ವಯಸ್ಸು ಎಪ್ಪತ್ತೈದು, ಬಣ್ಣದ ಬದುಕಿಗೆ 50: ಹಿರಿಯ ನಟ ಶ್ರೀನಿವಾಸ ಮೂರ್ತಿ ಮನದ ಮಾತು..


Team Udayavani, May 10, 2023, 3:07 PM IST

srinivas-murthy

“ನಾನೊಬ್ಬ ಕಲಾವಿದನಾಗಿ ಜನರಿಗೆ ಪರಿಚಯವಾದೆ. ಜನ ಎಲ್ಲೇ ಹೋದರೂ, ನನ್ನನ್ನು ಕಲಾವಿದನಾಗಿ ಗುರುತಿಸಿ ಮಾತನಾಡಿಸುತ್ತಾರೆ. ನನಗೀಗ 75 ವರ್ಷವಾಗಿದೆ. ಈ ಬಣ್ಣದ ನಂಟು, ಬಣ್ಣದ ಬದುಕಿಗೆ ಬಂದು 50 ವರ್ಷವಾಗುತ್ತಿದೆ. ಒಬ್ಬ ಕಲಾವಿದನಾಗಿ ಈ ಬದುಕಿನಲ್ಲಿ ತೃಪ್ತಿ ಕಂಡಿದ್ದೇನೆ’ ಇದು ಹಿರಿಯ

ನಟ ಶ್ರೀನಿವಾಸ ಮೂರ್ತಿ ಅವರ ಮಾತು.  ಹೌದು, ರಂಗಭೂಮಿ ಕಲಾವಿದನಾಗಿ ಆನಂತರ ಚಿತ್ರರಂಗದಲ್ಲಿ ನಾಯಕ, ನಿರ್ಮಾಪಕ, ಪೋಷಕ ಕಲಾವಿದನಾಗಿ ಗುರುತಿಸಿಕೊಂಡಿರುವ ಹಿರಿಯ ನಟ ಶ್ರೀನಿವಾಸ ಮೂರ್ತಿ ಅವರಿಗೀಗ 75 ವರ್ಷ. ಇದೇ ವರ್ಷ ಶ್ರೀನಿವಾಸ ಮೂರ್ತಿ ಬಣ್ಣದ ಬದುಕಿಗೆ ಕಾಲಿಟ್ಟು 50 ವರ್ಷವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಮೂರ್ತಿ ಇದೇ ಮೇ 15 ಮತ್ತು 16 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ “ತರಕಾರಿ ಚೆನ್ನಿ’ ಮತ್ತು “ಸದಾರಮೆ ಕಳ್ಳ’ ಎಂಬ ಎರಡು ನಾಟಕಗಳಲ್ಲಿ ವಿಶೇಷ ಪ್ರದರ್ಶನ ನೀಡಲಿದ್ದಾರೆ.

ತಮಗೆ 75 ಮತ್ತು ತಮ್ಮ ಬಣ್ಣದ ಬದುಕಿಗೆ 50 ವರ್ಷವಾಗುತ್ತಿರುವ ಈ ಸಂದರ್ಭದಲ್ಲಿ ಮಾತನಾಡಿದ ಶ್ರೀನಿವಾಸ ಮೂರ್ತಿ, “ಈಗ ನನಗೆ 75 ವರ್ಷ ಆಗಿದೆ. ಜತೆಗೆ ನಾನು ಬಣ್ಣದ ಬದುಕಿಗೆ ಬಂದು 50 ವರ್ಷಗಳಾಗುತ್ತಿವೆ. ಈ ನೆನಪಿನಲ್ಲಿ “ತರಕಾರಿ ಚೆನ್ನಿ’ ಮತ್ತು “ಸದಾರಮೆ ಕಳ್ಳ’ ಎಂಬ ನಾಟಕಗಳನ್ನು ಪ್ರದರ್ಶನ ಮಾಡುವ ಮೂಲಕ ನನ್ನ ಬದುಕಿಗೆ ನಾನು ಸಾರ್ಥಕತೆ ಕಂಡುಕೊಳ್ಳುತ್ತಿರುವೆ’ ಎನ್ನುತ್ತಾರೆ.

“ನಾನು ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಬಂದು ಸರ್ವೆ ಇಲಾಖೆಯಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದೆ. ಆ ವೇಳೆ ನಾಟಕದ ರುಚಿ ಹತ್ತಿಸಿಕೊಂಡೆ. ಒಮ್ಮೆ ಬಂಗಾರಪ್ಪ ನನ್ನ ನಾಟಕ ನೋಡಲು ಬಂದರು. ನಾಟಕ ನೋಡಿದ ನಂತರ, ಇನ್ನು ಮೇಲೆ ಇಲಾಖೆಯಲ್ಲಿ ಇವರಿಗೆ ಏನೂ ಕೆಲಸ ಹೇಳಬೇಡಿ. ಕಲಾವಿದರಾಗಿ ಹೆಚ್ಚು ತೊಡಗಿಸಿಕೊಳ್ಳಲಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲಿಂದ ನಟನೆ ಹೆಚ್ಚಾಯಿತು’ ಎಂದು ತಮ್ಮ ಬಣ್ಣದ ಬದುಕಿನ ಆರಂಭದ ದಿನಗಳನ್ನು ಮೆಲುಕು ಹಾಕುತ್ತಾರೆ ಶ್ರೀನಿವಾಸ ಮೂರ್ತಿ.

“ತಮಿಳಿನ “ಕಾಲತ್ತಿಲ್’ ಸಿನಿಮಾಕ್ಕೆ ಹೀರೋ ಆದೆ. ಆದ್ರೆ ಆ ಸಿನಿಮಾದ ಬಿಡುಗಡೆ ಸಮಯದಲ್ಲಿ ನಿರ್ಮಾಪಕರು ಅರೆಸ್ಟ್‌ ಆದರು. ಮುಂದೆ “ಅಪ್ಪು’ ಸಿನಿಮಾದಲ್ಲಿ ನನ್ನ ಪಾತ್ರ ನೋಡಿದ ನಿರ್ದೇಶಕ ಪುರಿ ಜಗನ್ನಾಥ್‌ ತೆಲುಗಿಗೆ ನನ್ನ ಕರೆದರೂ, ಇಲ್ಲಿ ಒಂದಷ್ಟು ಸಿನಿಮಾಗಳಲ್ಲಿ ಬಿಝಿಯಾಗಿದ್ದರಿಂದ ಅಲ್ಲಿಗೂ ಹೋಗಲಿಲ್ಲ. ಬೇರೆ ಭಾಷೆಗಳಿಂದಲೂ ಕರೆ ಬಂದಿರೂ ಹೋಗಲಿಲ್ಲ. ಹಾಗಾಗಿ ಪರಭಾಷೆಗಳಲ್ಲಿ ನಟಿಸುವ ಕನಸು ಹಾಗೆ ಉಳಿದು ಹೋಯಿತು. “ನೀನು ಯಾಕೆ ತಮಿಳು ಚಿತ್ರಗಳಲ್ಲಿ ಬಂದು ನಟಿಸಬಾರದು? ಬಾ ಇಲ್ಲಿಗೆ’ ಅಂತ ರಜನಿಕಾಂತ್‌ ಆಗಾಗ ಕರೆಯುತ್ತಿರುತ್ತಾರೆ’ ಎಂದು ಬೇರೆ ಭಾಷೆಗಳಲ್ಲೂ ತಮಗಿದ್ದ ಅವಕಾಶಗಳ ಬಗ್ಗೆ ಮಾತನಾಡುತ್ತಾರೆ ಶ್ರೀನಿವಾಸ ಮೂರ್ತಿ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.