ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ


Team Udayavani, May 21, 2022, 1:20 PM IST

ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

ಯಾವುದೇ ಕ್ಷೇತ್ರದವಾದರೂ ಸರಿ, ಅಲ್ಲಿ ಅಂದುಕೊಂಡಿದ್ದನ್ನು ಸಾಧಿಸಬೇಕಾದರೆ ಒಂದಷ್ಟು ಸೈಕಲ್‌ ಹೊಡೆಯಲೇಬೇಕು. ಅದರಲ್ಲೂ ತಾನು ಇಷ್ಟಪಟ್ಟು ಆರಿಸಿಕೊಂಡ ಕ್ಷೇತ್ರದಲ್ಲಿ ಕನಸು ನನಸು ಮಾಡಿಕೊಳ್ಳಲು ಹೊರಟವರು ಎಲ್ಲ ಕಷ್ಟ-ನಷ್ಟಗಳನ್ನೂ ಸಹಿಸಿಕೊಳ್ಳಬೇಕು. ಇನ್ನು ಸಿನಿಮಾ ರಂಗದಲ್ಲಿ ಮಿಂಚಬೇಕು ಎಂದು ಕನಸು ಕಂಡು ಅದರ ಬೆನ್ನೇರಿ ಹೊರಟವರ ಕಷ್ಟ-ಕಾರ್ಪಣ್ಯಗಳನ್ನು ಬಿಡಿಸಿ ಹೇಳಬೇಕಾಗಿಲ್ಲ. ಇದೇ ವಿಷಯವನ್ನು ಇಟ್ಟುಕೊಂಡು ಈ ವಾರ ತೆರೆಗೆ ಬಂದಿರುವ ಚಿತ್ರ “ಕಟ್ಟಿಂಗ್‌ ಶಾಪ್‌’.

ಇಲ್ಲಿಯವರೆಗೆ ಸಿನಿಮಾ ಹೀರೋ ಆಗಬೇಕು, ಹೀರೋಯಿನ್‌ ಆಗಬೇಕು, ಡೈರೆಕ್ಟರ್‌ ಆಗಬೇಕು ಎಂದು ಕನಸು ಕಂಡವರ, ಅದರಲ್ಲಿ ಏಳು-ಬೀಳುಗಳನ್ನು ನೋಡಿದವರ ಹಲವು ಕಥೆಗಳು ಕನ್ನಡ ಮತ್ತು ಬೇರೆ ಬೇರೆ ಭಾಷೆಗಳಲ್ಲಿ ಸಿನಿಮಾ ಆಗಿ ತೆರೆಗೆ ಬಂದಿದ್ದನ್ನು ನೀವು ನೋಡಿರಬಹುದು. ಆದರೆ ಸಿನಿಮಾದಲ್ಲಿ ಸಂಕಲನಕಾರನಾಗಬೇಕು ಎಂಬ ಕನಸನ್ನು ಹೊತ್ತ ಹುಡುಗನೊಬ್ಬ ಏನೇನು ಸವಾಲುಗಳನ್ನು ಎದುರಿಸುತ್ತಾನೆ, ಕೊನೆಗೆ ಅಂದುಕೊಂಡಿದ್ದನ್ನು ಸಾಧಿಸುತ್ತಾನಾ? ಇಲ್ಲವಾ? ಅನ್ನೋದು “ಕಟ್ಟಿಂಗ್‌ ಶಾಪ್‌’ ಸಿನಿಮಾದ ಕಥಾಹಂದರ.

ಬಹುಶಃ ಕನ್ನಡದಲ್ಲಿ ಇದೇ ಮೊದಲ ಬಾರಿಗೆ ತೆರೆಹಿಂದೆ ಕೆಲಸ ಮಾಡುವ, ಒಂದು ಸಿನಿಮಾ ತೆರೆಮೇಲೆ ಅಂದವಾಗಿ ಕಾಣುವಂತೆ ಮಾಡುವ ಸಂಕಲನಕಾರನ ಬದುಕು-ಬವಣೆ, ವೇದನೆ-ಸಾಧನೆ ಎಲ್ಲವನ್ನೂ “ಕಟ್ಟಿಂಗ್‌ ಶಾಪ್‌’ ಸಿನಿಮಾದಲ್ಲಿ ತಿಳಿಹಾಸ್ಯದ ಮೂಲಕ ತೆರೆಮೇಲೆ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಪವನ್‌ ಭಟ್‌.

ಇದನ್ನೂ ಓದಿ:ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಸಿನಿಮಾ ರಂಗದಲ್ಲಿ ಪ್ರತಿನಿತ್ಯ ನೋಡುವ ತೆರೆಮರೆಯ ಹೀರೋವನ್ನು ತೆರೆಮುಂದೆ ತಂದಿರುವ ಚಿತ್ರತಂಡ ಪ್ರಯತ್ನ ಪ್ರಶಂಸನಾರ್ಹ. ಇಡೀ ಸಿನಿಮಾದ ಮೊದಲರ್ಧ ಕಾಲೇಜು ಲೈಫ್, ಆಸೆ-ಆಕಾಂಕ್ಷೆಗಳನ್ನು ಬೆನ್ನತ್ತುವ ಹುಡುಕರ ಹುಡುಕಾಟ, ಪೋಷಕರ ತೊಳಲಾಟ ಎಲ್ಲವನ್ನೂ ನವಿರಾದ ಹಾಸ್ಯದ ಮೂಲಕ ಲೈವ್ಲಿಯಾಗಿ ಕಟ್ಟಿಕೊಡಲಾಗಿದೆ.

ಸಿನಿಮಾದ ದ್ವಿತೀಯಾರ್ಧ ಸ್ವಲ್ಪ ಗಂಭೀರ ವಾಗುತ್ತ, ತಿರುವುಗಳನ್ನು ಪಡೆದುಕೊಂಡು ಕ್ಲೈಮ್ಯಾಕ್ಸ್‌ಗೆ ಬಂದು ನಿಲ್ಲುತ್ತದೆ. “ಕಟ್ಟಿಂಗ್‌ ಶಾಪ್‌’ನಲ್ಲಿ ದ್ವಿತೀಯಾರ್ಧದ ಕೆಲ ಸನ್ನಿವೇಶಗಳಿಗೆ “ಕಟ್ಟಿಂಗ್‌’ ಅಗಿದ್ದರೆ, “ಶಾಪ್‌’ನಲ್ಲಿ ಚಿತ್ರಕಥೆ ಇನ್ನಷ್ಟು ವೇಗವಾಗಿ ಸಾಗುವ ಸಾಧ್ಯತೆಗಳಿದ್ದವು.

ಇನ್ನು ನಾಯಕ ಪ್ರವೀಣ್‌, ನಾಯಕಿ ಅರ್ಚನಾ, ದೀಪಕ್‌ ಭಟ್‌, ಅಭಿಷೇಕ್‌ ಸಾವಳಗಿ, ನವೀನ್‌ ಕೃಷ್ಣ, ವತ್ಸಲಾ, ಉಮೇಶ್‌ ಮೊದಲಾದ ಕಲಾವಿದರು ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ತೆರೆಮೇಲೆ ಗಮನ ಸೆಳೆಯುತ್ತಾರೆ. ಒಂದಷ್ಟು ರಂಜನೆ, ಅಲ್ಲಲ್ಲಿ ಬೋಧನೆ ಜೊತೆಗೆ ತೆರೆಗೆ ಬಂದಿರುವ “ಕಟ್ಟಿಂಗ್‌ ಶಾಪ್‌’ನಲ್ಲಿ ಮಿನಿಮಂ ಮನರಂಜನೆ ಗ್ಯಾರಂಟಿ ಎನ್ನಲು ಅಡ್ಡಿಯಿಲ್ಲ.

ಜಿ. ಎಸ್‌ ಕಾರ್ತಿಕ ಸುಧನ್‌

ಟಾಪ್ ನ್ಯೂಸ್

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.