ಕೆಜಿಎಫ್ ಅರೆಹುಚ್ಚ ಪಾತ್ರಧಾರಿ ಲಕ್ಷ್ಮೀಪತಿ ಕೊನೆಯುಸಿರು!
Team Udayavani, Dec 30, 2018, 5:25 AM IST
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ದಾಖಲಿಸಿದ ಕೆಜಿಎಫ್ ಚಿತ್ರದಲ್ಲಿ ವಿಭನ್ನ ಪಾತ್ರವೊಂದರಲ್ಲಿ ಕಾಣಿಸಕೊಂಡು ಗಮನ ಸೆಳೆದಿದ್ದ ನಟ ಲಕ್ಷ್ಮೀ ಪತಿ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.
ಕೆಜಿಎಫ್ ಭಾರೀ ಯಶಸ್ಸು ಸಾಗಿ ಮುನ್ನುಗ್ಗುತ್ತಿರುವ ವೇಳೆಯಲ್ಲೇ ಪಾತ್ರಧಾರಿಯೊಬ್ಬರ ಅಕಾಲಿಕ ಮರಣದಿಂದ ಚಿತ್ರತಂಡ ತೀವ್ರ ನೋವಿಗೆ ಸಿಲುಕಿದೆ.
ಕೆಜಿಎಫ್ ಚಿತ್ರದ ಛಾಯಾಗ್ರಾಹಕ ಭುವನ್ ಗೌಡ ಅವರು ಲಕ್ಷ್ಮೀ ಪತಿ ಅವರು ನಿಧನ ಹೊಂದಿರುವ ವಿಚಾರವನ್ನು ಸಾಮಾಜಿಕ ತಾಣಗಳಲ್ಲಿ ಬಹಿರಂಗ ಪಡಿಸಿದ್ದಾರೆ.
ಚಿತ್ರದಲ್ಲಿ ನರಾಚಿ ಕಾರ್ಖಾನೆಯಲ್ಲಿ ಕಾರ್ಮಿಕರ ಎದುರು ನೋವನ್ನು ಹೇಳಿಕೊಳ್ಳುವ ಅರೆಹುಚ್ಚನ ಪಾತ್ರದಲ್ಲಿ ಲಕ್ಷ್ಮೀ ಪತಿ ನಟಿಸಿ ಚಿತ್ರಪ್ರೇಮಿಗಳ ಮನಸ್ಸಿನಲ್ಲಿ ಉಳಿದಿದ್ದರು.
ಸುಡುವ ಬೆಂಕಿಯಲ್ಲಿ ಸುರಿವ ಮಳೆಯಂತೆ, ಮೃತ್ಯುವಿನ ಮನೆಯಲ್ಲಿ ಮೃತ್ಯುಂಜಯನಂತೆ, ದೌಲತ್ತಿನೆದುರು ದಂಗೆಯ ರೂಪದಲ್ಲಿ, ದಶಕಂಠನೆದುರು ಧನುಜಾರಿ ರೀತಿಯಲ್ಲಿ, ಉರಿವ ಜಮದಗ್ನಿಯ ಬೆದರಿಸಿ, ಸರ್ವವೂ ತಾನೆಂದು ಪರಮಾತ್ಮನನ್ನು ಪ್ರಶ್ನಿಸಿ, ಸಿಡಿಲಂತೆ ಸಿಡಿದ ಧೀರನೊಬ್ಬನ ಕಥೆ ಎನ್ನುವ ಡೈಲಾಗ್ ಹೇಳಿದ್ದ ಲಕ್ಷ್ಮೀ ಪತಿ ಇನ್ನು ನೆನಪು ಮಾತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ