‘ಕಣ್ಣು ಹೊಡೆಯಾಕ ಹಾಡು’ 2 ಕೋಟಿ ವೀಕ್ಷಣೆ: ಶ್ರೇಯಾ ಘೋಷಾಲ್‌ ಫುಲ್ ಖುಷ್‌


Team Udayavani, Mar 22, 2021, 9:30 AM IST

‘ಕಣ್ಣು ಹೊಡೆಯಾಕ ಹಾಡು’ 2 ಕೋಟಿ ವೀಕ್ಷಣೆ: ಶ್ರೇಯಾ ಘೋಷಾಲ್‌ ಫುಲ್ ಖುಷ್‌

ಇತ್ತೀಚೆಗಷ್ಟೇ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ “ರಾಬರ್ಟ್‌’ ಚಿತ್ರ ಬಾಕ್ಸಾಫೀಸ್‌ನಲ್ಲಿ 50 ಕೋಟಿ ಕ್ಲಬ್‌ ಸೇರಿ ಸುದ್ದಿಯಾಗಿತ್ತು. ಚಿತ್ರತಂಡ ಕೂಡ ಈ ಸಂಭ್ರಮವನ್ನು ಭರ್ಜರಿಯಾಗಿಯೇ ಆಚರಿಸಿತ್ತು. ಈಗ “ರಾಬರ್ಟ್‌’ ಶತಕೋಟಿ ಕ್ಲಬ್‌ನತ್ತ ಮುನ್ನುಗ್ಗುತ್ತಿದೆ. ಇದರ ನಡುವೆಯೇ, “ರಾಬರ್ಟ್‌’ ಚಿತ್ರದ ಹಾಡು ಮತ್ತೂಂದು ದಾಖಲೆ ಬರೆದಿದೆ.

ಹೌದು, “ರಾಬರ್ಟ್‌’ ಚಿತ್ರದಲ್ಲಿ ಬರುವ “ಕಣ್ಣು ಹೊಡಿಯಾಕ ಮೊನ್ನೆ ಕಲತೀನಿ… ನೀನಾ ಹೇಳಲೇ ಮಗನ, ನಿನ್ನ ನೋಡಿ ಸುಮ್ನೆ ಹೆಂಗಿರ್ಲಿ…’ ಎಂಬ ಉತ್ತರ ಕನ್ನಡ ಸೊಗಡಿನ ಹಾಡನ್ನು ನೀವೆಲ್ಲ ಕೇಳಿರುತ್ತೀರಿ. ಬಾಲಿವುಡ್‌ ಗಾಯಕಿ ಶ್ರೇಯಾ ಘೋಷಾಲ್ ಧ್ವನಿಯಲ್ಲಿ ಮೂಡಿಬಂದ ಈ ಹಾಡಿಗೆ ಕೇಳುಗರು ಫಿದಾ ಆಗಿದ್ದರು. ಸೋಶಿಯಲ್‌ ಮೀಡಿಯಾದಲ್ಲೂ ಈ ಹಾಡಿಗೆ ಭರ್ಜರಿ ರೆಸ್ಪಾನ್ಸ್‌ ಸಿಗುತ್ತಿದ್ದು, ಹಾಡು ದೊಡ್ಡಮಟ್ಟದಲ್ಲಿ ಹಿಟ್‌ ಆಗಿದೆ. ಇದೀಗ ಈ ಹಾಡಿನ ಲಿರಿಕಲ್‌ ವಿಡಿಯೋ ಯು-ಟ್ಯೂಬ್‌ನಲ್ಲಿ ಎರಡು ಕೋಟಿಗೂ ಅಧಿಕ ವೀವ್ಸ್‌ ಪಡೆದುಕೊಂಡಿದೆ.

ಇದನ್ನೂ ಓದಿ:‘ಮಹಾನಟಿ ನಾಪತ್ತೆ’  .. ನಟನ ತಮಾಷೆ ಟ್ವಿಟ್‍ಗೆ ಪೊಲೀಸರು ಏನಂದ್ರು ಗೊತ್ತಾ ?

ಕಳೆದ ಒಂದೂವರೆ ದಶಕದಿಂದ ಶ್ರೇಯಾ ಘೋಷಲ್‌ ಕನ್ನಡದಲ್ಲಿ ನೂರಾರು ಗೀತೆಗಳನ್ನು ಹಾಡಿದ್ದರೂ, ಉತ್ತರ ಕರ್ನಾಟಕ ಶೈಲಿಯ ಗೀತೆಗೆ ಧ್ವನಿಯಾಗಿದ್ದು ಇದೇ ಮೊದಲು ಎನ್ನಲಾಗಿದೆ. ಮೊದಲ ಬಾರಿಗೆ ಹಾಡಿರುವ ಈ ಶೈಲಿಯ ಹಾಡಿಗೆ ಇಷ್ಟೊಂದು ದೊಡ್ಡ ಪ್ರತಿಕ್ರಿಯೆ ಸಿಗುತ್ತಿರುವುದರಿಂದ, ಶ್ರೇಯಾ ಘೋಷಾಲ್‌ ಕೂಡ ಫುಲ್ ‌ ಖುಷಿ ಆಗಿದ್ದಾರೆ. ಯು-ಟ್ಯೂಬ್‌ನಲ್ಲಿ ಟ್ರೆಂಡಿಂಗ್‌ ಆಗಿರುವ ಈ ಹಾಡಿನ ಬಗ್ಗೆ, ಸೋಶಿಯಲ್‌ ಮೀಡಿಯಾದಲ್ಲಿ ಶ್ರೇಯಾ ಸಂತಸ ವ್ಯಕ್ತಪಡಿಸಿದ್ದಾರೆ

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಶ್ರೇಯಾ ಘೋಷಾಲ್‌, “ಕಣ್ಣು ಹೊಡಿಯಾಕ… ಹಾಡು 20 ಮಿಲಿಯನ್‌ ವೀವ್ಸ್‌ ಪಡೆದು ಕೊಂಡಿದೆ. ಮೊದಲ ಬಾರಿಗೆ ನಾನು ಉತ್ತರ ಕರ್ನಾಟಕದ ಶೈಲಿಯಲ್ಲಿ ಈ ಹಾಡು ಹೇಳಿದ್ದೇನೆ. ಎಂತಹ ಸುಂದರವಾದ ಭಾಷೆ ಇದು. ಈ ಹಾಡಿನಿಂದ ನಾನು ತುಂಬ ಖುಷಿಪಟ್ಟಿದ್ದೇನೆ. ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯಾ, ಹಾಡು ಬರೆದ ಯೋಗರಾಜ್‌ ಭಟ್‌, ನಟ ದರ್ಶನ್‌, ನಟಿ ಆಶಾ ಭಟ್‌ ಅವರಿಗೆ ನನ್ನ ಧನ್ಯವಾದಗಳು’ ಎಂದಿದ್ದಾರೆ.

ಇನ್ನು ಶ್ರೇಯಾ ಘೋಷಾಲ್‌ ಟ್ವೀಟ್‌ಗೆ ಪ್ರತಿಯಾಗಿ ರೀ-ಟ್ವೀಟ್‌ ಮಾಡಿರುವ ನಿರ್ದೇಶಕ ಯೋಗರಾಜ್‌ ಭಟ್‌ ಕೂಡ “ಅಸಾಧಾರಣ ಕಂಠದ ಒಡತಿ, ಸರಳ ಸುಂದರಿ, ನಾಡಿನ ಅತ್ಯಂತ ನೆಚ್ಚಿನ ಗಾಯಕಿ ಶ್ರೇಯಾ ಘೋಷಾಲ್‌ ಅವರಿಗೆ ಈ ಹಾಡು ಹಾಡಿದ್ದಕ್ಕೆ ನಮನ ಮತ್ತು ಧನ್ಯವಾದ’ ಎಂದಿದ್ದಾರೆ. ಇನ್ನು ಶ್ರೇಯಾ ಘೋಷಾಲ್ ಅವರಿಗೆ ಧನ್ಯವಾದ ಹೇಳಿರುವ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ, “ನಿಮ್ಮ ಅದ್ಭುತ ಧ್ವನಿಯಿಂದ ಇಂತಹ ಮ್ಯಾಜಿಕ್‌ಗಳು ಸೃಷ್ಟಿಯಾಗುತ್ತವೆ’ ಎಂದಿದ್ದಾರೆ. “ರಾಬರ್ಟ್‌’ ನಾಯಕ ನಟಿ ಆಶಾ ಭಟ್‌ ಕೂಡ “ನಿಮ್ಮ ಧ್ವನಿ ಮತ್ತೂಮ್ಮೆ ಮ್ಯಾಜಿಕ್‌ ಮಾಡಿದೆ’ ಎಂದಿದ್ದಾರೆ. ಶ್ರೇಯಾ ಖುಷಿಯಿಂದ ಮಾಡಿದ ಟ್ವೀಟ್‌ಗೆ ಚಿತ್ರತಂಡ ಕೂಡ ಅಭಿನಂದನೆ ತಿಳಿಸಿದೆ.

ಒಟ್ಟಾರೆ ಶ್ರೇಯಾ ಉತ್ತರ ಕರ್ನಾಟಕ ಶೈಲಿಯ ಹಾಡು ಸೂಪರ್‌ ಹಿಟ್‌ ಆಗಿದ್ದು, ಮುಂದಿನ ದಿನಗಳಲ್ಲಿ ಶ್ರೇಯಾ ಧ್ವನಿಯಲ್ಲಿ ಇನ್ನಷ್ಟು ಇಂಥದ್ದೇ ಹಾಡುಗಳು ಮೂಡಿಬರಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ ಕೇಳುಗರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.