ಥ್ರಿಲ್‌ ನೀಡೋ ಮಹಲ್‌! : ಈ ವಾರ ಕಸ್ತೂರಿ ಮಹಲ್‌ ತೆರೆಗೆ


Team Udayavani, May 9, 2022, 12:44 PM IST

ಥ್ರಿಲ್‌ ನೀಡೋ ಮಹಲ್‌! : ಈ ವಾರ ಕಸ್ತೂರಿ ಮಹಲ್‌ ತೆರೆಗೆ

ಶಾನ್ವಿ ಶ್ರೀವಾಸ್ತವ್‌ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ಕಸ್ತೂರಿ ಮಹಲ್‌’ ಈ ವಾರ (ಮೇ. 13) ತೆರೆಗೆ ಬರುತ್ತಿದೆ.

ಈಗಾಗಲೇ “ಕಸ್ತೂರಿ ಮಹಲ್‌’ ಸಿನಿಮಾದ ಪೋಸ್ಟರ್‌, ಟೀಸರ್‌, ಟ್ರೇಲರ್‌ ಮತ್ತು ಶಾನ್ವಿ ಲುಕ್‌ ಎಲ್ಲವೂ ಸಿನಿ ಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದ್ದು, ಸಿನಿಮಾ ಕೂಡ ಥಿಯೇಟರ್‌ನಲ್ಲಿ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂಬ ವಿಶ್ವಾಸದಲ್ಲಿದೆ ಚಿತ್ರತಂಡ.

ಇನ್ನು ಸುಮಾರು ಮೂರುವರೆ ವರ್ಷಗಳ ಬಳಿಕ ಶಾನ್ವಿ ಶ್ರೀವಾಸ್ತವ್‌ ಅಭಿನಯದ ಸಿನಿಮಾ ಬಿಡುಗಡೆಯಾಗುತ್ತಿರುವುದರಿಂದ, ಶಾನ್ವಿಗೆ “ಕಸ್ತೂರಿ ಮಹಲ್‌’ ಮೇಲೆ ಸಹಜವಾಗಿಯೇ ಸಾಕಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ: ವಿಕ್ರಾಂತ್‌ ರೋಣ ವಿದೇಶಿ ಹಕ್ಕಿಗೆ 10 ಕೋಟಿ!

“ಈಗಾಗಲೇ “ಕಸ್ತೂರಿ ಮಹಲ್‌’ ಟೀಸರ್‌, ಟ್ರೇಲರ್‌ ನೋಡಿದವರಿಗೆ ಇದೊಂದು ಹಾರರ್‌ ಸಿನಿಮಾ ಎಂಬ ಸುಳಿವು ಗೊತ್ತಾಗಿರುತ್ತದೆ. ಖಂಡಿತವಾಗಿಯೂ ಇದು ಹಾರರ್‌ ಸಿನಿಮಾನೇ. ಆದ್ರೆ ಕೇವಲ ಆಡಿಯನ್ಸ್‌ ಎದೆ ನಡುಗಿಸುವ ಹಾರರ್‌ ಮಾತ್ರ ಈ ಸಿನಿಮಾದಲ್ಲಿ ಇಲ್ಲ. ಅದರ ಜೊತೆಗೆ ಸಸ್ಪೆನ್ಸ್‌, ಥ್ರಿಲ್ಲರ್‌, ಎಮೋಶನ್ಸ್‌ ಎಲ್ಲವನ್ನೂ ಸ್ಕ್ರೀನ್‌ ಮೇಲೆ ಕಾಣಬಹುದು. ಥಿಯೇಟರ್‌ನಲ್ಲಿ “ಕಸ್ತೂರಿ ಮಹಲ್‌’ ಒಳಗೆ ಕುಳಿತರೆ ಥಿಲ್ಲಿಂಗ್‌ ಎಕ್ಸ್‌ಪೀರಿಯನ್ಸ್‌ ಗ್ಯಾರೆಂಟಿ’ ಅನ್ನೋದು ಶಾನ್ವಿ ಮಾತು.

ಇನ್ನು “ಶ್ರೀ ಭವಾನಿ ಆರ್ಟ್ಸ್’ ಬ್ಯಾನರ್‌ನಲ್ಲಿ ರವೀಶ್‌ ಆರ್‌. ಸಿ ನಿರ್ಮಿಸಿರುವ ಈ “ಕಸ್ತೂರಿ ಮಹಲ್‌’ ಚಿತ್ರಕ್ಕೆ ಹಿರಿಯ ನಿರ್ದೇಶಕ ದಿನೇಶ್‌ ಬಾಬು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. “ಸಸ್ಪೆನ್ಸ್‌ – ಥ್ರಿಲ್ಲರ್‌ ಸಿನಿಮಾಗಳು ಅಂದ ಕೂಡಲೇ ಪ್ರೇಕ್ಷಕರು ಬೇರೆ ಥರದ ಒಂದಷ್ಟು ನಿರೀಕ್ಷೆ ಇಟ್ಟುಕೊಂಡು ಥಿಯೇಟರ್‌ಗೆ ಬರುತ್ತಾರೆ. ಆದರೆ, ಆ ನಿರೀಕ್ಷೆಗೂ ಹೊಸದಾಗಿ, ಬೇರೆ ಥರದ ಅನುಭವ ಕೊಡುವಂಥೆ “ಕಸ್ತೂರಿ ಮಹಲ್‌’ ಸಿನಿಮಾವಿದೆ. ಕನ್ನಡದ ಪ್ರೇಕ್ಷಕರಿಗೆ ಇದೊಂದು ಹೊಸಥರದ ಅನುಭವ ಕೊಡುವಂಥ ಸಿನಿಮಾ ಆಗಲಿದೆ ಎಂಬ ಭರವಸೆ ನಮಗಿದೆ’ ಎನ್ನುವುದು ನಿರ್ದೇಶಕ ಬಾಬು ಅವರ ಮಾತು.

ಒಟ್ಟಾರೆ ಬಿಡುಗಡೆಗೂ ಮೊದಲೇ ಒಂದಷ್ಟು ಸೌಂಡ್‌ ಮಾಡುತ್ತಿರುವ “ಕಸ್ತೂರಿ ಮಹಲ್‌’ ಥಿಯೇಟರ್‌ನಲ್ಲಿ ಹೇಗಿರಲಿದೆ ಅನ್ನೋದು ಈ ವಾರ ಗೊತ್ತಾಗಲಿದೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.