‘ಕಾಂತಾರ’ ದ ದಂತಕಥೆ ಹೇಳಲು ಹೊರಟಿದ್ದಾರೆ ರಿಷಭ್ ಶೆಟ್ಟಿ
Team Udayavani, Aug 6, 2021, 12:32 PM IST
ದಟ್ಟ ಕಾನನ, ಅಗ್ನಿ ಜ್ವಾಲೆ, ಕಂಬಳದ ಕೋಣಗಳನ್ನು ಓಡಿಸುತ್ತಿರುವ ರಿಷಭ್ ಶೆಟ್ಟಿ, ಇವೆಲ್ಲವನ್ನೂ ಆವರಿಸಿ ನಿಂತಿರುವ ದೈವದ ಕಾಲುಗಳು, ಹರಡಿರುವ ದಾಖಲೆ ಪತ್ರಗಳು, ಬೆಂಕಿ ಕೆನ್ನಾಲಿಗೆ ಮಧ್ಯೆ ಓಡುತ್ತಿರುವ ಹಂದಿಗಳು… ಇವಿಷ್ಟು ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಲಿರುವ ಹೊಸ ಸಿನಿಮಾ ‘ಕಾಂತಾರ’ ದ ಮೊದಲ ಪೋಸ್ಟರ್ ನಲ್ಲಿ ಕಾಣಸಿಗುವ ಅಂಶಗಳು.
ನಿನ್ನೆ ಹೇಳಿದಂತೆ ಹೊಂಬಾಳೆ ಫಿಲಂಸ್ ಇಂದು ತಮ್ಮ 11ನೇ ಚಿತ್ರದ ಟೈಟಲ್ ಮತ್ತು ಪೋಸ್ಟರ್ ಬಿಡುಗಡೆ ಮಾಡಿದೆ. ‘ಕಾಂತಾರ’ ಚಿತ್ರಕ್ಕೆ ‘ಒಂದು ದಂತಕಥೆ’ ಎಂದು ಅಡಿಬರಹ ನೀಡಲಾಗಿದೆ.
ರಿಷಭ್ ಶೆಟ್ಟಿ ಚಿತ್ರದಲ್ಲಿ ಬರೆದು ನಿರ್ದೇಶನ ಮಾಡಲಿದ್ದು, ಅದರೊಂದಿಗೆ ಮುಖ್ಯಭೂಮಿಕೆಯಲ್ಲಿ ನಟಿಸಿಲಿದ್ದಾರೆ. ಹೊಂಬಾಳೆ ಫಿಲಂ ಬ್ಯಾನರ್ ನಡಿ ವಿಜಯ್ ಕಿರಗಂದೂರ್ ನಿರ್ಮಾಣ ಮಾಡಲಿದ್ದಾರೆ. ಆಗಸ್ಟ್ 27ರಿಂದ ಚಿತ್ರದ ಶೂಟಿಂಗ್ ಆರಂಭವಾಗಲಿದ್ದಾರೆ.
ಇದನ್ನೂ ಓದಿ:ಸಲಗನ ಕಲರ್ ಫುಲ್ ಹಾಡು: ಹಿಟ್ ಲಿಸ್ಟ್ ಗೆ ಪ್ರಮೋಶನಲ್ ಸಾಂಗ್
“ಬಹಳ ಸಮಯದ ನಂತರ ಹೊಸ ಕಿಚ್ಚಿನೊಂದಿಗೆ ಮತ್ತೆ ನಿರ್ದೇಶಕನಾಗಿ ಕಥೆ ಹೇಳಲು ಬರುತ್ತಿದ್ದೇನೆ. ಈ ಕಿಚ್ಚು ನಮ್ಮ ಸುತ್ತಲೂ ಸದ್ಯ ಕವಿದಿರುವ ಕರಾಳತೆಯನ್ನು ದಹಿಸುತ್ತದೆ ಎಂಬ ನಂಬಿಕೆಯೊಂದಿಗೆ” ಎಂದು ರಿಷಭ್ ಶೆಟ್ಟಿ ಬರೆದುಕೊಂಡಿದ್ದಾರೆ.
ರಿಷಬ್ ಶೆಟ್ಟಿ ನಿರ್ದೇಶನ, ನಟನೆಯಲ್ಲಿ ‘ಕಾಂತಾರ’ – ಒಂದು ದಂತಕಥೆ.
Presenting you #KANTARA directed by @shetty_rishab with him in the lead role! We are sure the poster will keep you waiting for the movie.#Hombale11@VKiragandur @hombalefilms @HombaleGroup @KantaraFilm pic.twitter.com/2khZb5P91D
— Hombale Films (@hombalefilms) August 6, 2021
ಕಾಂತಾರ ಎಂದರೆ ಕಾನನ ಎಂದರ್ಥ. ಪೋಸ್ಟರ್ ನಲ್ಲಿ ಕರಾವಳಿಯ ಜಾನಪದ ಮತ್ತು ಧಾರ್ಮಿಕ ಸಂಪ್ರದಾಯಗಳ ಕುರಿತು ಹೇಳಲಾಗಿದೆ. ವಿಭಿನ್ನ ಚಿತ್ರಗಳ ಮೂಲಕ ಇದುವರೆಗೆ ಗಮನ ಸೆಳೆದಿರುವ ರಿಷಭ್ ಶೆಟ್ಟಿ ಹೊಸ ಚಿತ್ರದ ಮೂಲಕ ಯಾವ ರೀತಿಯ ಕಮಾಲ್ ಮಾಡುತ್ತಾರೆ ಎನ್ನವುದನ್ನು ಕಾದುನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ