50% ಆದೇಶಕ್ಕೆ ಕನ್ನಡ ಚಿತ್ರರಂಗಕ್ಕೆ ಆಘಾತ : ಸರ್ಕಾರಕ್ಕೆ ತಾರೆಯರ ಒಕ್ಕೊರಲಿನ ಮನವಿ
Team Udayavani, Apr 3, 2021, 3:40 PM IST
ಸರ್ಕಾರದ 50% ಅದೇಶಕ್ಕೆ ಸಿಡಿದ ಕನ್ನಡ ಚಿತ್ರರಂಗ : ಸರ್ಕಾರಕ್ಕೆ ತಾರೆಯರ ಒಕ್ಕೂರಲಿನ ಮನವಿ
ಬೆಂಗಳೂರು : ಚಿತ್ರಮಂದಿರಗಳಲ್ಲಿ 50% ಆಸನ ಭರ್ತಿಗೆ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ಕನ್ನಡ ಚಿತ್ರರಂಗದಲ್ಲಿ ಮತ್ತೆ ಆಕ್ರೋಶ ವ್ಯಕ್ತವಾಗುತ್ತಿದೆ. ಚಂದನವನದ ನಟರು ಹಾಗೂ ನಿರ್ದೇಶಕರು ಸರ್ಕಾರದ ನೂತನ ಸುತ್ತೋಲೆ ವಿರುದ್ಧ ಒಕ್ಕೊರಲಿನಿಂದ ಪ್ರತಿಭಟಿಸುತ್ತಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಶುಕ್ರವಾರ ರಾಜ್ಯ ಸರ್ಕಾರ ನೂತನ ಸುತ್ತೋಲೆ ಹೊರಡಿಸಿ, ಥಿಯೇಟರ್ ಗಳಲ್ಲಿ ಕೇವಲ 50% ಮಾತ್ರ ಆಸನ ವ್ಯವಸ್ಥೆ ಕಲ್ಪಿಸುವಂತೆ ಆದೇಶಿಸಿದೆ. ಇದು ಕಳೆದೆರಡು ದಿನಗಳ ಹಿಂದೆ ತೆರೆ ಕಂಡಿರುವ ಪುನೀತ್ ರಾಜಕುಮಾರ್ ಅವರ ‘ಯುವರತ್ನ’ ಸೇರಿದಂತೆ ಬಿಡುಗಡೆಗೆ ಸಿದ್ಧವಾಗಿರುವ ಕನ್ನಡದ ಸಿನಿಮಾಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಈ ಹಿನ್ನೆಲೆ ಸರ್ಕಾರ ಈ ಕೂಡಲೇ ತಮ್ಮ ಆದೇಶ ಹಿಂಪಡೆಯುವಂತೆ ನಟ ಪುನೀತ್ ರಾಜಕುಮಾರ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ನಿನ್ನೆಯಷ್ಟೆ ( ಶುಕ್ರವಾರ) ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಇಂದು ಯುವರತ್ನ ಚಿತ್ರತಂಡದ ಬೆನ್ನಿಗೆ ನಿಂತಿರುವ ಕನ್ನಡ ಚಿತ್ರರಂಗದ ತಾರೆಯರು ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡುತ್ತಿದ್ದಾರೆ. ನಟ ಸುದೀಪ್, ಸತೀಶ್ ನೀನಾಸಂ, ನಿರ್ದೇಶಕ ದಿನಕರ್ ತೂಗುದೀಪ, ಜೋಗಿ ಖ್ಯಾತಿಯ ಪ್ರೇಮ್, ನಟ, ನಟ ನಿರ್ದೇಶಕ ರಿಷಭ್ ಶೆಟ್ಟಿ, ರಕ್ಷಿತ್ ಶೆಟ್ಟಿ, ದಿಯಾ ಖ್ಯಾತಿಯ ಪೃತ್ವಿ ಅಂಬರ್, ಡಾಲಿ ಧನಂಜಯ್ ಹಾಗೂ ರವಿಶಂಕರ್ ಗೌಡ ಸೇರಿದಂತೆ ಅನೇಕರು ಈ ಆದೇಶ ಹಿಂಪಡೆದು, 100 % ಆಸನ ವ್ಯವಸ್ಥೆಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಕೇಳಿಕೊಂಡಿದ್ದಾರೆ.
ಸಿನಿಮಾ ಮನರಂಜನೆಗಾಗಿರಬಹುದು. ಅದರ ಜೊತೆಜೊತೆಗೆ ನೀವು ಊಹಿಸಲು ಸಾಧ್ಯವಿಲ್ಲದಷ್ಟು ಕುಟುಂಬಗಳಿಗೆ ಅದುವೆ ಹೊಟ್ಟೆ-ಬಟ್ಟೆ ನೀಡುತ್ತದೆ. ದಯವಿಟ್ಟು ಚಿತ್ರಮಂದಿರಗಳಲ್ಲಿ ಶೇಕಡ 50ರಷ್ಟು ಅನುಮತಿಯ ನಿಯಮವನ್ನು ಹಿಂಪಡೆಯಿರಿ ಎಂದು ನಟ ಸತೀಶ್ ನೀನಾಸಂ ಒತ್ತಾಯಿಸಿದ್ದಾರೆ.
ಚೇತರಿಕೆಯ ಹಾದಿಯಲ್ಲಿರುವ ಕನ್ನಡ ಚಿತ್ರರಂಗಕ್ಕೆ ಸರ್ಕಾರದ ಶೇ.50ರ ನಿರ್ಧಾರದಿಂದ ತೊಂದರೆ ಉಂಟಾಗಲಿದ್ದು, ಸಂಪೂರ್ಣ ಸುರಕ್ಷತಾ ಕ್ರಮಗಳೊಂದಿಗೆ ಚಿತ್ರ ಪ್ರದರ್ಶಿಸಲು ಬದ್ಧರಾಗಿದ್ದೇವೆ. ಸರ್ಕಾರ ದಯವಿಟ್ಟು ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಬೇಕಾಗಿ ಮನವಿ ನಟರು ಮನವಿ ಮಾಡಿದ್ದಾರೆ.
ಯಾವುದೇ ಮುನ್ಸೂಚನೆ ನೀಡದೆ ಸರ್ಕಾರದ ಈ ಆದೇಶ ನೀಡಿ ಒಂದು ಒಳ್ಳೆಯ ಕನ್ನಡ ಸಿನಿಮಾಕ್ಕೆ ಅನ್ಯಾಯ ಮಾಡುವುದು ಸರಿಯಲ್ಲ. ಒಬ್ಬ ಜವಾಬ್ದಾರಿಯುತ್ತ ನಾಗರಿಕನಾಗಿ ಸರ್ಕಾರದ ಆದೇಶವನ್ನು ಗೌರವಿಸುವುದು ಹಾಗೂ ಜನರ ಆರೋಗ್ಯದ ಬಗ್ಗೆ ಕಾಳಜಿವಯಿಸುವುದು ನಮ್ಮ ಕರ್ತವ್ಯ. ಒಂದು ವರ್ಷದ ನಂತರ ಚೇತರಿಸಿಕೊಳ್ಳುತ್ತಿದ್ದ ಚಿತ್ರರಂಗಕ್ಕೆ ಶೇ.50 ರಷ್ಟು ಕಡಿತ ಮಾರಕವಾಗುತ್ತದೆ. ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಸಂಪೂರ್ಣ ಸಾಮರ್ಥ್ಯದಲ್ಲಿ ಚಿತ್ರಮಂದಿರಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಬೇಕಾಗಿ ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ