ಸ್ಟಾರ್‌ ಸುವರ್ಣದಲ್ಲಿ ರವಿವಾರ ‘ಕಾಂತಾರ’ ವರ್ಲ್ಡ್ ಪ್ರೀಮಿಯರ್‌


Team Udayavani, Jan 14, 2023, 12:39 PM IST

Kantara Movie Premier On Star Suvarna Channel

2022ರಲ್ಲಿ ಇಡೀ ದೇಶವೇ ಸ್ಯಾಂಡಲ್‌ವುಡ್‌ನ‌ತ್ತ ತಿರುಗಿನೋಡುವಂತೆ ಮಾಡಿ, ಇತಿಹಾಸ ಸೃಷ್ಟಿಸಿದ ಕನ್ನಡದ ಹೆಮ್ಮೆಯ ಬ್ಲಾಕ್‌ ಬಸ್ಟರ್‌ ಸಿನಿಮಾ “ಕಾಂತಾರ’ ಇದೀಗ ಕನ್ನಡದ “ಸ್ಟಾರ್‌ ಸುವರ್ಣ’ ವಾಹಿನಿಯಲ್ಲಿ ವರ್ಲ್ಡ್ ಪ್ರೀಮಿಯರ್‌ ಆಗಲಿದೆ. ಹೊಸ ವರ್ಷದ ಮೊದಲ ಹಬ್ಬ ಸಂಕ್ರಾಂತಿಯಂದು ಕನ್ನಡಿಗರು ಹೊತ್ತು ಕೊಂಡಾಡಿದ ಹೆಮ್ಮೆಯ ಕಥೆ “ಕಾಂತಾರ’ ಜನವರಿ 15 ರಂದು ಸಂಜೆ 6 ಗಂಟೆಗೆ “ಸ್ಟಾರ್‌ ಸುವರ್ಣ’ ವಾಹಿನಿಯಲ್ಲಿ ವರ್ಲ್ಡ್ ಪ್ರೀಮಿಯರ್‌ ಆಗಲಿದೆ.

ಕರ್ನಾಟಕದ ತುಳುನಾಡಿನ ಪ್ರಾಂತ್ಯದಲ್ಲಿ ನಡೆಯುವ ದೈವಾರಾಧನೆ, ಭೂತಕೋಲ, ಕಂಬಳ, ಕೋಳಿ ಅಂಕ, ಇತ್ಯಾದಿ ಸಂಭ್ರಮಗಳ ಹಿನ್ನೆಲೆಯಲ್ಲಿ ನಡೆಯುವ ಕಥೆಯನ್ನು ಹೊಂದಿರುವ “ಕಾಂತಾರ’ ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ರಿಷಬ್‌ ಶೆಟ್ಟಿ ಹಾಗೂ ಸಪ್ತಮಿ ಗೌಡ ಜೋಡಿಯಾಗಿ ಅಭಿನಯಿಸಿದ್ದು, ಉಳಿದಂತೆ ದೀಪಕ್‌ ರೈ, ಗುರು ಸನಿಲ್, ಪ್ರಕಾಶ್‌ ತುಮಿನಾಡು, ರಂಜನ್‌, ಕಿಶೋರ್‌, ಅಚ್ಯುತ ಕುಮಾರ್‌, ಪ್ರಮೋದ್‌ ಶೆಟ್ಟಿ, ಮಾನಸಿ ಸುಧೀರ್‌ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಈಗಾಗಲೇ ತನ್ನ ವಿಭಿನ್ನ ರೀತಿಯ ಕಾರ್ಯಕ್ರಮಗಳ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಗಮನ ಸೆಳೆದಿರುವ “ಸ್ಟಾರ್‌ ಸುವರ್ಣ’ ವಾಹಿನಿಯ “ಎಡೆಯೂರು ಶ್ರೀಸಿದ್ದಲಿಂಗೇಶ್ವರ’, “ಮನಸೆಲ್ಲಾ ನೀನೇ’, “ಕಥೆಯೊಂದು ಶುರುವಾಗಿದೆ’, “ಹೊಂಗನಸು’, “ಸುವರ್ಣ ಸೂಪರ್‌ ಸ್ಟಾರ್‌’ ಹೀಗೆ ಹಲವು ಕಾರ್ಯಕ್ರಮಗಳು ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ. ಈಗಾಗಲೇ ಪುನೀತ್‌ ರಾಜಕುಮಾರ್‌ ಅಭಿನಯದ ಕೊನೆಯ ಸಿನಿಮಾ “ಜೇಮ್ಸ್’, “ಲಕ್ಕಿಮ್ಯಾನ್‌’ ನಂತಹ ಸೂಪರ್‌ ಹಿಟ್‌ ಸಿನಿಮಾಗಳು “ಸ್ಟಾರ್‌ ಸುವರ್ಣ’ ವಾಹಿನಿಯಲ್ಲಿ ಪ್ರಸಾರವಾಗಿದ್ದು, ಸಾಲಿಗೆ ಇದೀಗ “ಕಾಂತಾರ’ ಎಂಬ ದಂತಕಥೆಯೊಂದು ಸೇರ್ಪಡೆಯಾಗಲಿದೆ. ಒಟ್ಟಾರೆ ಸಂಕ್ರಾಂತಿ ಹಬ್ಬದ ಮೂಡ್‌ನ‌ಲ್ಲಿರುವ ಕಿರುತೆರೆ ಪ್ರೇಕ್ಷಕರಿಗೆ ಈ ವಾರ “ಕಾಂತಾರ’ ಹಬ್ಬದ ವಿಶೇಷವಾಗಿ ವರ್ಲ್ಡ್ ಪ್ರೀಮಿಯರ್‌ ಆಗಲಿದೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.