Kannada Cinema; ‘ತಾಜಾ ತಾಜಾ ಸುದ್ದಿ’ಗೆ ಮೆಚ್ಚುಗೆ: ‘ಕೆಂಡ’ ಚಿತ್ರದ ಹಾಡಿನ ಸಂಭ್ರಮ
Team Udayavani, Mar 30, 2024, 3:03 PM IST
“ಕೆಂಡ’ ಚಿತ್ರದ “ತಾಜಾ ತಾಜಾ ಸುದ್ದಿ’ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಜಯಂತ್ ಕಾಯ್ಕಿಣಿ ಪುತ್ರ ರಿತ್ವಿಕ್ ಈ ಹಾಡಿಗೆ ಸಂಗೀತ ನೀಡಿದ್ದಾರೆ. ರೂಪಾ ರಾವ್ ಕೆಂಡ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದಾರೆ.
ಸಹದೇವ ಕೆಲವಡಿ ಛಾಯಾಗ್ರಹಣ, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲಿಯೂ ಭಾಗಿಯಾಗಿದ್ದಾರೆ. ಬೆಂಗಳೂರಿನಂಥ ಮಹಾನಗರಿಯಲ್ಲಿ ನಿರಾಸೆಗೊಳಗಾದ ಯುವ ಸಮೂಹ. ರಾಜಕೀಯ, ಅಪರಾಧ ಸೇರಿದಂತೆ ಒಂದಷ್ಟು ಸಾಮಾಜಿಕ ಅಂಶಗಳು ಚಿತ್ರದಲ್ಲಿದೆ.
ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಥಾನಾಯಕ ಹೇಗೆ ಈ ವ್ಯವಸ್ಥೆಯ ಚಕ್ರವ್ಯೂಹಕ್ಕೆ ಸಿಲುಕುತ್ತಾನೆ. ಆತನನ್ನು ಪಟ್ಟಭದ್ರಹಿತಾಸಕ್ತಿಗಳು ಹೇಗೆಲ್ಲಾ ಬಳಸಿಕೊಳ್ಳುತ್ತಾರೆ. ಆ ಕ್ಷಣದೊಂದು ನಿರ್ಧಾರ ಆತನ ಬದುಕನ್ನು ಯಾವ ದಿಕ್ಕಿನತ್ತ ಮುನ್ನಡೆಸುತ್ತೆ ಎಂಬಂತಹ ಸನ್ನಿವೇಶಗಳನ್ನು ತೋರಿಸಲಾಗುತ್ತಿದೆ. ಒಟ್ಟಾರೆಯಾಗಿ ಈ ದಿನಮಾನದ ಮಟ್ಟಿಗೆ ವಿಭಿನ್ನ ಚಿತ್ರವಾಗಲಿದೆ ಎಂಬುದು ತಂಡದ ಮಾತು.
ಬಿ. ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ರವೀಂದ್ರನ್, ಗೋಪಾಲ ದೇಶಪಾಂಡೆ ಹೀಗೆ ಬಹುತೇಕ ರಂಗಭೂಮಿ ಪ್ರತಿಭೆಗಳೇ “ಕೆಂಡ’ ಸಿನಿಮಾದ ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ “ಎಲಿಫೆಂಟ್ ವಿಸ್ಪರ್ಸ್’ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ “ಕೆಂಡ’ ಚಿತ್ರಕ್ಕೆ ಶಬ್ಧ ಸಂಯೋಜನೆ ಮಾಡಿದ್ದಾರೆ. ಬೆಂಗಳೂರು ಸುತ್ತಮುತ್ತ, ಕೋಲಾರದಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ