ಕೆಜಿಎಫ್ ಡಿಸೆಂಬರ್‌ 21ಕ್ಕೆ ಬಿಡುಗಡೆ


Team Udayavani, Oct 11, 2018, 3:46 PM IST

2445.jpg

ಯಶ್‌ ಅಭಿನಯದ “ಕೆಜಿಎಫ್’ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಚಿತ್ರದ ಬಿಡುಗಡೆಯಷ್ಟೇ ಅಲ್ಲ, ಆ ಚಿತ್ರದ ಟ್ರೇಲರ್‌ ಬಿಡುಗಡೆ ಕೂಡ ಮುಂದೆ ಸಾಗಿದೆ. ಹೌದು, ಈ ಹಿಂದೆ ನವೆಂಬರ್‌ 16 ರಂದು “ಕೆಜಿಎಫ್’ ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿತ್ತು. ಈಗ “ಕೆಜಿಎಫ್’ ಡಿಸೆಂಬರ್‌ 21 ಕ್ಕೆ ಬಿಡುಗಡೆಯಾಗುವುದು ಪಕ್ಕಾ ಆಗಿದೆ. ಇದಕ್ಕೆ ಕಾರಣ, ಹಿಂದಿ ವಿತರಕರು ಮಾಡಿದ ಮನವಿ. ಅಷ್ಟಕ್ಕೂ “ಕೆಜಿಎಫ್’ ಮುಂದಕ್ಕೆ ಹೋಗಲು ಕಾರಣವೇನು? ಈ ಪ್ರಶ್ನೆಗೆ ಉತ್ತರವಿದು.

“ಕೆಜಿಎಫ್’ ಐದು ಭಾಷೆಯಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರ. ಹಿಂದಿಯಲ್ಲಿ ಈ ಚಿತ್ರವನ್ನು ಅಲ್ಲಿನ ಹಿರಿಯ ವಿತರಕ ಅನಿಲ್‌ ದಾದಾನಿ ಅವರು ಬಿಡುಗಡೆ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರ ವೀಕ್ಷಿಸಿದ ಅವರು, “ಒಳ್ಳೆಯ ಚಿತ್ರಕ್ಕೆ ಪ್ರಚಾರ ಅಗತ್ಯ. ಹಾಗಾಗಿ, ಪ್ರಚಾರಕ್ಕೆ ಸಮಯವಿಲ್ಲದಂತಾಗುತ್ತದೆ. ಈ ಚಿತ್ರವನ್ನು ಚಿಕ್ಕದ್ದಾಗಿ ಬಿಡುಗಡೆ ಮಾಡುವುದು ಸರಿಯಲ್ಲ. ಭಾರತೀಯ ಮಟ್ಟದಲ್ಲಿ ಚಿತ್ರವನ್ನು ಪ್ರಚಾರ ಮಾಡಿ ಬಿಡುಗಡೆ ಮಾಡಬೇಕು. ಅದಕ್ಕೆ ಇನ್ನೂ ಸಮಯ ಬೇಕಿದೆ. ಹಾಗಾಗಿ ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕಿ’ ಎಂಬ ಮನವಿ ಇಟ್ಟಿದ್ದಾರೆ. ಅವರ ಮನವಿಗೆ ಸ್ಪಂದಿಸಿದ ನಿರ್ಮಾಪಕ ವಿಜಯ್‌ಕಿರಗಂದೂರು, ಕನ್ನಡದ ಚಿತ್ರಕ್ಕೆ ದೊಡ್ಡ ಮಟ್ಟದ ಪ್ರಚಾರ ಸಿಗುತ್ತಿದ್ದು, ಅದರಲ್ಲೂ ಹಿಂದಿಯಲ್ಲಿ ದೊಡ್ಡ ವಿತರಕರು ವಿತರಣೆ ಮಾಡುವಾಗ, ನಾವೇಕೆ ಒಂದು ತಿಂಗಳ ಕಾಲ ಮುಂದೆ ಹೋಗಬಾರದು ಅಂದುಕೊಂಡು, ಡಿಸೆಂಬರ್‌ 21ಕ್ಕೆ “ಕೆಜಿಎಫ್’ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಇದರೊಂದಿಗೆ ಚಿತ್ರದ ಟ್ರೇಲರ್‌ ಬಿಡುಗಡೆಯೂ ಮುಂದಕ್ಕೆ ಹೋದಂತಾಗಿದೆ.

“ಆರಂಭದಲ್ಲಿ ಚಿತ್ರ ಮಾಡುವಾಗ, ಇದು ಇಷ್ಟೊಂದು ದೊಡ್ಡ ಚಿತ್ರ ಆಗುತ್ತೆ ಅಂದುಕೊಂಡಿರಲಿಲ್ಲ. ಮಾಡುತ್ತಲೇ ದೊಡ್ಡ ಮಟ್ಟಕ್ಕೆ ಹೋಗಿದೆ. ಸಾಮಾನ್ಯವಾಗಿ ನನ್ನ ಚಿತ್ರಗಳು ಡೇಟ್‌ ಅನೌನ್ಸ್‌ ಮಾಡಿದಾಗ, ಮುಂದಕ್ಕೆ ಹೋದ ಉದಾಹರಣೆ ಇಲ್ಲ. ಈಗ “ಕೆಜಿಎಫ್’ ಹೋಗಿದೆ. ಐದು ಭಾಷೆಯಲ್ಲೂ ಬಿಡುಗಡೆಯಾಗುತ್ತಿರುವುದರಿಂದ ಪ್ರಚಾರಕ್ಕೆ ಸಮಯ ಬೇಕೆಂಬ ಮನವಿಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ಯಾನ್‌ ಇಂಡಿಯಾ ಕನಸು ಈ ಮೂಲಕ ಈಡೇರುತ್ತಿದೆ. ಇಷ್ಟು ದಿನ ಕಾದ ಅಭಿಮಾನಿಗಳು ಇನ್ನು ಒಂದು ತಿಂಗಳು ಹೆಚ್ಚು ಕಾಯಬೇಕಷ್ಟೇ. ಇದೊಂದು ಯೂನಿರ್ವಸಲ್‌ ಸಬೆjಕ್ಟ್ ಆಗಿರುವುದರಿಂದ ಎಲ್ಲರಿಗೂ ಸಲ್ಲಬೇಕು. ಎಲ್ಲಾ ಭಾಷೆಗೂ ಇದು ಹೇಗೆ ಕನೆಕ್ಟ್ ಆಗುತ್ತೆ ಎಂಬ ಪ್ರಶ್ನೆ ಎದುರಾಗಬಹುದು. ಇದನ್ನು ಮ್ಯೂಟ್‌ ಮಾಡಿ ನೋಡಿದರೆ, ಕಥೆ ಎಲ್ಲರಿಗೂ ಕನೆಕ್ಟ್ ಆಗುತ್ತೆ’ ಎನ್ನುವ ಯಶ್‌, ಇಲ್ಲಿ ಬಹುತೇಕ ಹೊಸ ಪ್ರತಿಭಾವಂತರಿದ್ದಾರೆ. ಅವರ ಮಧ್ಯೆ ನಾನೇ ಕಳೆದುಹೋಗಬಹುದೇನೋ? ಇದು ಎಪ್ಪತ್ತರ ದಶಕದ ಕಥೆಯಾದ್ದರಿಂದ ಆಗೆಲ್ಲಾ ಗಡ್ಡ, ಕೂದಲು ಟ್ರೆಂಡ್‌ ಇತ್ತು. ಪಾತ್ರಕ್ಕಾಗಿ ಗಡ್ಡ, ಕೂದಲು ಬಿಟ್ಟಿದ್ದು ನಿಜ. ಅದು ಸಖತ್‌ ಆಗಿ ವಕೌìಟ್‌ ಆಗಿದೆ’ ಎಂಬುದು ಅವರ ಮಾತು.

ನಿರ್ದೇಶಕ ಪ್ರಶಾಂತ್‌ ನೀಲ್‌ ಅವರು ಸಿನಿಮಾ ಎರಡನೇ ಭಾಗ ಆಗುತ್ತೆ ಆಂದುಕೊಂಡಿರಲಿಲ್ಲವಂತೆ. ಸಿನಿಮಾ ಚಿತ್ರೀಕರಣ ಆಗುತ್ತಲೇ ಹೊಸ ಯೋಚನೆ ಹುಟ್ಟಿಕೊಂಡು, ದೊಡ್ಡದ್ದಾಗಿದೆ. ಇದು ಎಲ್ಲಾ ಭಾಷೆಗೂ ಸಲ್ಲುವ ಕಥೆ. ಮುಖ್ಯವಾಗಿ ಇಲ್ಲೂ ತಾಯಿ, ಮಗನ ಸೆಂಟಿಮೆಂಟ್‌ ಇದೆ. ಟ್ರೇಲರ್‌ ನೋಡಿದಾಗ ಆ ಫೀಲಿಂಗ್ಸ್‌ ಗೊತ್ತಾಗುತ್ತೆ. ಚಿತ್ರೀಕರಣ ವೇಳೆ ಗಾಳಿ, ಮಳೆ ಆ ಧೂಳಿಗೆ ಜೂನಿಯರ್ ಬರೋಕೂ ಹಿಂದೆ ಮುಂದೆ ನೋಡಿದರು. ಪರಭಾಷೆಯಿಂದಲೂ ಜೂನಿಯರ್ ಕರೆಸಿ ಚಿತ್ರೀಕರಿಸಲಾಗಿದೆ.

ಕನ್ನಡಕ್ಕಷ್ಟೇ ಅಲ್ಲ, ಎಲ್ಲಾ ಭಾಷೆಗೂ “ಕೆಜಿಎಫ್’ ಹೊಸ ಬಗೆಯ ಚಿತ್ರ ಎನ್ನುವ ಪ್ರಶಾಂತ್‌ ನೀಲ್‌, ಇಂಥದ್ದೊಂದು ಚಿತ್ರ ಮಾಡೋಕೆ ಕಾರಣ ಅಮಿತಾಬ್‌ ಬಚ್ಚನ್‌. ನಾನು ಚಿಕ್ಕಂದಿನಿಂದಲೂ ಅಮಿತಾಬ್‌ ಬಚ್ಚನ್‌ ಚಿತ್ರ ನೋಡುತ್ತಿದ್ದೆ. ಆಗಲೇ, ನನಗೆ ಕನ್ನಡದಲ್ಲಿ ಹೊಸಬಗೆಯ ಚಿತ್ರ ಮಾಡುವ ಆಸೆ ಹುಟ್ಟುಕೊಂಡಿತ್ತು. ಅದು “ಕೆಜಿಎಫ್’ ಮೂಲಕ ಈಡೇರಿದೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.