ತದೆ. ಝೂ ಆಫ್ ಕರ್ನಾಟಕ ಆ್ಯಪ್ ಮೂಲಕ ಪ್ರಾಣಿಗಳನ್ನು ದತ್ತು ಪಡೆಯೋದು ಹೇಗೆ ಎಂದು ತಿಳಿದುಕೊಳ್ಳಬಹುದು. ಹತ್ತಿರದ ಝೂಗೆ ಭೇಟಿ ನೀಡಿದರೂ ಇದನ್ನು ಮಾಡೋಕೆ ಸಾಧ್ಯ. ಇದೊಂದು ಒಳ್ಳೆಯ ಕಾರ್ಯಕ್ಕೆ ಕೈ ಜೋಡಿಸಿ ಎಂದು ದರ್ಶನ್ ಕರೆ ನೀಡಿದ್ದಾರೆ.
ಇನ್ನು ದರ್ಶನ್ ಅವರು ಈ ಮೊದಲಿನಿಂದಲೂ ಮೈಸೂರು ಪ್ರಾಣಿ ಸಂಗ್ರಹಾಲಯದಲ್ಲಿರುವ ಕೆಲವೊಂದು ಪ್ರಾಣಿಗಳನ್ನು ದತ್ತು ಪಡೆದು, ಅವುಗಳ ಪಾಲನೆ-ಪೋಷಣೆಗೆ ಧನ ಸಹಾಯ ಮಾಡುತ್ತ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ