‘ಕಣ್ಣು ಹೊಡೆಯಾಕ ಹಾಡು’ 2 ಕೋಟಿ ವೀಕ್ಷಣೆ: ಶ್ರೇಯಾ ಘೋಷಾಲ್‌ ಫುಲ್ ಖುಷ್‌


Team Udayavani, Mar 22, 2021, 9:30 AM IST

‘ಕಣ್ಣು ಹೊಡೆಯಾಕ ಹಾಡು’ 2 ಕೋಟಿ ವೀಕ್ಷಣೆ: ಶ್ರೇಯಾ ಘೋಷಾಲ್‌ ಫುಲ್ ಖುಷ್‌

ಇತ್ತೀಚೆಗಷ್ಟೇ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ “ರಾಬರ್ಟ್‌’ ಚಿತ್ರ ಬಾಕ್ಸಾಫೀಸ್‌ನಲ್ಲಿ 50 ಕೋಟಿ ಕ್ಲಬ್‌ ಸೇರಿ ಸುದ್ದಿಯಾಗಿತ್ತು. ಚಿತ್ರತಂಡ ಕೂಡ ಈ ಸಂಭ್ರಮವನ್ನು ಭರ್ಜರಿಯಾಗಿಯೇ ಆಚರಿಸಿತ್ತು. ಈಗ “ರಾಬರ್ಟ್‌’ ಶತಕೋಟಿ ಕ್ಲಬ್‌ನತ್ತ ಮುನ್ನುಗ್ಗುತ್ತಿದೆ. ಇದರ ನಡುವೆಯೇ, “ರಾಬರ್ಟ್‌’ ಚಿತ್ರದ ಹಾಡು ಮತ್ತೂಂದು ದಾಖಲೆ ಬರೆದಿದೆ.

ಹೌದು, “ರಾಬರ್ಟ್‌’ ಚಿತ್ರದಲ್ಲಿ ಬರುವ “ಕಣ್ಣು ಹೊಡಿಯಾಕ ಮೊನ್ನೆ ಕಲತೀನಿ… ನೀನಾ ಹೇಳಲೇ ಮಗನ, ನಿನ್ನ ನೋಡಿ ಸುಮ್ನೆ ಹೆಂಗಿರ್ಲಿ…’ ಎಂಬ ಉತ್ತರ ಕನ್ನಡ ಸೊಗಡಿನ ಹಾಡನ್ನು ನೀವೆಲ್ಲ ಕೇಳಿರುತ್ತೀರಿ. ಬಾಲಿವುಡ್‌ ಗಾಯಕಿ ಶ್ರೇಯಾ ಘೋಷಾಲ್ ಧ್ವನಿಯಲ್ಲಿ ಮೂಡಿಬಂದ ಈ ಹಾಡಿಗೆ ಕೇಳುಗರು ಫಿದಾ ಆಗಿದ್ದರು. ಸೋಶಿಯಲ್‌ ಮೀಡಿಯಾದಲ್ಲೂ ಈ ಹಾಡಿಗೆ ಭರ್ಜರಿ ರೆಸ್ಪಾನ್ಸ್‌ ಸಿಗುತ್ತಿದ್ದು, ಹಾಡು ದೊಡ್ಡಮಟ್ಟದಲ್ಲಿ ಹಿಟ್‌ ಆಗಿದೆ. ಇದೀಗ ಈ ಹಾಡಿನ ಲಿರಿಕಲ್‌ ವಿಡಿಯೋ ಯು-ಟ್ಯೂಬ್‌ನಲ್ಲಿ ಎರಡು ಕೋಟಿಗೂ ಅಧಿಕ ವೀವ್ಸ್‌ ಪಡೆದುಕೊಂಡಿದೆ.

ಇದನ್ನೂ ಓದಿ:‘ಮಹಾನಟಿ ನಾಪತ್ತೆ’  .. ನಟನ ತಮಾಷೆ ಟ್ವಿಟ್‍ಗೆ ಪೊಲೀಸರು ಏನಂದ್ರು ಗೊತ್ತಾ ?

ಕಳೆದ ಒಂದೂವರೆ ದಶಕದಿಂದ ಶ್ರೇಯಾ ಘೋಷಲ್‌ ಕನ್ನಡದಲ್ಲಿ ನೂರಾರು ಗೀತೆಗಳನ್ನು ಹಾಡಿದ್ದರೂ, ಉತ್ತರ ಕರ್ನಾಟಕ ಶೈಲಿಯ ಗೀತೆಗೆ ಧ್ವನಿಯಾಗಿದ್ದು ಇದೇ ಮೊದಲು ಎನ್ನಲಾಗಿದೆ. ಮೊದಲ ಬಾರಿಗೆ ಹಾಡಿರುವ ಈ ಶೈಲಿಯ ಹಾಡಿಗೆ ಇಷ್ಟೊಂದು ದೊಡ್ಡ ಪ್ರತಿಕ್ರಿಯೆ ಸಿಗುತ್ತಿರುವುದರಿಂದ, ಶ್ರೇಯಾ ಘೋಷಾಲ್‌ ಕೂಡ ಫುಲ್ ‌ ಖುಷಿ ಆಗಿದ್ದಾರೆ. ಯು-ಟ್ಯೂಬ್‌ನಲ್ಲಿ ಟ್ರೆಂಡಿಂಗ್‌ ಆಗಿರುವ ಈ ಹಾಡಿನ ಬಗ್ಗೆ, ಸೋಶಿಯಲ್‌ ಮೀಡಿಯಾದಲ್ಲಿ ಶ್ರೇಯಾ ಸಂತಸ ವ್ಯಕ್ತಪಡಿಸಿದ್ದಾರೆ

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಶ್ರೇಯಾ ಘೋಷಾಲ್‌, “ಕಣ್ಣು ಹೊಡಿಯಾಕ… ಹಾಡು 20 ಮಿಲಿಯನ್‌ ವೀವ್ಸ್‌ ಪಡೆದು ಕೊಂಡಿದೆ. ಮೊದಲ ಬಾರಿಗೆ ನಾನು ಉತ್ತರ ಕರ್ನಾಟಕದ ಶೈಲಿಯಲ್ಲಿ ಈ ಹಾಡು ಹೇಳಿದ್ದೇನೆ. ಎಂತಹ ಸುಂದರವಾದ ಭಾಷೆ ಇದು. ಈ ಹಾಡಿನಿಂದ ನಾನು ತುಂಬ ಖುಷಿಪಟ್ಟಿದ್ದೇನೆ. ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯಾ, ಹಾಡು ಬರೆದ ಯೋಗರಾಜ್‌ ಭಟ್‌, ನಟ ದರ್ಶನ್‌, ನಟಿ ಆಶಾ ಭಟ್‌ ಅವರಿಗೆ ನನ್ನ ಧನ್ಯವಾದಗಳು’ ಎಂದಿದ್ದಾರೆ.

ಇನ್ನು ಶ್ರೇಯಾ ಘೋಷಾಲ್‌ ಟ್ವೀಟ್‌ಗೆ ಪ್ರತಿಯಾಗಿ ರೀ-ಟ್ವೀಟ್‌ ಮಾಡಿರುವ ನಿರ್ದೇಶಕ ಯೋಗರಾಜ್‌ ಭಟ್‌ ಕೂಡ “ಅಸಾಧಾರಣ ಕಂಠದ ಒಡತಿ, ಸರಳ ಸುಂದರಿ, ನಾಡಿನ ಅತ್ಯಂತ ನೆಚ್ಚಿನ ಗಾಯಕಿ ಶ್ರೇಯಾ ಘೋಷಾಲ್‌ ಅವರಿಗೆ ಈ ಹಾಡು ಹಾಡಿದ್ದಕ್ಕೆ ನಮನ ಮತ್ತು ಧನ್ಯವಾದ’ ಎಂದಿದ್ದಾರೆ. ಇನ್ನು ಶ್ರೇಯಾ ಘೋಷಾಲ್ ಅವರಿಗೆ ಧನ್ಯವಾದ ಹೇಳಿರುವ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ, “ನಿಮ್ಮ ಅದ್ಭುತ ಧ್ವನಿಯಿಂದ ಇಂತಹ ಮ್ಯಾಜಿಕ್‌ಗಳು ಸೃಷ್ಟಿಯಾಗುತ್ತವೆ’ ಎಂದಿದ್ದಾರೆ. “ರಾಬರ್ಟ್‌’ ನಾಯಕ ನಟಿ ಆಶಾ ಭಟ್‌ ಕೂಡ “ನಿಮ್ಮ ಧ್ವನಿ ಮತ್ತೂಮ್ಮೆ ಮ್ಯಾಜಿಕ್‌ ಮಾಡಿದೆ’ ಎಂದಿದ್ದಾರೆ. ಶ್ರೇಯಾ ಖುಷಿಯಿಂದ ಮಾಡಿದ ಟ್ವೀಟ್‌ಗೆ ಚಿತ್ರತಂಡ ಕೂಡ ಅಭಿನಂದನೆ ತಿಳಿಸಿದೆ.

ಒಟ್ಟಾರೆ ಶ್ರೇಯಾ ಉತ್ತರ ಕರ್ನಾಟಕ ಶೈಲಿಯ ಹಾಡು ಸೂಪರ್‌ ಹಿಟ್‌ ಆಗಿದ್ದು, ಮುಂದಿನ ದಿನಗಳಲ್ಲಿ ಶ್ರೇಯಾ ಧ್ವನಿಯಲ್ಲಿ ಇನ್ನಷ್ಟು ಇಂಥದ್ದೇ ಹಾಡುಗಳು ಮೂಡಿಬರಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ ಕೇಳುಗರು.

Ad

ಟಾಪ್ ನ್ಯೂಸ್

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cottonpete Gate: ಜು.11ಕ್ಕೆ ಕಾಟನ್‌ ಪೇಟೆ ಗೇಟ್‌

Cottonpete Gate: ಜು.11ಕ್ಕೆ ಕಾಟನ್‌ ಪೇಟೆ ಗೇಟ್‌

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Nidradevi Next Door: ಹಾಡಿಗಾಗಿ ಎದ್ದು ಕುಳಿತ ನಿದ್ರಾದೇವಿ ‌

Nidradevi Next Door: ಹಾಡಿಗಾಗಿ ಎದ್ದು ಕುಳಿತ ನಿದ್ರಾದೇವಿ ‌

12

EluMale Movie: ಏಳುಮಲೆಯಲ್ಲಿ ಬಾರ್ಡರ್‌ ಲವ್‌ಸ್ಟೋರಿ

15

New Kannada Movie: ಹಾಡಿನಲ್ಲಿ ʼತಿಮ್ಮಣ್ಣ  ಡಾಕ್ಟ್ರುʼ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.