ಉತ್ತರ ಕರ್ನಾಟಕದಲ್ಲಿ ಕಾರ್ಮುಗಿಲು; ಹೊಸ ಹುಡುಗನ ಕನಸು ನನಸು


Team Udayavani, Jul 21, 2018, 3:28 PM IST

karmugilu.jpg

ಉತ್ತರ ಕರ್ನಾಟಕದಿಂದ ಸಾಕಷ್ಟು ಮಂದಿ ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಇನ್ನು ಕೆಲವು ಸಿನಿಮಾಗಳು ಉತ್ತರ ಕರ್ನಾಟಕದಲ್ಲೇ ತಯಾರಾಗಿ ಅಲ್ಲೇ ಬಿಡುಗಡೆ ಕೂಡಾ ಆಗುತ್ತದೆ. ಈಗ ಉತ್ತರ ಕರ್ನಾಟಕದ ಮಂದಿಯೇ ಸೇರಿಕೊಂಡು ಮಾಡಿರುವ ಸಿನಿಮಾವೊಂದು ಜುಲೈ 27ರಂದು ತೆರೆಗೆ ಬರಲು ಸಿದ್ಧವಾಗಿದೆ. ಅದು “ಕಾರ್ಮುಗಿಲು’. ಹೌದು, “ಕಾರ್ಮುಗಿಲು’ ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ್ದು, ಜುಲೈ 27 ರಂದು ಬಿಡುಗಡೆಯಾಗುತ್ತಿದೆ. ಮಾಧವ ಶಿವಾ ಈ ಚಿತ್ರದ ನಿರ್ದೇಶಕರು. ನಿರ್ದೇಶನದ ಜೊತೆಗೆ ಚಿತ್ರದಲ್ಲಿ ನಾಯಕರಾಗಿಯೂ ನಟಿಸಿದ್ದಾರೆ. 

ಸಿನಿಮಾ ನಿರ್ದೇಶಕರಾಗಿ ಇವರಿಗೆ ಇದು ಚೊಚ್ಚಲ ಸಿನಿಮಾ. ಈ ಹಿಂದೆ ಕೇವಲ 68 ರೂಪಾಯಿಯಲ್ಲಿ ಐದು ನಿಮಿಷದ ಕಿರುಚಿತ್ರ ನಿರ್ಮಿಸಿ ಫ್ರೀ ಸ್ಟೈಲ್‌ ಅವಾರ್ಡ್‌ನಲ್ಲಿ 1300ಕ್ಕೂ ಹೆಚ್ಚು ಕಿರುಚಿತ್ರಗಳ ಪೈಪೋಟಿ ಮಧ್ಯೆ 2ನೇ ಸ್ಥಾನ ಪಡೆದ ಮಾಧವ ಶಿವಾ ಅವರು ಈಗ “ಕಾರ್ಮುಗಿಲು’ ಮಾಡಿದ್ದಾರೆ. ಮಾಧವ ಶಿವಾ ಅವರು ಸಿನಿಮಾವನ್ನು ಅದ್ಧೂರಿಯಾಗಿ ಮಾಡಿದ್ದು, ಯಾವುದೇ ವಿಚಾರದಲ್ಲೂ ರಾಜಿಯಾಗಿಲ್ಲವಂತೆ. ಚಿತ್ರದ ಬಗ್ಗೆ ಮಾತನಾಡುವ ಮಾಧವ ಶಿವಾ ಅವರು, “ಚಿತ್ರದಲ್ಲಿ ನಾಯಕ ನಟನಾಗಿ ಕನಸು ಹೊತ್ತು ಬೆಂಗಳೂರಿಗೆ ಹೋದ ನನಗೆ ನಿರ್ದೇಶಕರೊಬ್ಬರು ಮಾಡಿದ ಅವಮಾನವೇ ನಾನಿಂದು ನಿರ್ದೇಶಕ, ನಟನಾಗಲು ಸಾಧ್ಯವಾಗಿದೆ.

 ಈಗಾಗಲೇ ಚಿತ್ರದ ಹಾಡುಗಳು ಜನರ ಮನಸ್ಸು ಗೆದ್ದಿದ್ದು, ಈಗ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ಮಾಡಲಾಗಿದೆ. ಉತ್ತರ ಕರ್ನಾಟಕದ ಜನ ಕೈ ಬಿಡೋದಿಲ್ಲ ಎಂಬ ನಂಬಿಕೆ ಇದ್ದು, ಆದಷ್ಟು ಈ ಭಾಗದ ಚಿತ್ರಮಂದಿರಗಳಲ್ಲಿ ಜುಲೈ 27ಕ್ಕೆ ಬಿಡುಗಡೆ ಆಗಲಿದೆ. ನಾಯಕನ ಬದುಕಿನಲ್ಲಿ ಆಕಾಂಕ್ಷೆಗಳನ್ನು ಹೊತ್ತ ಮೋಡಗಳು ಕವಿದಿರುತ್ತವೆ. ಅವು ನನಸಾಗಿ ಹನಿ ಹನಿಯಾಗಿ ಜಾರಬೇಕಷ್ಟೆ. ಆದರೆ ಅವು ಮಳೆಯಾಗಿ ಧರೆಗೆ ಇಳಿಯುತ್ತಾ ಎಂಬ ಪ್ರಶ್ನೆಗಳಿಗೆ ಉತ್ತರವನ್ನು ಚಿತ್ರದಲ್ಲಿ ಕಾಣಬಹುದು. ಇದು ಕೇವಲ ಕಾಲ್ಪನಿಕ ಕಥೆಯಾದರೂ ಇಲ್ಲಿ ಮೂಡಿ ಬಂದಿರುವ ದೃಶ್ಯಗಳು ವಾಸ್ತವಕ್ಕೆ ಹತ್ತಿರವಾಗಿವೆ’ ಎನ್ನುತ್ತಾರೆ.

ಚಿತ್ರದ “ಕಾರ್ಮುಗಿಲೆ, ಕಾರ್ಮುಗಿಲೆ ಕಳಚಿತು ನಿನ್ನ ಬಾನಿನ ಬಂಧ. ಹನಿಯಾಗಿ ನೀ ಧರೆ ಸೋಕುವ ಮುನ್ನ, ಸೇರುತಿರುವೆಯಾ ನೀ ಕಡಲ ತೀರವ…’ ಎಂಬ ಗೀತೆಯನ್ನು ಮಾಧವ ಅವರೇ ಬರೆದಿದ್ದಾರೆ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು,  ಪ್ರಣತಿ ಎಸ್‌, ಜೋಯಲ್‌ ಸಕ್ರಿ ಹಾಗೂ ಅಮಿತ್‌ ಚೌಗಲೆ, ಸುಜಯಿಂದ್ರ ಸೇರಿದಂತೆ ಸ್ಥಳೀಯ ಗಾಯಕರಿಗೆ ಅವಕಾಶ ನೀಡಲಾಗಿದೆ. 

ನಾಯಕಿಯಾಗಿ ಚೈತ್ರಾ ಸುಂಕದ ಬಣ್ಣ ಹಚ್ಚಿದ್ದಾರೆ. ಕಥೆ, ಚಿತ್ರಕಥೆ, ಸಾಹಿತ್ಯವನ್ನು ಮಾಧವ ಅವರೇ ಬರೆದಿದ್ದು, ಸಂಭಾಷಣೆಗೆ ಜಯದೇವ ಪೂಜಾರ ಸಾಥ್‌ ನೀಡಿದ್ದಾರೆ. ಈ ಚಿತ್ರಕ್ಕಾಗಿ ಭೂಮಿ ಫಿಲ್ಮ್ ಕ್ರಿಯೇಶನ್ಸ್‌ ಎಂಬ ಹೋಮ್‌ ಬ್ಯಾನರ್‌ ಅಡಿಯಲ್ಲಿ ಮಾಧವ ಅವರ ಸಹೋದರ ಮಹಾದೇವ ಅಳಗವಾಡಿ ಬಂಡವಾಳ ಹೂಡಿದ್ದಾರೆ. ಜೋಯಲ್‌ ಸಕ್ರಿ ಸಂಗೀತ ಸಂಯೋಜನೆ, ಹರ್ಷವರ್ಧನ ಡಿ.ಎಂ. ಛಾಯಾಗ್ರಹಣದಲ್ಲಿ ಚಿತ್ರ ಮೂಡಿಬಂದಿದೆ.

– ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.