ಕನ್ನಡ್ ಗೊತ್ತಿಲ್ಲ ಎನ್ನುವ ಹುಡುಗಿಯ ಕನ್ನಡ ಪ್ರೀತಿ

ಅಭಿಮಾನಿಗಳಿಗೆ ಕನ್ನಡದಲ್ಲಿ ಪತ್ರ ಬರೆದ ಹರಿಪ್ರಿಯಾ

Team Udayavani, Aug 6, 2019, 3:06 AM IST

kannada

ಅಪ್ಪಟ ಕನ್ನಡದ ನಟಿ ಹರಿಪ್ರಿಯಾ, ದಿಢೀರನೆ ತಮ್ಮ ಕನ್ನಡ ಅಭಿಮಾನಿಗಳಿಗೊಂದು ಪತ್ರ ಬರೆದಿದ್ದಾರೆ. ಅದರಲ್ಲೂ ಹರಿಪ್ರಿಯಾ ಸ್ವತಃ ಕನ್ನಡದಲ್ಲೇ ಅಂದವಾಗಿ ಬರೆದಿರುವ ಪತ್ರ ಎಂಬುದು ವಿಶೇಷ. ಅಷ್ಟಕ್ಕೂ ಹರಿಪ್ರಿಯಾ ಹಾಗೆ, ಕನ್ನಡದಲ್ಲಿ ಪತ್ರ ಬರೆಯೋಕೆ ಕಾರಣ ಏನು? ಸಹಜವಾಗಿಯೇ ಇಂಥದ್ದೊಂದು ಪ್ರಶ್ನೆ ಎಲ್ಲರಿಗೂ ಎದುರಾಗುತ್ತದೆ. ವಿಷಯವಿಷ್ಟೇ, ಇತ್ತೀಚೆಗೆ ಕನ್ನಡದ ನಟಿ ರಶ್ಮಿಕಾ ಮಂದಣ್ಣ, ತಮಿಳು ಸಂದರ್ಶನವೊಂದರಲ್ಲಿ ತಮಿಳು ಭಾಷೆಯಲ್ಲೇ ಉತ್ತರಕೊಡುತ್ತ, ತಮಗೆ ಕನ್ನಡ ಬರಲ್ಲ ಎಂದು ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಸಾಮಾಜಿಕ ತಾಣಗಳಲ್ಲಿ ರಶ್ಮಿಕಾ ಮಂದಣ್ಣ ಕುರಿತು ಸಾಕಷ್ಟು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದರು.

ಅದಾದ ಬಳಿಕ ಕರ್ನಾಟಕದವರಾಗಿ ತೆಲುಗು, ತಮಿಳು ಚಿತ್ರರಂಗದಲ್ಲಿ ಸ್ಟಾರ್‌ಪಟ್ಟ ಅಲಂಕರಿಸಿರುವ ಅನುಷ್ಕಾ ಶೆಟ್ಟಿ ಕೂಡ ಅವರ ತಾಯಿ ಹುಟ್ಟು ಹಬ್ಬಕ್ಕೆ ಕನ್ನಡದಲ್ಲೇ ಬರೆದು ಪೋಸ್ಟ್ ಮಾಡಿದ್ದರು. ಅದು ಸಹ ಕನ್ನಡಿಗರಲ್ಲಿ ಸಂತಸ ಹೆಚ್ಚಿತ್ತು. ಹರಿಪ್ರಿಯಾ ಕೂಡ ತೆಲುಗು ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿದವರು. ಅವರೆಂದೂ, ಕನ್ನಡ ಭಾಷೆ ಬಗ್ಗೆ ಕೇವಲವಾಗಿ ಮಾತಾಡಿದವರಲ್ಲ. ಎಲ್ಲೇ ಹೋದರೂ, ಕನ್ನಡಾಭಿಮಾನ ತೋರುತ್ತಿದ್ದ ಹರಿಪ್ರಿಯಾ, ಈಗ ಕನ್ನಡಿಗರಿಗೊಂದು ಬರೆದಿರುವ ಪತ್ರದಲ್ಲಿ ಹೀಗೆ ಬರೆದಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ನನಗೆ ಕನ್ನಡ ಓದಲು, ಬರೆಯಲು, ಮಾತನಾಡಲು ತುಂಬಾ ಚೆನ್ನಾಗಿ ಬರುತ್ತದೆ. ಇದು ನನ್ನ ಬರಹ. ಕೆಲ ಅಭಿಮಾನಿಗಳು ನಾನು ಟ್ವಿಟ್ಟರ್‌ನಲ್ಲಿ ಮಾಡುವ ಪೋಸ್ಟ್‍ಗೆ ಕಾಮೆಂಟ್ ಮಾಡುವಾಗ, ಕನ್ನಡದಲ್ಲಿ ಬರೆಯಿರಿ ಎಂದು ಹೇಳುತ್ತಾರೆ. ನನಗೆ ಕನ್ನಡದ ಜೊತೆಗೆ ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ ಅಭಿಮಾನಿಗಳಿದ್ದಾರೆ. ಹಾಗಾಗಿ ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣಕ್ಕೆ ಬರೆಯುತ್ತಿದ್ದೆ. ಕೆಲವೊಮ್ಮೆ ಕನ್ನಡ ಬರೆಯುವಾಗ, ತಪ್ಪುಗಳಾಗುತ್ತವೆ. ಇನ್ನು, ಚಿತ್ರೀಕರಣ ವೇಳೆ ದೀರ್ಘವಾಗಿ ಟೈಪ್ ಮಾಡಲು ಸಮಯ ಕೂಡ ಸಿಗುವುದಿಲ್ಲ. ಈ ಕಾರಣಗಳಿಂದಾಗಿಯೇ ಕನ್ನಡದಲ್ಲಿ ಪೋಸ್ಟ್ ಮಾಡುವುದಿಲ್ಲ. ಯಾರೂ ತಪ್ಪು ತಿಳಿಯಬೇಡಿ’ ಎಂದು ಕನ್ನಡಾಭಿಮಾನಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಹರಿಪ್ರಿಯಾ.

ಅದೇನೆ ಇರಲಿ, ಹರಿಪ್ರಿಯಾ, ಅಪ್ಪಟ ಕನ್ನಡತಿ. ಸ್ಪಷ್ಟವಾಗಿ ಕನ್ನಡ ಮಾತಾಡುತ್ತಾರೆ. ಮುದ್ದಾಗಿಯೇ ಕನ್ನಡ ಬರೆಯುತ್ತಾರೆ ಎಂಬುದಕ್ಕೆ ಅವರು ಬರೆದ ಕನ್ನಡ ಪತ್ರವೇ ಸಾಕ್ಷಿ. ಕನ್ನಡದ ಅನೇಕ ನಟಿಯರು ಕನ್ನಡ ಗೊತ್ತಿದ್ದರೂ, ಕನ್ನಡ ಮಾತನಾಡಲು ಹಿಂಜರಿಯುವಾಗ, ಹರಿಪ್ರಿಯಾ, ಇರುವ ವಿಷಯವನ್ನು ನೇರವಾಗಿ ಸ್ಪಷ್ಟಪಡಿಸಿರುವುದು ಅವರ ಅಭಿಮಾನಿಗಳಿಗೆ ತುಸು ಖುಷಿಯನ್ನು ಹೆಚ್ಚಿಸಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.