ಗಾರ್ಮೇಂಟ್ಸ್ ಕೆಲಸಕ್ಕೆ ಸೇರಿಕೊಂಡರಂತೆ ಸಂಗೀತಾ ಭಟ್!


Team Udayavani, Nov 5, 2019, 8:00 AM IST

4-November-29

ಹೀಗೆಂದಾಕ್ಷಣ ಯಾರಿಗೇ ಆದರೂ ಸಖೇದಾಶ್ಚರ್ಯ ಕಾಡದಿರೋದಿಲ್ಲ. ಎರಡನೇ ಸಲ ಚಿತ್ರದಲ್ಲಿ ಮುದ್ದಾಗಿ ನಟಿಸುತ್ತಲೇ ಆ ನಂತರವೂ ಒಂದಷ್ಟು ಸಿನಿಮಾಗಳ ಮೂಲಕ ಖ್ಯಾತಿ ಪಡೆದಿರೋ ನಟಿ ಸಂಗೀತಾ ಭಟ್ ಗಾರ್ಮೆಂಟ್ಸ್ ನಲ್ಲಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆಂದರೆ ಅದಕ್ಕಿಂತಾ ಅಚ್ಚರಿಯ ಸುದ್ದಿ ಬೇರೊಂದಿರಲು ಸಾಧ್ಯವೇ? ಆದರೆ ಇದು ಸಂಭವಿಸಿರೋದು ಕ್ರಿಶ್ ನಿರ್ದೇಶನದ ಕಪಟ ನಾಟಕ ಪಾತ್ರಧಾರಿ ಸಿನಿಮಾದಲ್ಲಿ!

ಕಪಟ ನಾಟಕ ಪಾತ್ರಧಾರಿ ಚಿತ್ರದಲ್ಲಿ ಸಂಗೀತಾ ಭಟ್ ಬಾಲು ನಾಗೇಂದ್ರ ಅವರಿಗೆ ಜೋಡಿಯಾಗಿ ನಟಿಸಿರೋ ವಿಚಾರ ಗೊತ್ತಿರುವಂಥಾದ್ದೇ. ಇಲ್ಲಿ ಬಾಲು ನಾಗೇಂದ್ರ ಆಟೋ ಡ್ರೈವರ್ ಆಗಿ ನಟಿಸಿದ್ದಾರೆ. ಸಂಗೀತಾ ಭಟ್ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡೋ ಹುಡುಗಿಯ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಪಾತ್ರವನ್ನು ಆವಾಹಿಸಿಕೊಂಡು, ಅದನ್ನೇ ಜೀವಿಸಿದಂತೆ ಸಂಗೀತಾ ನಟಿಸಿರೋ ರೀತಿಗೆ ಚಿತ್ರತಂಡದಲ್ಲೊಂದು ಮೆಚ್ಚುಗೆಯಿದೆ. ಈ ಪಾತ್ರವೇ ಅವರ ವೃತ್ತಿ ಬದುಕಿಗೆ ಮತ್ತೊಂದು ದಿಕ್ಕು ತೋರುತ್ತದೆ ಎಂಬ ಭರವಸೆಯಂತೂ ಎಲ್ಲರಲ್ಲಿಯೂ ಇದೆ.

ಕ್ರಿಶ್ ಈ ಚಿತ್ರದ ಕಥೆ ಬರೆದು ತಯಾರಾಗುತ್ತಾ ತಾರಾಗಣದ ಆಯ್ಕೆ ಕಾರ್ಯದಲ್ಲಿದ್ದಾಗ ಸವಾಲಾಗಿದ್ದದ್ದು ನಾಯಕಿಯ ಪಾತ್ರ. ಅದಕ್ಕೆ ಯಾರು ಸೂಕ್ತ ಎಂಬ ಹುಡುಕಾಟದಲ್ಲಿದ್ದಾಗ ಎರಡನೇ ಸಲ ಚಿತ್ರದಲ್ಲಿ ನಟಿಸಿದ್ದ ಸಂಗೀತ ಭಟ್ ಅವರೇ ಸೂಕ್ತ ಎಂಬಂಥಾ ನಿರ್ಧಾರಕ್ಕೆ ನಿರ್ದೇಶಕರು ಬಂದಿದ್ದರು. ನಂತರ ಕಥೆ ಹೇಳಿದಾಗ ಈ ಪಾತ್ರವನ್ನು ಮೆಚ್ಚಿಕೊಳ್ಳುತ್ತಲೇ ಅವರು ಒಪ್ಪಿಗೆಯನ್ನೂ ಸೂಚಿಸಿದ್ದರಂತೆ. ಆ ನಂತರ ಆ ಪಾತ್ರವೇ ತಾನಾದಂತೆ ಅದಕ್ಕೆ ಜೀವ ತುಂಬಿದ್ದ ಸಂಗೀತಾ ಪ್ರತೀ ಹೆಜ್ಜೆಯಲ್ಲಿಯೂ ಚಿತ್ರತಂಡಕ್ಕೆ ಪ್ರೋತ್ಸಾಹ ನೀಡಿದ್ದರಂತೆ. ಈಗ ಅವರು ವಿದೇಶದಲ್ಲಿದ್ದರೂ ಕೂಡಾ ಅದೇ ಪ್ರೀತಿಯಿಂದ ಕಪಟ ನಾಟಕ ಪಾತ್ರಧಾರಿಗೆ ಸಾಥ್ ಕೊಡುತ್ತಿದ್ದಾರೆ. ಅಷ್ಟಕ್ಕೂ ಈ ಸಿನಿಮಾದಲ್ಲಿ ಸಂಗೀತಾ ಭಟ್ ಅವರ ಪಾತ್ರದ ನಿಜವಾದ ಚಹರೆ ಎಂಥಾದ್ದೆಂಬುದು ಇದೇ ನವೆಂಬರ್ 8ರಂದು ಸ್ಪಷ್ಟವಾಗಿ ಗೊತ್ತಾಗಲಿದೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.