ಮಾರ್ಗರೇಟ್ ಗೆ ಸಾಥ್ ನೀಡಿದ ಡಾಲಿ: ಇದು ಸೋನಲ್- ಅಭಿಲಾಶ್ ನಟನೆಯ ಚಿತ್ರ


Team Udayavani, Apr 24, 2023, 1:42 PM IST

Kannada New Movie Margaret Lover Of Ramachari

ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ನಾಗರಹಾವು ಸಿನಿಮಾದ ರಾಮಾಚಾರಿ ಹಾಗೂ ಮಾರ್ಗರೇಟ್‌ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಈಗ ಇದೇ ನಾಗರಹಾವು ಸಿನಿಮಾದ ಪಾತ್ರಗಳ ಸ್ಫೂರ್ತಿ ಪಡೆದು ಹೊಸ ಸಿನಿಮಾವೊಂದು ಬರುತ್ತಿದೆ. ಆ ಚಿತ್ರಕ್ಕೆ “ಮಾರ್ಗರೇಟ್‌ ಲವರ್‌ ಆಫ್ ರಾಮಾಚಾರಿ’ ಎಂದು ಟೈಟಲ್‌ ಇಡಲಾಗಿದೆ.

ಯುವ ಪ್ರತಿಭೆ ಅಭಿಲಾಶ್‌ ನಾಯಕನಾಗಿ ಹಾಗೂ ಸೋನಲ್‌ ಮೊಂಥೆರೋ ನಾಯಕಿ ಯಾಗಿ ನಟಿಸುತ್ತಿರುವ ಮಾರ್ಗರೇಟ್‌ ಲವರ್‌ ಆಫ್ ರಾಮಾಚಾರಿ ಚಿತ್ರದ ಮುಹೂರ್ತ ಸಮಾರಂಭ ಭಾನುವಾರ ಬೆಂಗಳೂರಿನ ಬಂಡೇ ಮಹಾಕಾಳಿ ಸನ್ನಿಧಿಯಲ್ಲಿ ನೆರವೇರಿತು. ನಟರಾಕ್ಷಸ ಡಾಲಿ ಧನಂಜಯ್‌ ಹೊಸ ತಂಡಕ್ಕೆ ಶುಭ ಹಾರೈಸಿದರು.

ಡಾಲಿ ಧನಂಜಯ್‌ ಮಾತನಾಡಿ,”ಅಭಿ ಬಡವ ರಾಸ್ಕಲ್, ಹೊಯ್ಸಳದಲ್ಲಿ ಸಣ್ಣ ಪಾತ್ರ ಮಾಡಿದ್ದಾನೆ. ಆತ ಅಭಿಮಾನಿಯಾಗಿ ಪರಿಚಯ. ಈಗ ಹೀರೋ ಆಗುತ್ತಿದ್ದಾನೆ. ಸುಮಾರು ವರ್ಷಗಳ ಪ್ರಯತ್ನ. ಇಡೀ ತಂಡಕ್ಕೆ ಒಳ್ಳೆಯದಾಗಲಿ’ ಎಂದು ತಿಳಿಸಿದರು.

ನಿರ್ದೇಶಕ ಗಿರಿಧರ್‌ ಕುಂಬಾರ್‌ ಮಾತನಾಡಿ, ಈ ಚಿತ್ರದ ಮೂಲಕ ಇವತ್ತಿನ ಸಮಾಜಕ್ಕೆ ಬೇಕಿರುವ ಸಂದೇಶ ಕೊಡುತ್ತೇವೆ. ನಾಗರಹಾವು ಸಿನಿಮಾದ ಪಾತ್ರಗಳು ಲೆಜೆಂಡ್‌ ಪಾತ್ರಗಳು. ಅವುಗಳನ್ನು ನಾವು ಮುಟ್ಟಲಾಗುವುದಿಲ್ಲ. ಒಬ್ಬ ಸಾಮಾನ್ಯ ಹುಡುಗನಿಗೆ ಶ್ರೀಮಂತ ಹುಡುಗಿ ಸಿಕ್ಕಾಗ ಏನಾಗುತ್ತದೆ ಅನ್ನೋದೆ ಕಥೆ. ಮೇ 15ರಂದು ಶೂಟಿಂಗ್‌ ಶುರುವಾಗಲಿದೆ ಎಂದರು.

ನಿರ್ಮಾಪಕರಾದ ಹರೀಶ್‌ ಸಿನಿಮಾ ಬಗ್ಗೆ ಮಾತನಾಡಿದರು. ನಟ ಅಭಿಲಾಶ್‌ ಮಾತನಾಡಿ, “ಇವತ್ತು ಕಷ್ಟಪಟ್ಟು ಇಲ್ಲಿ ಕೂತಿದ್ದೇನೆ. ಇದಕ್ಕೆ ಮೂಲ ಕಾರಣ ನಿರ್ಮಾಪಕರು. ನನ್ನ ಒದ್ದಾಟಗಳನ್ನು ಬಹಳ ಹತ್ತಿರದಿದ್ದ ನೋಡಿದ್ದಾರೆ. ಇವರೇ ನನ್ನ ಅನ್ನದಾತರು. ಧನಂಜಯ್‌ ಅವರು ಹೇಳಿಕೊಟ್ಟ ಮಾರ್ಗದರ್ಶನಲ್ಲಿ ನಾನು ನಡೆಯುತ್ತಿದ್ದೇವೆ. ಈಗ ಅವರು ನನ್ನ ಚಿತ್ರಕ್ಕೆ ಹಾರೈಸಿರುವುದು ಖುಷಿಕೊಟ್ಟಿದೆ’ ಎಂದರು. ಸೋನಲ್‌ ಮೊಂಥೆರೋ, ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ:ಕಾಂಗ್ರೆಸ್‌ ಅಭ್ಯರ್ಥಿ ಮೊದಲು ಬದ್ಧತೆ ಸ್ಪಷ್ಟ ಪಡಿಸಲಿ; ವಿ.ಸುನಿಲ್‌ಕುಮಾರ್‌

ಅಭಿಲಾಶ್‌ ರಾಮಾಚಾರಿ ಅಲಿಯಾಸ್‌ ರಾಮು ಎಂಬ ಪಾತ್ರ ಮಾಡಲಿದ್ದಾರೆ. ನಟಿ ಸೋನಲ್‌ ಮೊಂಥೆರೋ ಮೀರಾ ರಾಘವ್‌ ರಾಮ್‌ ಅಲಿಯಾಸ್‌ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಯಶ್‌ ಶೆಟ್ಟಿ ಜಯಂತ್‌ ಅಲಿಯಾಸ್‌ ಜಲೀಲಾಗಿ ಕಾಣಿಸಿಕೊಳ್ಳಲಿದ್ದಾರೆ. ಅನುಭವಿ ನಟರಾದ ಅವಿನಾಶ್‌ ಮತ್ತು ರವಿಶಂಕರ್‌ ಮುಂತಾದವರು ಕೂಡ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಾಸುಕಿ ವೈಭವ್‌

ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ “ಮಾರ್ಗರೇಟ್‌ ಲವರ್‌ ಆಫ್ ರಾಮಾಚಾರಿ’ ಮುಹೂರ್ತ ನೆರವೇರಿದ್ದು, ಮೇ 15ರಿಂದು ಚಿತ್ರದುರ್ಗದಲ್ಲಿ ಶೂಟಿಂಗ್‌ ಶುರುವಾಗಲಿದೆ.

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.