ರಾಜವರ್ಧನ್ ಈಗ ‘ಹಿರಣ್ಯ’; ಟೈಟಲ್ ಬಿಟ್ಟುಕೊಟ್ಟ ಧನಂಜಯ್
Team Udayavani, Feb 16, 2022, 2:20 PM IST
ಐತಿಹಾಸಿಕ ಕಥಾಹಂದರ ಹೊಂದಿದ್ದ “ಬಿಚ್ಚುಗತ್ತಿ’ ಸಿನಿಮಾ ಮೂಲಕ ಆ್ಯಕ್ಷನ್ ಹೀರೋ ಆಗಿ ಸ್ಯಾಂಡಲ್ ವುಡ್ ಸಿನಿಪ್ರಿಯರಿಗೆ ಪರಿಚಯವಾದ ನಟ ರಾಜವರ್ಧನ್ ಸದ್ಯ “ಪ್ರಣಯಂ’ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ.
ಈ ಸಿನಿಮಾದ ಕೆಲಸಗಳು ಭರದಿಂದ ನಡೆಯುತ್ತಿರುವಂತೆಯೇ, ರಾಜವರ್ಧನ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಮತ್ತೂಂದು ಸಿನಿಮಾ ಅನೌನ್ಸ್ ಆಗಿದೆ. ಅಂದಹಾಗೆ, ರಾಜವರ್ಧನ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾಕ್ಕೆ “ಹಿರಣ್ಯ’ ಎಂಬ ಟೈಟಲ್ ಇಡಲಾಗಿದೆ.
ಇನ್ನು “ಹಿರಣ್ಯ’ ಎಂಬ ಶೀರ್ಷಿಕೆ ಮೊದಲು ನಟ ಧನಂಜಯ್ ಅವರ ಬಳಿಯಿತ್ತು. ಬಳಿಕ ಚಿತ್ರತಂಡದ ಕೋರಿಕೆಯ ಮೇರೆಗೆ “ಹಿರಣ್ಯ’ ಶಿರ್ಷಿಕೆ ಬಿಟ್ಟುಕೊಟ್ಟಿದ್ದಾರಂತೆ ಧನಂಜಯ್. ಈಗಾಗಲೇ ಹಲವು ಶಾರ್ಟ್ ಮೂವಿಗಳನ್ನು ಮಾಡಿದ ಅನುಭವ ಇರುವ ಪ್ರವೀಣ್ ಅವ್ಯೂಕ್ “ಹಿರಣ್ಯ’ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಪೂರ್ಣ ಪ್ರಮಾಣದಲ್ಲಿ ನಿರ್ದೇಶಕನಾಗಿ ಸ್ಯಾಂಡಲ್ ವುಡ್ಗೆ ಪರಿಚಯವಾಗುತ್ತಿದ್ದಾರೆ.
ಇದನ್ನೂ ಓದಿ:‘ಕಾಟನ್ ಪೇಟೆ ಗೇಟ್’ ನಲ್ಲಿ ಮುಗಿಯಿತು ಮಾತುಕತೆ
“ವೇದಾಸ್ ಇನ್ಫಿನಿಟಿ ಪಿಕ್ಚರ್’ ಬ್ಯಾನರ್ನಡಿ ವಿಘ್ನೇಶ್ವರ. ಯು ಹಾಗೂ ವಿಜಯ್ ಕುಮಾರ್ ಬಿ.ವಿ “ಹಿರಣ್ಯ’ ಸಿನಿಮಾಗೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಯೋಗೇಶ್ವರನ್ ಆರ್ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಸದ್ಯ “ಹಿರಣ್ಯ’ನ ಟೈಟಲ್ ಅನೌನ್ಸ್ ಆಗಿದ್ದು, ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ