ಕನ್ನಡಿಗರಿಗೆ ಅವಮಾನ; ಕಟ್ಟಪ್ಪನ ವಿರುದ್ಧ ಆಕ್ರೋಶ,ಬಾಹುಬಲಿ 2ಗೆ ವಿಘ್ನ


Team Udayavani, Mar 24, 2017, 5:52 PM IST

Bahubali-2.jpg

ಬೆಂಗಳೂರು/ಚೆನ್ನೈ:ಕನ್ನಡಿಗರು, ಕನ್ನಡ ಹೋರಾಟಗಾರರ ವಿರುದ್ಧ ಕೆಂಡ ಕಾರುತ್ತಲೇ ಇರುವ ಬಾಹುಬಲಿಯ ಕಟ್ಟಪ್ಪ ಖ್ಯಾತಿಯ ಪಾತ್ರಧಾರಿ ತಮಿಳುನಟ ಸತ್ಯರಾಜ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣ ರಾಜ್ಯಾದ್ಯಂತ ಬಾಹುಬಲಿ 2 ಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದೆ. ನಟ ಸತ್ಯರಾಜ್ ಕ್ಷಮೆ ಕೇಳೋವರೆಗೂ ಬಾಹುಬಲಿ 2 ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕೊಡೋದಿಲ್ಲ ಎಂದು ಕರವೇಯ ಪ್ರವೀಣ್ ಶೆಟ್ಟಿ ತಿಳಿಸಿರುವುದಾಗಿ ವರದಿ ಹೇಳಿದೆ.

ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ 2 ಸಿನಿಮಾ ಏಪ್ರಿಲ್ 28ರಂದು ವಿಶ್ವಾದ್ಯಂತ ತೆರೆ ಕಾಣಲು ಸಿದ್ಧವಾಗಿದ್ದು, ಮತ್ತೊಂದೆಡೆ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವ ನಟ ಸತ್ಯರಾಜ್ ನಟನೆಯ ಬಾಹುಬಲಿ 2 ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಲ್ಲ ಎಂದು ಕರವೇ ಎಚ್ಚರಿಕೆ ನೀಡಿದೆ.

ತಮಿಳುನಾಡಿನಲ್ಲಿ ಕನ್ನಡ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುವ ಸತ್ಯರಾಜ್, ಉದ್ರೇಕಕಾರಿ ಭಾಷಣ ಮಾಡುವ ಮೂಲಕ ಸತ್ಯರಾಜ್ ತಮಿಳರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟಿದ್ದಾರೆ. ಕಾವೇರಿ ವಿವಾದ ವಿಚಾರದಲ್ಲಿ ಕನ್ನಡಿಗರ ವಿರುದ್ಧ ಸತ್ಯರಾಜ್ ಕೆಂಡ ಕಾರಿ ಈ ಹಿಂದೆ ಮಾಡಿರುವ ಭಾಷಣದ ತುಣುಕು ಇಲ್ಲಿದೆ.

‘ಕರ್ನಾಟಕದಲ್ಲಿ ತಮಿಳರನ್ನು ಹೊಡೆದು ಸಾಯಿಸ್ತಾ ಇದ್ದಾರೆ. ಅದನ್ನು ವಿರೋಧಿಸಲು ಬಂದಿದ್ದೇನೆ. ಹೆಚ್ಚು ಸಂಭಾವನೆ ಪಡೆದು ನಟಿಸೋ ಹೀರೋ ಹೆಸರು ಹೇಳಿ ಜೈ ಅನ್ನಿಸಿಕೊಳ್ಳೋದು ಜೀವ ತೆಗೆದರೂ ನನ್ನಿಂದ ಸಾಧ್ಯವಿಲ್ಲ. ನಾನು ನನಗನ್ನಿಸಿದ್ದನ್ನು ಮಾತಾಡ್ತೀನಿ. ಇದು ಜಗತ್ತಿನಲ್ಲಿರುವ ಹತ್ತು ಕೋಟಿ ತಮಿಳರಿಗೂ ಹೋಗಿ ಸೇರಬೇಕು. ಇದನ್ನು ಇಷ್ಟ ಇದ್ದರೆ ಕೇಳಿಸಿಕೊಳ್ಳಿ ಇಲ್ಲದಿದ್ದರೆ ಎದ್ದುಹೋಗಿ. ತಮಿಳರನ್ನು ಕನ್ನಡದವರು ಮನುಷ್ಯರೆಂದು ಭಾವಿಸಿಲ್ಲ. ಅವರು ನಮ್ಮನ್ನು ಒಂದು ಮರವೆನ್ನುವ ರೀತಿಯಲ್ಲಿ ಭಾವಿಸಿದ್ದಾರೆ. ಒಂದು ಮರ ಸಿಕ್ಕರೆ ನಾಯಿಗಳು ಏನು ಮಾಡುತ್ತವೆ? ಕಾಲೆತ್ತಿಕೊಂಡು ಉಚ್ಚೆ ಹುಯ್ಯುತ್ತವೆ. 

ಗಾಂಧೀಜಿ ಒಮ್ಮೆ ಹೇಳಿದ್ದರು; ಒಬ್ಬರ ಕಣ್ಣನ್ನು ಒಬ್ಬರು ಕೀಳುತ್ತಾ ಇದ್ದರೆ ಜಗತ್ತಿನಲ್ಲಿರೋ ಅಷ್ಟೂ ಜನ ಕುರುಡರಾಗುತ್ತಾರೆ. ಈ ಕಾರಣದಿಂದ ಯಾರೂ ಯಾವುದೇ ಸಂದರ್ಭದಲ್ಲೂ ಹೊಡೆದಾಟಕ್ಕಿಳಿಯಬೇಡಿ ಅಂತ. ನಾವು ಗಾಂಧಿ ಮಾತನ್ನೇ ನಂಬಿಕೊಂಡು ಕೂತಿದ್ದಕ್ಕೆ ಏನಾಯ್ತು? ಮಹಾರಾಷ್ಟ್ರದಲ್ಲಿ ಭಾಳಾ ಠಾಕ್ರೆ ಅನ್ನೋನು ಮೊದಲ ಬಾರಿಗೆ ತಮಿಳಿಗರ ಕಣ್ಣು ಕೀಳಲು ಆರಂಭಿಸಿದ. ನಂತರ ಮಲೇಶಿಯಾದಲ್ಲಿ, ಆಮೇಲೆ ಶ್ರೀಲಂಕಾದಲ್ಲಿ ತಮಿಳಿಗರ ಕಣ್ಣು ಕಿತ್ತರು. ಈಗ ಕನ್ನಡಿಗರು ತಮಿಳಿಗರ ಕಣ್ಣು ಕೀಳಲು ಶುರು ಮಾಡಿದ್ದಾರೆ. ಹೀಗೇ ಆದರೆ ಜಗತ್ತಿನ ಜನಸಂಖ್ಯೆಯಲ್ಲಿ ಹತ್ತು ಕೋಟಿ ತಮಿಳರು ಮಾತ್ರ ಕುರುಡರಾಗಿರುತ್ತಾರೆ. ಮಿಕ್ಕವರು ಮಾತ್ರ ಸುತ್ತ ನಿಂತು ನಮ್ಮ ಅಂಧತ್ವವನ್ನು ನೋಡುತ್ತಿರುತ್ತಾರೆ. ಮೊದಲೇ ತಮಿಳರು ಬುದ್ಧಿ ಮತ್ತು ಚಿಂತನೆಯಲ್ಲಿ ಕುರುಡರಾಗಿ ತಿರುಗುವಂತಾಗಿದೆ.” 

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.