SUMA: ಹೊಸಬರ ಚಿತ್ರಕ್ಕೆ ಮುಹೂರ್ತ
Team Udayavani, Apr 6, 2024, 4:30 PM IST
ಸಂಪೂರ್ಣ ಹೊಸಬರೇ ಸೇರಿ ನಿರ್ಮಿಸುತ್ತಿರುವ “ಸುಮಾ’ ಎಂಬ ಸಿನಿಮಾದ ಮುಹೂರ್ತ ಇತ್ತೀಚೆಗೆ ನಡೆದಿದೆ. ಓಂ ಸಾಯಿ ಸಿನೆಮಾಸ್ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ಮಹಿಳಾ ಪ್ರಧಾನ ಚಿತ್ರವಿದು. ಈ ಹಿಂದೆ ಕನ್ನಡದಲ್ಲಿ “ಶ್ರೀಕಬ್ಟಾಳಮ್ಮನ ಮಹಿಮೆ’, “ಮನೆ’, “ಬ್ಯಾಂಕ್ ಲೋನ್’, “ಸುಳಿ’ ಸೇರಿದಂತೆ ನಾಲ್ಕು ಸಿನಿಮಾಗಳನ್ನು ನಿರ್ದೇಶಿಸಿರುವ ರಶ್ಮಿ ಎಸ್. “ಸುಮಾ’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಮೈಸೂರು ಮೂಲದ ಪ್ರದೀಪ್ ಗೌಡ “ಸುಮಾ’ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದು, ಉಳಿದಂತೆ ಬಲರಾಜವಾಡಿ, ರೇಣು ಶಿಕಾರಿ, ಮುರಳೀಧರ್ ಡಿ.ಆರ್, ಕಾವ್ಯ ಪ್ರಕಾಶ್, ರೋಹಿಣಿ, ಸುನಂದ ಕಲಬುರ್ಗಿ, ರೇಣುಕುಮಾರ್ ಸಂಸ್ಥಾನ ಮಠ ಸೇರಿದಂತೆ ಇತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಇದೇ ವೇಳೆ ಮಾತನಾಡಿದ ಚಿತ್ರತಂಡ, “ಇದೊಂದು ಮಹಿಳಾ ಪ್ರಧಾನ ಕಥಾಹಂದರದ ಸಿನಿಮಾ. “ಸುಮಾ’ ಅಂದ್ರೆ ಸಂಪೂರ್ಣ ಮೊಗ್ಗು ಅಲ್ಲದ, ಸಂಪೂರ್ಣ ಅರಳಿಯೂ ಇರದಂತಹ ಹೂವು. ಈ ಸಿನಿಮಾದ ನಾಯಕಿಯ ಪಾತ್ರ ಕೂಡ ಹಾಗೇ ಇರುವಂಥದ್ದು. ನಮ್ಮ ನಡುವೆಯೇ ಇರುವಂಥ ಹುಡುಗಿಯೊಬ್ಬಳ ಅಂತರಂಗದ ಕಥೆ ಈ ಸಿನಿಮಾದಲ್ಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ನಾಯಕಿ ಮತ್ತು ಸಿನಿಮಾದ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಿದ್ದೇವೆ’ ಎಂದಿತು.
ಏಪ್ರಿಲ್ ತಿಂಗಳಿನಿಂದ “ಸುಮಾ’ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಒಟ್ಟು 25 ದಿನಗಳ ಕಾಲ ಒಂದೇ ಹಂತದಲ್ಲಿ ಮಂಡ್ಯ, ಮದ್ದೂರು, ಆಲಭುಜನಹಳ್ಳಿ, ಕೆ. ಎಂ ದೊಡ್ಡಿ, ನಗರಕೆರೆ ಸುತ್ತಮುತ್ತ ಸಿನಿಮಾದ ಚಿತ್ರೀಕರಣ ನಡೆಯಲಿದೆ.
“ಸುಮಾ’ ಸಿನಿಮಾಕ್ಕೆ ಶಂಖು, ನಟರಾಜ್ ಛಾಯಾಗ್ರಹಣ, ಮುತ್ತುರಾಜ್ ಟಿ. ಸಂಕಲನವಿದೆ. ಸಿನಿಮಾದ ಹಾಡುಗಳಿಗೆ ಎನ್. ರಾಜು ಸಂಗೀತವಿದ್ದು, ಸತೀಶ್ ಜೋಶಿ ಹಾವೇರಿ ಸಾಹಿತ್ಯ ಮತ್ತು ಸಹ ನಿರ್ದೇಶನವಿದೆ.
ಚಿತ್ರತಂಡದ ಯೋಜನೆಯಂತೆ, ಇದೇ ಆಗಸ್ಟ್ ವೇಳೆಗೆ “ಸುಮಾ’ ಸಿನಿಮಾದ ಕೆಲಸಗಳನ್ನು ಪೂರ್ಣಗೊಳಿಸಿ, ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ