Kannada Serial; ಹೊಸ ಧಾರವಾಹಿ ‘ಅಮೃತ ಘಳಿಗೆ’
Team Udayavani, Oct 30, 2023, 3:41 PM IST
ಕಿರುತೆರೆಯ ಖ್ಯಾತ ನಿರ್ದೇಶಕ, ಬರಹಗಾರ ರವಿ ಆರ್ ಗರಣಿಯವರ ಸಾರಥ್ಯದಲ್ಲಿ “ಅಮೃತ ಘಳಿಗೆ’ ಎಂಬ ಧಾರಾವಾಹಿಯ ಕಥೆ ಮೂಡಿ ಬರುತ್ತಿದ್ದು, ಭಾರತೀಶ್ ಈ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ.
ಕಿರುತೆರೆಯ ಖ್ಯಾತ ಕಲಾವಿದರೊಂದಿಗೆ ಹೊಸ ಕಲಾವಿದರ ಸಂಗಮದೊಂದಿಗೆ ಈ ಧಾರಾವಾಹಿ ಆರಂಭ ವಾಗುತ್ತಿದೆ. ಈ ಧಾರಾವಾಹಿಯಲ್ಲಿ ನಾಯಕಿ ಪಾತ್ರ ತುಂಬಾ ವಿಶಿಷ್ಟವಾಗಿದೆ.
ಎರಡು ವಿಭಿನ್ನ ನೆಲೆಯ ಕೌಟುಂಬಿಕ ಸಂಘರ್ಷದ ಕಥೆಯಲ್ಲಿನ ತಿರುವುಗಳು ಈ ಮೆಗಾ ಧಾರಾವಾಹಿಗೆ ಹೊಸ ರೂಪ ನೀಡುತ್ತದೆ. ಕೇವಲ ರಿಮೇಕ್ ಮತ್ತು ಅದ್ಧೂರಿತನದಲ್ಲೇ ಕಳೆದು ಹೋಗಿರುವ ಧಾರಾವಾಹಿ ಪ್ರಪಂಚಕ್ಕೆ ಕಥೆಯನ್ನೇ ಮೂಲವಾಗಿಟ್ಟುಕೊಂಡು ಪ್ರೇಕ್ಷಕರ ಮುಂದೆ ಬರುತ್ತಿದೆ.
ಅಕ್ಟೋಬರ್ 30 ರಿಂದ ಸೋಮವಾರದಿಂದ ಶುಕ್ರವಾರದ ವರೆಗೆ ರಾತ್ರಿ 9ಗಂಟೆಗೆ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ