Kannada Cinema; ಮೂಲ ನಂಬಿಕೆ- ಮೂಢನಂಬಿಕೆಯ ಸುತ್ತ ‘ಕೌಮುದಿ’
Team Udayavani, May 23, 2024, 5:19 PM IST
ಕೌಮುದಿ ಎಂಬ ಚಿತ್ರವೊಂದು ಇತ್ತೀಚೆಗೆ ಸೆಟ್ಟೇರಿದೆ. ಹಾರೋಹಳ್ಳಿಯ ದಿಂಬದಹಳ್ಳಿಯಲ್ಲಿರುವ ಬಿಸಲಮ್ಮ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ಆಚರಿಸಿಕೊಂಡಿದೆ. ಯಶೋದ ಪ್ರಕಾಶ್ ಕೊಟ್ಟುಕತ್ತೀರ ಬಂಡವಾಳ ಹೂಡುವುದರ ಜತೆಗೆ ನಿರ್ದೇಶನ ಮಾಡುತ್ತಿರುವ ಮೂರನೇ ಸಿನಿಮಾ ಇದಾಗಿದೆ. ಶಿಕ್ಷಣ ಹಾಗೂ ವೈಜ್ಞಾನಿಕ ಕೊರತೆಯಿಂದಾಗಿ ಮೂಲನಂಬಿಕೆ ಹಾಗೂ ಮೂಡನಂಬಿಕೆಯ ವ್ಯತ್ಯಾಸ ತಿಳಿಯದೆ ಬದುಕಿಗೆ ಅಪಾಯ ತಂದೊಡ್ಡುವ ಸಂಪ್ರದಾಯ, ಆಚರಣೆಗಳ ಸತ್ಯ-ವಾಸ್ತವಗಳ ಸುತ್ತ ಸಿನಿಮಾವು ಬೆಳಕು ಚೆಲ್ಲಲಿದೆ.
ಗತಕಾಲದಿಂದ ಇಂದಿನವರೆಗೂ ಗ್ರಾಮೀಣ ಭಾಗದಲ್ಲಿ ಇಂತಹ ಪದ್ಧತಿಗಳನ್ನು ಅನುಸರಿಸುತ್ತಿದ್ದಾರೆ. ಕಥಾನಾಯಕಿ ಇದರ ವಿರುದ್ದ ಧ್ವನಿ ಎತ್ತಿ, ಯಾವ ರೀತಿ ಹೋರಾಟ ಮಾಡುತ್ತಾಳೆ ಎಂಬುದನ್ನು ಅರ್ಥಪೂರ್ಣ ಸನ್ನಿವೇಶಗಳ ಮೂಲಕ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ.
“ಪಿಂಕಿ ಎಲ್ಲಿ’ ಮತ್ತು “ಕೋಳಿಎಸ್ರು’ ಚಿತ್ರಗಳಲ್ಲಿ ನಟಿಸಿರುವ ಅಕ್ಷತಾ ಪಾಂಡವಪುರ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರೊಂದಿಗೆ ಕುಮಾರಿ ದೀಪಿಕಾ, ಪ್ರತೀಕ, ಅಂಕಿತಾ ಮೂರ್ತಿ, ನೀನಾಸಂ ನಟರಾಜ್, ಕಾವೇರಿ ಶ್ರೀಧರ್, ಪಿ.ಬಿ.ರಾಜುನಾಯಕ, ರೋಹಿಣಿ, ತಾರರಘು, ಬಂಗಾರಶೆಟ್ಟಿ ಮುಂತಾದವರು ಅಭಿನಯಿಸುತ್ತಿದ್ದಾಾರೆ.
ಚಿತ್ರಕ್ಕೆ ಶ್ರೀಸುರೇಶ್ ಸಂಗೀತ, ನಾಗೇಶ್.ಎನ್ ಸಂಭಾಷಣೆ, ಸಂಕಲನ, ನಾಗೇಶ್.ಎನ್, ಹರೀಶ್. ಎಸ್ ಚಿತ್ರಕಥೆ ಇದೆ. ದಿಂಬಹಳ್ಳಿ, ಬಾಚಹಳ್ಳಿ ದೊಡ್ಡಿ ಹಾಗೂ ಕನಕಪುರ ಸುತ್ತಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣವನ್ನು ಸಿಂಕ್ ಸೌಂಡ್ನಲ್ಲಿ ಮುಗಿಸಲು ತಂಡವು ಯೋಜನೆ ರೂಪಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renuka swamy Case: ದರ್ಶನ್, ಪವಿತ್ರಾ ಗೌಡ ಮತ್ತೆ ಪೊಲೀಸ್ ಕಸ್ಟಡಿಗೆ
Chef Chidambara Review; ಕಿಲಾಡಿ ಜೋಡಿಯ ಥ್ರಿಲ್ಲಿಂಗ್ ಸ್ಟೋರಿ
ಲಂಡನ್ ಶೂಟ್,ಡಾನ್ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್ʼ ಲೇಟೆಸ್ಟ್ ಅಪ್ಡೇಟ್ ಔಟ್
Renuka Swamy case: ಕನ್ನಡ ಚಿತ್ರರಂಗಕ್ಕೆ ದರ್ಶನ್ ದೇವಮಾನವ ಇದ್ದಂತೆ: ನಟಿ ಸಂಜನಾ
Sandalwood: ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್
MUST WATCH
ಹೊಸ ಸೇರ್ಪಡೆ
David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ
Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು
ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ
Udupi: ಎಸೆಸೆಲ್ಸಿ ಫಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ
Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.